AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸು ಕಟ್ಟದಿದ್ದರೆ ಅನ್​ಲೈನ್ ಪಾಠ ನಿಲ್ಲಿಸುವ ಬೆದರಿಕೆಯೊಡ್ಡಿದ ಖಾಸಗಿ ಶಾಲೆಗಳು!

ಪೋಷಕರು ತಮ್ಮ ಮಕ್ಕಳ ಫೀಸು ಕಟ್ಟದಿದ್ದರೆ ಅವರಿಗೆ ನೀಡುತ್ತಿರುವ ಆನ್​ಲೈನ್ ಪಾಠಗಳನ್ನು ನಿಲ್ಲಿಸುವುದಾಗಿ ಘೋಷಿಸಿದ ನಂತರ ಶಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಸೂಚಿಸುವುದಾಗಿ ಹೇಳಿದ್ದಾರೆ.

ಫೀಸು ಕಟ್ಟದಿದ್ದರೆ ಅನ್​ಲೈನ್ ಪಾಠ ನಿಲ್ಲಿಸುವ ಬೆದರಿಕೆಯೊಡ್ಡಿದ ಖಾಸಗಿ ಶಾಲೆಗಳು!
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 25, 2020 | 9:25 PM

ಶಾಲೆಗಳನ್ನು ಪುನರಾರಂಭಿಸುವ ಮತ್ತು ಆನ್​ಲೈನ್ ಕ್ಲಾಸ್​ಗಳನ್ನು ನಡೆಸುತ್ತಿರುವ ಖಾಸಗಿ ಶಾಲೆಗಳು, ವಿದ್ಯಾರ್ಥಿಗಳ ಪಾಲಕರಿಂದ ಫೀಸು ವಸೂಲಿ ಮಾಡಲು ಪ್ರಯತ್ನಿಸುತ್ತಿರುವ  ಬಗ್ಗೆ ಸರ್ಕಾರ ಇದುವರೆಗೆ ಯಾವುದೇ ನಿರ್ಧಾರಕ್ಕೆ ಬಾರದಿರುವುದು ಪೋಷಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಫೀಸು ಕಟ್ಟಿಸಿಕೊಳ್ಳುವ ವಿಷಯದಲ್ಲಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಖಾಸಗಿ ಶಾಲೆಗಳು ಫೀಸು ಕಟ್ಟದಿರುವ ವಿದ್ಯಾರ್ಥಿಗಳಿಗೆ ಆನ್​ಲೈನ್ ಪಾಠಗಳನ್ನು ನಿಲ್ಲಿಸುವುದಾಗಿ ಬೆದರಿಕೆಯೊಡ್ಡಿವೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಗಳ ಸಂಘಟನೆ ತೋಡಿಕೊಳ್ಳುತ್ತಿರುವ ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ, ಸಂಘಟನೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೇ ಪರಿಹಾರ ಸೂಚಿಸುವುದಾಗಿ ಹೇಳಿದರು.

ನವೆಂಬರ್ 27ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ‌ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿಯಲ್ಲಿರುವ ಸಾಧಕ-ಬಾಧಕಗಳನ್ನು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.

Published On - 9:18 pm, Wed, 25 November 20

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು