AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ

ಪೋಷಕರಿಗೆ ಫೀಸ್ ಕೇಳಿದ್ರೆ ಸಚಿವರೂ ದೂರು ನೀಡಿ ಅನ್ನೊದು ಎಷ್ಟರ ಮಟ್ಟಿಗೆ ಸರಿ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕದ ಬಗ್ಗೆ ನಿಗದಿಯಾಗಿಲ್ಲ. ಈಗ ಪೆಟ್ರೋಲ್, ಡೀಸೆಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆ ಶುಲ್ಕವನ್ನು ಏರಿಕೆ ಮಾಡಿಲ್ಲ. ನಾವು ಕಳೆದ ವರ್ಷದ ಬಾಕಿ ಶುಲ್ಕ ಪಾವತಿಗೆ ಆಗ್ರಹಿಸುತ್ತಿದ್ದೇವೆ.

ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ
ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Edited By: |

Updated on:Jun 13, 2021 | 1:08 PM

Share

ಬೆಂಗಳೂರು: ಶಿಕ್ಷಣ ಸಚಿವರು ದ್ವಂದ್ವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ಅಸಮಧಾನ ವ್ಯಕ್ತಪಡಿಸಿದೆ. ಶಿಕ್ಷಣ ಸಚಿವರು ಫೀಸ್ ವಿಚಾರದಲ್ಲಿ ದ್ವಂದ್ವ ನೀತಿಯ ಹೇಳಿಕೆ ನೀಡುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿದ್ದೇವೆ. ಪೋಷಕರು ಕಳೆದ ಮೂರು ವರ್ಷದಿಂದ ಫೀಸ್ ಸರಿಯಾಗಿ ಕಟುತ್ತಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ. ಫೀಸ್ ಹೆಚ್ಚುವರಿ ವಸೂಲಿ ಮಾಡುವ ಸಂಸ್ಥೆಗಳ ವಿರುದ್ಧ ಕ್ರಮವಹಿಸಲಿ ಎಂದು ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯಿಸಿದೆ.

ಪೋಷಕರಿಗೆ ಫೀಸ್ ಕೇಳಿದ್ರೆ ಸಚಿವರೂ ದೂರು ನೀಡಿ ಅನ್ನೊದು ಎಷ್ಟರ ಮಟ್ಟಿಗೆ ಸರಿ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕದ ಬಗ್ಗೆ ನಿಗದಿಯಾಗಿಲ್ಲ. ಈಗ ಪೆಟ್ರೋಲ್, ಡೀಸೆಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆ ಶುಲ್ಕವನ್ನು ಏರಿಕೆ ಮಾಡಿಲ್ಲ. ನಾವು ಕಳೆದ ವರ್ಷದ ಬಾಕಿ ಶುಲ್ಕ ಪಾವತಿಗೆ ಆಗ್ರಹಿಸುತ್ತಿದ್ದೇವೆ. ಈ ವರ್ಷದ ಕನಿಷ್ಠ ಶುಲ್ಕ ಕಟ್ಟಿ ದಾಖಲಾಗಲು ಹೇಳುತ್ತಿದ್ದೇವೆ. ಈಗ ಸಚಿವರು ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎನ್ನುತ್ತಿದ್ದಾರೆ. ಸಚಿವರು ಇಂಥಹ ಗೊಂದಲದ ಹೇಳಿಕೆ ನೀಡುವುದು ಬಿಡಬೇಕು. ಫೀಸ್ ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರೆ.

ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಇಂದು (ಜೂನ್ 13) ಮಧ್ಯಾಹ್ನ ಖಾಸಗಿ ಶಾಲಾ ಒಕ್ಕೂಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಖಾಸಗಿ ಶಾಲಾ ಒಕ್ಕೂಟ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ನಿರ್ಧರಿಸಿದ್ದು, ಸಭೆಯಲ್ಲಿ ಒಕ್ಕೂಟದ ಸರ್ವ ಸದಸ್ಯರು ಭಾಗಿಯಾಗಲಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ರುಪ್ಸಾ ಕರ್ನಾಟಕ ಆಕ್ರೋಶ ಕಾರ್ಪೊರೇಟ್ ಶಾಲೆಗಳು ಪೂರ್ತಿ ಶುಲ್ಕ ಕಟ್ಟಿಸಿಕೊಂಡಿವೆ. ಒಂದು ವರ್ಷದ ಪೂರ್ತಿ ಶುಲ್ಕವನ್ನ ಕಟ್ಟಿಸಿಕೊಂಡಿದ್ದಾರೆ. ಇಂತಹ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳದ್ದಕ್ಕೆ ರುಪ್ಸಾ ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ. ಕೆಲವೇ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವುದು ಸರಿಯಲ್ಲ. ಕಳೆದ‌ ವರ್ಷದ ಶುಲ್ಕ ನೀತಿಯನ್ನು ರುಪ್ಸಾ ಸ್ವಾಗತಿಸಿದೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದರು.

ಇದನ್ನೂ ಓದಿ

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು

(Private schools union expresses displeasure over education minister)

Published On - 10:56 am, Sun, 13 June 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್