AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಸೂಚನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ಅಡಿ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ ಒಟ್ಟು 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರಷ್ಟು ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಸಲು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚಿಸಲಾಗಿದೆ. 

371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಸೂಚನೆ
ಪ್ರಿಯಾಂಕ್ ಖರ್ಗೆ
ಪ್ರಸನ್ನ ಗಾಂವ್ಕರ್​
| Edited By: |

Updated on:Jan 04, 2024 | 8:58 PM

Share

ಬೆಂಗಳೂರು, ಜನವರಿ 04: 371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ (Kalyana-Karnataka) ಭಾಗದಲ್ಲಿ 371 (ಜೆ) ಅಡಿ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ ಒಟ್ಟು 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರಷ್ಟು ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಸಲು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚಿಸಲಾಗಿದೆ.

371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲಾಗಿದೆ.

ಇನ್ನೂ ಓದಿ: ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು

ಸಹಕಾರ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಇ-ಆಡಳಿತ ಮುಂತಾದ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದು, ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಇಂದಿನ ಸಭೆಯಲ್ಲಿ ಸೂಚಿಸಲಾಗಿದೆ.

ಸಭೆಯಲ್ಲಿ ತೆಗೆದುಕೊಂಡ ಇತರೇ ಪ್ರಮುಖ ತೀರ್ಮಾನಗಳು

  • ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ 371ಜೆ ಪ್ರಕಾರ ರಾಜ್ಯ ವೃಂದದಲ್ಲಿ ಶೇಕಡ 8ರಷ್ಟು ಹುದ್ದೆಗಳನ್ನು ನೀಡುವ ಬಗ್ಗೆ ಜೇಷ್ಠತಾ ಪಟ್ಟಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಪಟ್ಟಿ ಪ್ರಕಟಿಸಿ ಜೇಷ್ಠತಾ ಪಟ್ಟಿಯಲ್ಲಿ ಅಧಿಕಾರಿ, ನೌಕರರ ಹೆಸರಿನ ಮುಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ನಮೂದಿಸುವ ಮಾದರಿಯಲ್ಲಿಯೇ 371ಜೆ ಎಸ್ಸಿ, 371ಜೆ ಎಸ್ಟಿ, 371ಜೆ ಸಾಮಾನ್ಯ, 371ಜೆ ಮಹಿಳೆ ಎಂದು ನಮೂದಿಸಲು ಸೂಕ್ತ ಆದೇಶ ಹೊರಡಿಸಲು ಸೂಚನೆ.
  • ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಕರ ಖಾಲಿ ಹುದ್ದೆಗಳು, ಭರ್ತಿ ಮಾಡಬೇಕಾದ ಹುದ್ದೆಗಳ ಬಗ್ಗೆ ನಿಖರ ಮಾಹಿತಿ ಇಲ್ಲದಿರುವುದರಿಂದ ಕ್ರೂಢೀಕೃತ ಮಾಹಿತಿ ಸಲ್ಲಿಸಲು ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಪರಿಶೀಲಿಸಲು ಪ್ರತ್ಯೇಕ ಸಭೆ ಕರೆಯಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
  • ಬಳ್ಳಾರಿ ಜಿಲ್ಲೆಯನ್ನು ವಿಜಯನಗರ ಜಿಲ್ಲೆ ಎಂದು ಬದಲಿಸಿ ಆದೇಶ ಹೊರಡಿಸಲು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದೆ.
  • ವಿಧಾನ ಸಭೆ, ವಿಧಾನ ಪರಿಷತ್ತಿನ ಸಚಿವಾಲಯಗಳಲ್ಲಿ 371ಜೆ ಮೀಸಲಾತಿ ಅಳವಡಿಸಿರುವ ಬಗ್ಗೆ ಪೂರ್ಣ ವಿವರ ಪಡೆಯಲು ನಿರ್ಣಯಿಸಲಾಗಿದೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆಯವರಿಗೆ ಮುಂಬಡ್ತಿ ನೀಡುವಾಗ ಶೇಕಡ 8ರಷ್ಟು ಮೀಸಲಾತಿ ಕಡ್ಡಾಯವಾಗಿ ಪಾಲಿಸಲು ಸೂಚಿನೆ.
  • ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿ. ಇಲ್ಲಿ 371ಜೆ ನಿಯಮಗಳಂತೆ ಸ್ಥಳೀಯ ವೃಂದದ ಅಧಿಕಾರಿ ಮತ್ತು ನೌಕರರಿಗೆ ಮುಂಬಡ್ತಿ ಮತ್ತು ಸೇವಾ ಜೇಷ್ಠತೆ ಪರಿಗಣಿಸಲು ಬಗ್ಗೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:55 pm, Thu, 4 January 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!