ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂಬ ಪಟ್ಟಿ ಕಿತ್ತುಕೊಂಡಿದ್ದ ಪ್ರಿಯಾಂಕ್ ಖರ್ಗೆ: ನಾರಾಯಣಸ್ವಾಮಿ ಕಿಡಿ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ತಂದೆಯನ್ನು ಆಹುತಿ ಪಡೆದ ಮಗ. ಮಲ್ಲಿಕಾರ್ಜುನ ಖರ್ಗೆಯವರ ಸೋಲಿಲ್ಲದ ಸರದಾರ ಎಂಬ ಪಟ್ಟಿ ಕಿತ್ತುಕೊಂಡವರು. ಅವರ ದುರ್ನಡತೆಯಿಂದ ಜನ ಕುಪಿತಗೊಂಡು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರು ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂಬ ಪಟ್ಟಿ ಕಿತ್ತುಕೊಂಡಿದ್ದ ಪ್ರಿಯಾಂಕ್ ಖರ್ಗೆ: ನಾರಾಯಣಸ್ವಾಮಿ ಕಿಡಿ
ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂಬ ಪಟ್ಟಿ ಕಿತ್ತುಕೊಂಡಿದ್ದ ಪ್ರಿಯಾಂಕ್ ಖರ್ಗೆ: ನಾರಾಯಣಸ್ವಾಮಿ ಕಿಡಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 10, 2024 | 7:08 PM

ಬೆಂಗಳೂರು, ಅಕ್ಟೋಬರ್​​ 10: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಸೋಲಿಲ್ಲದ ಸರದಾರ ಎಂಬ ಪಟ್ಟಿಯನ್ನು ಕಿತ್ತುಕೊಂಡವರು ಪ್ರಿಯಾಂಕ್ ಖರ್ಗೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ತಂದೆಯನ್ನು ಆಹುತಿ ಪಡೆದ ಮಗ. ಅವರ ದುರ್ನಡತೆಯಿಂದ ಜನ ಕುಪಿತಗೊಂಡು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಲಿ ತೆಗೆದುಕೊಂಡರು ಎಂದು ಕಿಡಿಕಾರಿದ್ದಾರೆ.

ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್ ಸೇರಿ ಕಲಬುರಗಿ, ಯಾದಗಿರಿ ಭಾಗದಲ್ಲಿ ಕೆಆರ್​ಡಿಎಲ್​ನಿಂದ ಟೆಂಡರ್ ಹಾಕದೇ ತಮಗೆ ಬೇಕಾದವರಿಗೆ ವರ್ಕ್ ಆರ್ಡರ್ ಕೊಡುತ್ತಿದ್ದಾರೆ. ನಾವು ಏನೂ ಮಾಡದ ಸ್ಥಿತಿಯಲ್ಲಿ ಇದ್ದೇವೆ ಅಂತಾ ಕೆಆರ್​ಡಿಎಲ್ ಅಧಿಕಾರಿಗಳು ಹೇಳುತ್ತಿದ್ದಾರೆ. ಕಲ್ಯಾಣ ಕರ್ನಾಟಕದ 5000 ಸಾವಿರ ಕೋಟಿ ರೂ. ಅನುದಾನದಲ್ಲಿ ಎರಡೂವರೆ ಸಾವಿರ ಕೋಟಿ ರೂ. ಬಿಡುಗಡೆ ಆಗಿದೆ. ಇದರಲ್ಲಿ 40% ಕಮಿಷನ್ ಪಡೆದು ತೆಲಂಗಾಣ ಚುನಾವಣೆಗೆ 500 ಕೋಟಿ ರೂ. ಹಣ ಕೊಟ್ಟಿದ್ದಾರೆ ಎಂಬ ಆಪಾದನೆ ಈಗ ಬಂದಿದೆ ಎಂದರು.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ

ಇಷ್ಟು ಹಣ ಖರ್ಚು ಆಗಿದ್ದರೆ ಆ ಪ್ರಾಂತ್ಯ ಏಕೆ ಅಭಿವೃದ್ಧಿ ಆಗುತ್ತಿಲ್ಲ? ಇದು ತನಿಖೆ ಆಗಬೇಕು, ಸಿಬಿಐಗೆ ಕೊಡಬೇಕು. ಅಲ್ಲಿನ ಎಸ್​ಸಿಇಪಿ ಟಿಎಸ್ಪಿ ಹಣ ಕೂಡ ಇದೇ ರೀತಿ ನುಂಗಲಾಗಿದೆ. ಸರ್ಕಾರದಿಂದ ಹೋಗುವ ಹಣ ಹಂಚಿಕೊಂಡು ತಿನ್ನಲು ಕೆಕೆಆರ್​ಡಿಬಿಗೆ ಅಧ್ಯಕ್ಷರು ಬೇಕಾ? ಕೆಕೆಆರ್​ಡಿಬಿ ಆ ಭಾಗದ ಜನರಿಗೆ ಅನ್ಯಾಯ ‌ಮಾಡುವ ಸಂಸ್ಥೆ ಆಗಿದೆ. ಮಣ್ಣು ಚಲ್ಲು, ಬಿಲ್ ಮಾಡು ಇಷ್ಟೇ ಆಗಿದೆ ಅಲ್ಲಿ. ಯಾದಗಿರಿಯಿಂದ ಶಹಾಪುರದವರೆಗೆ ರಸ್ತೆ ಹೇಗಿದೆ ಅಂದರೆ ಗರ್ಭಿಣಿಯರು ಹೆರಿಗೆಗೆ ಆಸ್ಪತ್ರೆಗೆ ಹೋಗಬೇಕು ಅಂತಾನೇ ಇಲ್ಲ ಎಂದು ಹೇಳಿದ್ದಾರೆ.

ದಲಿತ ಸಿಎಂ ಬಗ್ಗೆ ಕಾಂಗ್ರೆಸ್​ನವರೇ ಸುಳಿವು ಕೊಟ್ಟಿದ್ದಾರೆ

ಕಾಂಗ್ರೆಸ್​ನಲ್ಲಿ ದಲಿತ ಸಿಎಂ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅಲ್ಲಿಗೆ ಕಾಂಗ್ರೆಸ್​ನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಅಂತಾ ಖಾತ್ರಿಯಾಯಿತು. ಬದಲಾವಣೆ ಆಗುತ್ತದೆ ಅಂತಾ ಕಾಂಗ್ರೆಸ್​ನವರೇ ಸುಳಿವು ಕೊಟ್ಟಂತೆ ಆಯಿತು. ದಲಿತರು ಸಿಎಂ ಆಗಬೇಕು ಅಂತಾ ಹಳೆಯ ಚರ್ಚೆ ಇದೆ. 2013 ರಲ್ಲಿ ದಲಿತರು ಸಿಎಂ ಆಗುತ್ತಾರೆ ಎಂದಾಗ ಎಲ್ಲರೂ ಸೇರಿ ಪರಮೇಶ್ವರ್ ಅವರನ್ನು ಸೋಲಿಸಿದರು. ಈಗ ಎತ್ತಿಕಟ್ಟಿ ಜಾರಕಿಹೊಳಿ ಅವರನ್ನು ತರುತ್ತಿರುವರು ಯಾರು? ಇಲ್ಲಿಯವರೆಗೆ ಪರಮೇಶ್ವರ್ ಹೆಸರು ಮಾತ್ರ ಓಡಾಡುತ್ತಿತ್ತು. ದಲಿತರ ನಡುವೆ ಎತ್ತಿಕಟ್ಟಿ ಕಚ್ಚಾಡಲು ಬಿಟ್ಟು ಮೂರನೇಯವರು ಆಟ ಕಟ್ಟಿದ ರೀತಿ ಕಾಂಗ್ರೆಸ್​ನಲ್ಲಿ ಕಾಣುತ್ತಿದೆ. ಇದಕ್ಕಾಗಿಯೇ ಕಾಂಗ್ರೆಸ್ ದಲಿತ ವಿರೋಧಿ ಎನ್ನುವುದು.

ಸಿಎಂ ವಿರುದ್ಧ ನಾರಾಯಣಸ್ವಾಮಿ ವಾಗ್ದಾಳಿ

ವಾಲ್ಮೀಕಿ ನಿಗಮ ಮತ್ತು‌ ಮುಡಾ ಎರಡೂ ಪ್ರಕರಣಗಳು ಸಿಎಂ ಭ್ರಷ್ಟಾಚಾರದಲ್ಲಿ ಇದ್ದಾರೆ ಎಂಬುದು ಸಾಬೀತು ಮಾಡುತ್ತದೆ. ಮುಡಾ ಪ್ರಕರಣದಲ್ಲಿ ಮಲ್ಲಿಕಾರ್ಜುನಸ್ವಾಮಿ ಅವರನ್ನು ಇಡಿ ವಿಚಾರಣೆ ನಡೆಸಲಿದೆ. ಇನ್ನು ಪಾರ್ವತಿ ಅವರನ್ನು ಕೂಡ ವಿಚಾರಣೆಗೆ ಕರೆಯುತ್ತಾರೆ. ನಂತರ ನಿಮ್ಮನ್ನು ಕೂಡಾ ಕರೆಯಬೇಕಲ್ವಾ? ಅದು ಹೇಗೆ ಸಿಎಂ ಆಗಿದ್ದುಕೊಂಡು ನೀವು ತನಿಖೆಗೆ ಹೋಗುತ್ತೀರಿ? ಇಡಿ ಕರೆಯುವ ಮೊದಲೇ ನೀವು ರಾಜೀನಾಮೆ ಕೊಟ್ಟು ಹೋಗಿ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್