AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಹಿಂದೂಪರ ಹೋರಾಟಗಾರನಿಂದ ದೂರು ದಾಖಲು

ರಾಜ್ಯ ಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಬೆನ್ನಲ್ಲೇ ಈಗ ನಡು ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ ಆರೋಪ ಕೇಳಿ ಬಂದಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್ ಮಸೀದಿ ಬಳಿ ರಸ್ತೆಯಲ್ಲೇ ನಮಾಜ್ ಮಾಡಿರುವ ಫೋಟೋ ಪತ್ತೆಯಾಗಿದೆ. ಘಟನೆ ಸಂಬಂಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ದೂರು ಸಲ್ಲಿಸಿದ್ದು ಸಿದ್ದಾಪುರ ಸ್ಟೇಷನ್ ಪೋಲಿಸರು ಎನ್ಸಿಆರ್ ದಾಖಲಿಸಿದ್ದಾರೆ.

ಬೆಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಹಿಂದೂಪರ ಹೋರಾಟಗಾರನಿಂದ ದೂರು ದಾಖಲು
ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Feb 29, 2024 | 8:49 AM

Share

ಬೆಂಗಳೂರು, ಫೆ.29: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ (Siddapura Ward) ಅತೀಕ್ ಮಸೀದಿ ಬಳಿ ಮುಸ್ಲಿಮರು (Muslims) ನಡು ರಸ್ತೆಯಲ್ಲಿ ನಮಾಜ್ (Namaz) ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅನುಮತಿ ಪಡೆಯದೆ ರಸ್ತೆಯಲ್ಲಿ ನಮಾಜ್ ಮಾಡಲಾಗಿದೆ ಎಂದು ಆರೋಪಿಸಿ ಮಸ್ಜಿದ್ ಮುಖ್ಯಸ್ಥರ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ (Tejas Gowda) ಎಂಬುವವರು ದೂರು ದಾಖಲಿಸಿದ್ದಾರೆ. ಸದ್ಯ ಮುಸ್ಲಿಮರು ರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಫೆಬ್ರವರಿ 25ರ ಭಾನುವಾರದಂದು ಅತೀಕ್ ಮಸೀದಿ ಬಳಿ ಮುಸ್ಲಿಮರು ರಸ್ತೆಯಲ್ಲೇ ಕೂತು ಪ್ರಾರ್ಥನೆ ಸಲ್ಲಿಸಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಸ್ಟೇಷನ್ ಪೋಲಿಸರು ಎನ್ಸಿಆರ್ ದಾಖಲಿಸಿದ್ದಾರೆ. ಸೋಮೇಶ್ವರ ನಗರ ಮುಖ್ಯರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಗಳಾದ ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳಿವೆ. ಈ ರಸ್ತೆಯಲ್ಲಿ ಆಂಬ್ಯುಲೆನ್ಸ್ ಸಂಚರಿಸುತ್ತವೆ. ರಸ್ತೆಯಲ್ಲಿ ನಮಾಜ್ ಮಾಡಿದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು. ಸಂಚಾರ ದಟ್ಟಣೆ ಉಂಟಾಗಿತ್ತು.

ಅನ್ಯ ಕೋಮಿನ ಭಾವನೆಗಳನ್ನು ಪ್ರಚೋದಿಸುವಂತೆ ಧಕ್ಕೆಯುಂಟಾಗುವಂತೆ ವರ್ತಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ಪ್ರಾರ್ಥನೆ ಮಾಡಿರುವುದು ಕಾನೂನು ಬಾಹಿರವಾಗಿರುತ್ತದೆ. ಆದ್ದರಿಂದ ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಿ. ಈ ರೀತಿ ಮತ್ತೆ ಮರುಕಳಿಸದಂತೆ ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಅವರಿಗೆ ತಿಳಿಸಿ ಕೊಡುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಹಿಂದೂಪರ ಹೋರಾಟಗಾರ ತೇಜಸ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಸೀದಿಯಲ್ಲಿ ಮಹಿಳೆ ನಮಾಜ್ ಮಾಡಿದ್ದ ಆರೋಪ: ಇಡೀ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ

Published On - 8:02 am, Thu, 29 February 24

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು