AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ […]

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ
ಸಾಧು ಶ್ರೀನಾಥ್​
|

Updated on: Sep 27, 2019 | 1:32 PM

Share

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರು ದಸರಾ ಸಂಬಂಧ ಭಿತ್ತಿಪತ್ರ ಮತ್ತು ಪ್ರಚಾರ ಪತ್ರಗಳಲ್ಲಿ ಹೆಚ್ಚಾಗಿ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಹೇರುತ್ತಿದ್ರೆ, ರಾಜ್ಯ ಸರ್ಕಾರ ಆಂಗ್ಲ ಭಾಷೆಯನ್ನು ಹೇರುತ್ತಿದೆ. ಇದು ಕನ್ನಡದ ದಸರಾನಾ? ಅಥವಾ ಇಂಗ್ಲಿಷ್​​ ದಸರಾನಾ? ಎಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ದಸರಾ ಪೋಸ್ಟರ್​ಗಳಲ್ಲಿ ಇನ್ಮುಂದೆ ಕನ್ನಡ ಭಾಷೆ ಮಾತ್ರ ಬಳಸಬೇಕೆಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ