AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ […]

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ
ಸಾಧು ಶ್ರೀನಾಥ್​
|

Updated on: Sep 27, 2019 | 1:32 PM

Share

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರು ದಸರಾ ಸಂಬಂಧ ಭಿತ್ತಿಪತ್ರ ಮತ್ತು ಪ್ರಚಾರ ಪತ್ರಗಳಲ್ಲಿ ಹೆಚ್ಚಾಗಿ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಹೇರುತ್ತಿದ್ರೆ, ರಾಜ್ಯ ಸರ್ಕಾರ ಆಂಗ್ಲ ಭಾಷೆಯನ್ನು ಹೇರುತ್ತಿದೆ. ಇದು ಕನ್ನಡದ ದಸರಾನಾ? ಅಥವಾ ಇಂಗ್ಲಿಷ್​​ ದಸರಾನಾ? ಎಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ದಸರಾ ಪೋಸ್ಟರ್​ಗಳಲ್ಲಿ ಇನ್ಮುಂದೆ ಕನ್ನಡ ಭಾಷೆ ಮಾತ್ರ ಬಳಸಬೇಕೆಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Follow Us
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?