ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ […]

ನಾಡಹಬ್ಬ ಮೈಸೂರು ದಸರಾದಲ್ಲಿ ಇಂಗ್ಲಿಷ್ ಬಳಕೆಗೆ ತೀವ್ರ ವಿರೋಧ
ಸಾಧು ಶ್ರೀನಾಥ್​

Updated on: Sep 27, 2019 | 1:32 PM

ಮೈಸೂರು: ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಒಂದೇ ರಾಷ್ಟ್ರ-ಒಂದೇ ಭಾಷೆ’ ಎಂಬ ಹೇಳಿಕೆಗೆ ಕರ್ನಾಟಕ ಸೇರಿದಂತೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕನ್ನಡನಾಡಿನಲ್ಲಿ ಕನ್ನಡ ಬಿಟ್ಟು ಹಿಂದೆ ಭಾಷೆ ಹೇರಿಕೆಗೆ ಕನ್ನಡ ಸಂಘಟನೆಗಳು ಸೇರಿದಂತೆ ರಾಜ್ಯದ ಜನ ಖಂಡಿಸಿದ್ದರು. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದರು. ಆದ್ರೆ, ಇದೀಗ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಇಂಗ್ಲಿಷ್​ ಪೋಸ್ಟರ್​, ಫ್ಲೆಕ್ಸ್​ ಬಳಸಿರುವುದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮೈಸೂರು ದಸರಾ ಸಂಬಂಧ ಭಿತ್ತಿಪತ್ರ ಮತ್ತು ಪ್ರಚಾರ ಪತ್ರಗಳಲ್ಲಿ ಹೆಚ್ಚಾಗಿ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನ ಹೇರುತ್ತಿದ್ರೆ, ರಾಜ್ಯ ಸರ್ಕಾರ ಆಂಗ್ಲ ಭಾಷೆಯನ್ನು ಹೇರುತ್ತಿದೆ. ಇದು ಕನ್ನಡದ ದಸರಾನಾ? ಅಥವಾ ಇಂಗ್ಲಿಷ್​​ ದಸರಾನಾ? ಎಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ದಸರಾ ಪೋಸ್ಟರ್​ಗಳಲ್ಲಿ ಇನ್ಮುಂದೆ ಕನ್ನಡ ಭಾಷೆ ಮಾತ್ರ ಬಳಸಬೇಕೆಂದು ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us