AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪರ ಘೋಷಣೆ ಆರೋಪ: ಡಿಜಿ&ಐಜಿಪಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ, FSL ವರದಿ ಬಿಡುಗಡೆಗೆ ಮನವಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕದನವನ್ನೇ ಸೃಷ್ಟಿಸಿದೆ. ಖಾಸಗಿ ಎಫ್​ಎಸ್​ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಸಾಬೀತಾಗಿದೆ ಅಂತಾ ಬಿಜೆಪಿ ಕಿಡಿಕಾರಿದ್ದು, ಇತ್ತ, FSL ವರದಿ ಬಂದಿಲ್ಲ. ಬಂದ್ರೆ ಮುಚ್ಚಿಡೋ ಪ್ರಶ್ನೆಯೇ ಇಲ್ಲ ಅಂತಾ ಕಾಂಗ್ರೆಸ್​ ನಾಯಕರು ತಿರುಗೇಟು ನೀಡಿದ್ದಾರೆ. ಇದೆಲ್ಲದರ ಮಧ್ಯೆ ಇಂದು ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ.

ಪಾಕ್​ ಪರ ಘೋಷಣೆ ಆರೋಪ: ಡಿಜಿ&ಐಜಿಪಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ, FSL ವರದಿ ಬಿಡುಗಡೆಗೆ ಮನವಿ
ಬಿಜೆಪಿ ಶಾಸಕರ ನಿಯೋಗ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 04, 2024 | 5:08 PM

Share

ಬೆಂಗಳೂರು, ಮಾರ್ಚ್​ 4: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಎಫ್​​ಎಸ್​ಎಲ್​​(FSL) ವರದಿ ಬಂದಿಲ್ಲ ಎಂದು ಕಾಂಗ್ರೆಸ್​​ ನಾಯಕರು ಹೇಳುತ್ತಿದ್ದಾರೆ. ಆದರೆ ವರದಿ ಬಹಿರಂಗಪಡಿಸಬೇಕು. ವಿಳಂಬವೇಕೆ ಎಂದು ಬಿಜೆಪಿ ಪ್ರಶ್ನಿಸಿದೆ. ಈ ವಿಚಾರವಾಗಿ ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಲಾಗಿದೆ. ಮೊದಲು FSL ಕಚೇರಿಗೆ ತೆರಳಲು ನಿರ್ಧರಿಸಿದ್ದ ಬಿಜೆಪಿ ನಿಯೋಗ ನಂತರ ಡಿಜಿ&ಐಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆ. ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜುರಿಂದ ಬೆಂಗಳೂರಿನ ನೃಪತುಂಗರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿ ಭೇಟಿ ನೀಡಿ ಶೀಘ್ರದಲ್ಲೇ FSL ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಎಫ್ಎಸ್ಎಲ್ ವರದಿ ಬಂದರೂ ಸರ್ಕಾರ ಮುಚ್ಚಿಡಲು ಪ್ರಯತ್ನ ನಡೆದಿದೆ ಎಂದ ನಂದೀಶ್ ರೆಡ್ಡಿ

ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಪ್ರತಿಕ್ರಿಯಿಸಿದ್ದು, 8 ದಿನ ಕಳೆದರೂ ಸರ್ಕಾರ ಎಫ್ಎಸ್ಎಲ್ ವರದಿ ಬಹಿರಂಗಪಡಿಸಿಲ್ಲ. ಎಫ್ಎಸ್ಎಲ್ ವರದಿ ಬಂದರೂ ಸರ್ಕಾರ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಹೀಗಾಗಿ ಬಿಜೆಪಿ ನಿಯೋಗದಿಂದ ಡಿಜಿ&ಐಜಿಪಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ

ಇದು ದೇಶದ ಭದ್ರತೆ, ವಿಧಾನಸೌಧದ ಭದ್ರತೆ ವಿಚಾರವಾಗಿದೆ. ಮನಸಾಕ್ಷಿ ಇರುವ ಸರ್ಕಾರವಾಗಿದ್ದರೆ 24 ಗಂಟೆಯಲ್ಲಿ ಕ್ರಮ ಆಗಿರುತ್ತಿತ್ತು. 2-3 ದಿನದಲ್ಲಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವಾಗಿದೆ. ಯಾವುದು ನಿಜ ಎಂದು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದಿದ್ದಾರೆ.

ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ

ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಆರೋಪ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ನಿನ್ನೆವರೆಗೂ ಎಫ್​ಎಸ್ಎಲ್​ ವರದಿ ಬಂದಿಲ್ಲ, ಬಂದಿದೆ ಅನ್ನೋ ವಿಚಾರವಾಗಿ ನಡೀತಿದ್ದ ಮಾತಿನ ಕದನಕ್ಕೆ ಇವತ್ತು ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಎಫ್​ಎಸ್​ಎಲ್​ ವರದಿ ಬಿಡುಗಡೆಗೆ ಆಗ್ರಹಿಸಿದ್ದ ಬಿಜೆಪಿ, ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ದೇಶದ್ರೋಹ ಕ್ಯಾನ್ಸರ್ ಇದ್ದ ಹಾಗೆ, ಆಪರೇಷನ್ ಮಾಡದಿದ್ದರೆ ದೇಶದ ತುಂಬ ಹರಡುತ್ತದೆ: ಪ್ರಮೋದ್ ಮುತಾಲಿಕ್

ಖಾಸಗಿ ಸಂಸ್ಥೆಯ ಎಫ್​​ಎಸ್​​ಎಲ್ ತಜ್ಞ ಫಣೀಂದ್ರ ತಯಾರಿಸಿರುವ ವರದಿಯನ್ನು ರಾಜ್ಯ ಬಿಜೆಪಿ ಘಟಕ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. Clue4 Evidence Forensic Investigation pvt. Ltd ಖಾಸಗಿ ಸಂಸ್ಥೆಯಲ್ಲಿ ಈ ವರದಿ ತಯಾರಿಸಲಾಗಿದೆ. ಖಾಸಗಿ ಎಫ್​ಎಸ್​ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು