AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ, ಇನ್ನಿಬ್ಬರಿಗೆ ನ್ಯಾಯಾಂಗ ಬಂಧನ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಓರ್ವ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ ನೀಡಿ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್​​ನಿಂದ ಆದೇಶ ಹೊರಡಿಸಲಾಗಿದೆ. ಮೂವರು ಆರೋಪಿಗಳನ್ನ ಕೋರ್ಟ್​ಗೆ ಹಾಜರುಪಡಿಸಲಾಗಿದ್ದು, ನಾಶಿಪುಡಿನನ್ನು 1 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮುನಾವರ್ ಹಾಗೂ ಇಲ್ತಾಜ್​​ಗೆ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ, ಇನ್ನಿಬ್ಬರಿಗೆ ನ್ಯಾಯಾಂಗ ಬಂಧನ
ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 06, 2024 | 3:33 PM

Share

ಬೆಂಗಳೂರು, ಮಾರ್ಚ್​ 6: ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಓರ್ವ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ ನೀಡಿ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್​​ನಿಂದ ಆದೇಶ ಹೊರಡಿಸಲಾಗಿದೆ. ಮೂವರು ಆರೋಪಿಗಳನ್ನ ಕೋರ್ಟ್​ಗೆ ಹಾಜರುಪಡಿಸಲಾಗಿದ್ದು, ನಾಶಿಪುಡಿನನ್ನು 1 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮುನಾವರ್ ಹಾಗೂ ಇಲ್ತಾಜ್​​ಗೆ ನ್ಯಾಯಾಂಗ ಬಂಧನ ಆದೇಶಿಸಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳ ಪೂರ್ವಾಪರ ವಿಚಾರಣೆ ಮಾಡಿದ್ದಾರೆ. ಈಗಾಗಲೇ ಆರೋಪಿಗಳ ಧ್ವನಿ ಪರೀಕ್ಷೆ ವರದಿಯನ್ನು ಎಫ್​ಎಸ್ಎಲ್​ ನೀಡಿದೆ. ಆದರೂ ಹೆಚ್ಚಿನ ಮಾಹಿತಿಗಾಗಿ ಅಹಮದಾಬಾದ್​ FSLಗೆ ಸ್ಯಾಂಪಲ್ ರವಾನೆ ಮಾಡಲಾಗಿದೆ.

ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗಿದೆ. ಆರೋಪಿಗಳ ಹೇಳಿಕೆ ಹೊರತಾಗಿ ಮತ್ತಷ್ಟು ಮಾಹಿತಿಗಾಗಿ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ಅವಶ್ಯಕತೆ ಇಲ್ಲದ ಕಾರಣ ವೈಜ್ಞಾನಿಕ ವಿಚಾರಗಳು ಬಂದ ನಂತರ ಹೆಚ್ಚಿನ ತನಿಖೆಗೆ ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಹಿನ್ನೆಲೆ: ಪಾಕಿಸ್ತಾನಕ್ಕೆ ಹೋಗಿ ಬಂದಿದ್ನಾ ಪ್ರಮುಖ ಆರೋಪಿ?

ಪ್ರಕರಣ ನಡೆದು 6 ದಿನದ ಬಳಿಕ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದರು. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿಯನ್ನ ವಿಧಾನಸೌಧ ಪೊಲೀಸರು ಅರೆಸ್ಟ್ ಮಾಡಿದ್ದರು. ಬಂಧಿತರಾಗಿರುವ ಮೂವರ ಪೈಕಿ, ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್​ ನಾಶಿಪುಡಿ ಮೊದಲ ಆರೋಪಿ ಆಗಿದ್ದಾನೆ. ಮುನಾವರ್ 2ನೇ ಆರೋಪಿಯಾಗಿದ್ದು, ದೆಹಲಿಯ ಕಿಶನ್​ಗಂಜ್ ನಿವಾಸಿ ಮೊಹಮ್ಮದ್​ ಇಲ್ತಾಜ್​ 3ನೇ ಆರೋಪಿಯನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ: ರಾಜ್ಯಸಭೆ ಕಾಂಗ್ರೆಸ್ ಸದಸ್ಯ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಒತ್ತಾಯ

ಬಂಧಿತರ ಪೈಕಿ ಒಬ್ಬ ಪಾಕಿಸ್ತಾನ ಅಂತಾ ಕೂಗಿದ್ದರೆ, ಉಳಿದ ಇಬ್ಬರು ಜಿಂದಾ ಬಾದ್, ಜಿಂದಾಬಾದ್ ಅಂತಾ ಕೂಗಿದ್ದಾರೆ ಅನ್ನೋದು ಪೊಲೀಸ್ ಮೂಲಗಳಿಂದ ಗೊತ್ತಾಗಿತ್ತು. ಆರೋಪಿಗಳ ಹೇಳಿಕೆ, ತನಿಖೆ ವೇಳೆ ಸಿಕ್ಕಿದ ಸಾಕ್ಷ್ಯಗಳು, FSL ವರದಿ, ಸಾಂದರ್ಭಿಕ ಸಾಕ್ಷ್ಯ ಆಧರಿಸಿ ಬಂಧನ ಮಾಡಿರುವುದಾಗಿ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು.

ಖಾಸಗಿ ಸಂಸ್ಥೆಯ FSL ವರದಿ ಸಂಚಲನ

ಆರೋಪಿಗಳ ಬಂಧನಕ್ಕೂ ಮುನ್ನವೇ ಬಿಜೆಪಿ ಬಾಂಬ್ ಸಿಡಿಸಿತ್ತು. ಖಾಸಗಿ FSL ವರದಿ ಬಿಡುಗಡೆ ಮಾಡಿ, ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾಗಿದೆ ಅಂತಾ ಆರೋಪ ಮಾಡಿತ್ತು. ಖಾಸಗಿ ಸಂಸ್ಥೆಯ ಎಫ್​​ಎಸ್​​ಎಲ್ ತಜ್ಞ ಫಣೀಂದ್ರ ತಯಾರಿಸಿರುವ ವರದಿಯನ್ನು ರಾಜ್ಯ ಬಿಜೆಪಿ ಘಟಕ ಟ್ವಿಟರ್​ನಲ್ಲಿ ಹಂಚಿಕೊಂಡಿತ್ತು. ಬಳಿಕ ಆರೋಪಿಗಳ ಬಂಧನದ ಬಳಿಕ ಸರ್ಕಾರದ ವಿರುದ್ಧ ಬಿಜೆಪಿ ಕಲಿಗಳು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Wed, 6 March 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?