AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ? ಈ ಅನುಮಾನಕ್ಕೆ ಕಾರಣಗಳಿವೆ

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು ಮುಚ್ಚಿಹಾಕಲು ದೊಡ್ಡ ಮಟ್ಟದಲ್ಲಿ ಯತ್ನ ನಡೆದಿತ್ತಾ ಎಂಬ ಅನುಮಾನ ಇದೀಗ ಮೂಡಿದೆ. ಇದಕ್ಕೆ ಅನೇಕ ಕಾರಣಗಳೂ ಇವೆ. ಘಟನೆ ನಡೆದ ಮರುದಿನವೇ ಆರೋಪಿಗಳ ಮೊಬೈಲ್​ನಲ್ಲಿದ್ದ ದತ್ತಾಂಶವನ್ನು ಡಿಲೀಟ್ ಮಾಡಲಾಗಿದೆ. ಆದರೆ, ಇದನ್ನು ಪೊಲೀಸರು ಮಾಡಿದ್ದಾರೆಯೇ ಅಥವಾ ಆರೋಪಿಗಳೇ ಮಾಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಇದೀಗ ಆ ಡಾಟಾ ರಿಟ್ರೀವ್ ಮಾಡಲು ಯತ್ನಿಸಲಾಗುತ್ತಿದೆ.

ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ? ಈ ಅನುಮಾನಕ್ಕೆ ಕಾರಣಗಳಿವೆ
ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ?
ಪ್ರಸನ್ನ ಗಾಂವ್ಕರ್​
| Edited By: |

Updated on: Mar 05, 2024 | 2:17 PM

Share

ಬೆಂಗಳೂರು, ಮಾರ್ಚ್​ 5: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿದ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ವಿಚಾರಣೆಯನ್ನು ವಿಧಾನಸೌಧ ಪೊಲೀಸರು (Vidhana Soudha Police) ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ 40 ಮಂದಿಯ ವಿಚಾರಣೆ ನಡೆಸಲಾಗಿದ್ದು, 15ಕ್ಕೂ ಹೆಚ್ಚು ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತಿಮವಾಗಿ ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಬಂಧಿತರನ್ನು ಮಾರ್ಚ್ 6ರವರೆಗೆ ಕಸ್ಟಡಿಗೆ ಪಡೆದಿರುವ ವಿಧಾನಸೌಧ ಪೊಲೀಸರು, ಆರೋಪಿಗಳಾದ ಮೊಹಮ್ಮದ್ ಶಫಿ ನಾಶಿಪುಡಿ, ಮುನಾವರ್ ಅಹ್ಮದ್, ಮೊಹಮ್ಮದ್ ಇಲ್ತಾಜ್‌ ಹಿನ್ನೆಲೆ ಕೆದಕುತ್ತಿದ್ದಾರೆ. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ದೊಡ್ಡ ಮಟ್ಟದ ಷಡ್ಯಂತ್ರ ನಡೆದಿತ್ತಾ ಎಂಬ ಅನುಮಾನ ಈಗ ಬಲವಾಗಿದೆ. ಇದಕ್ಕೆ ಕಾರಣವೂ ಇದೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗಳನ್ನ ರಕ್ಷಿಸಿ, ಫೆಬ್ರುವರಿ 27ರ ಮರುದಿನವೇ ಪ್ರಕರಣ ಮುಗಿಸಿಬಿಡಲು ಪೊಲೀಸರು ಯತ್ನಿಸಿದ್ದರೇ ಎಂಬ ಅನುಮಾನ ಕೆಲವು ನಡೆಗಳಿಂದ ವ್ಯಕ್ತವಾಗಿದೆ. ಯಾಕಂದರೆ, ಆರೋಪಿಗಳ ಮೊಬೈಲ್​ನಲ್ಲಿದ್ದ ಡಾಟಾವನ್ನು ಕೂಡಲೇ ಡಿಲೀಟ್ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರ ಜೊತೆಗಿದ್ದ ಫೋಟೋ, ವಿಡಿಯೋಗಳು, ಸಾಮಾಜಿಕ ಜಾಲತಾಣದ ಪ್ರೊಫೈಲ್ ಸೇರಿ ಎಲ್ಲವನ್ನೂ ಡಿಲೀಟ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಆರೋಪಿಗಳ ಮೊಬೈಲ್ ರಿಟ್ರೀವ್‌ಗೆ ಪೊಲೀಸರು ಮುಂದಾಗಿದ್ದಾರೆ. ಆದರೆ, ಪೊಲೀಸರೇ ಡಾಟಾ ಡಿಲೀಟ್ ಮಾಡಿದ್ದರೇ? ಆರೋಪಿಗಳೇ ಡಿಲೀಟ್ ಮಾಡಿದ್ದರೇ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ.

ಅಂದು ಘಟನೆ ನಡೆದ ಮರು ದಿನ ಡಿಲೀಟ್ ಆಗಿರುವ ಡಾಟಾವನನ್ನು ರಿಟ್ರೀವ್ ಮಾಡಲು ಇದೀಗ ಪೊಲೀಸರು ಮುಂದಾಗಿದ್ದಾರೆ. ಆರೋಪಿಗಳ ವಾಟ್ಸಾಪ್, ಟೆಲಿಗ್ರಾಂ ಡಾಟಾ ಸಂಗ್ರಹಕ್ಕೆ ಎಫ್​ಎಸ್​ಎಲ್​​ಗೆ ಮೊಬೈಲ್ ರವಾನಿಸಲಾಗಿದೆ. ಮೂವರಿಗೂ ರಾಷ್ಟ್ರ ವಿರೋಧಿ ಸಂಘಟನೆ ಲಿಂಕ್ ಇದೆಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಇದಲ್ಲದೇ, ವಿಧಾನಸೌಧಕ್ಕೆ ಈ ಮೂವರು ಪಾಸ್ ಇಲ್ಲದೇ ಪ್ರವೇಶ ಮಾಡಿರುವುದು ಬೆಳೆಕಿಗೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ದೂರು

ಈ ಮಧ್ಯೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನೂತನ ರಾಜ್ಯಸಭಾ ಸದಸ್ಯನ ಆಶೀರ್ವಸೇನ್ ವಿರುದ್ಧ ಬಿಜೆಪಿ ನಾಯಕರೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ಜತೆಗೆ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಕೂಡ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​

ನಾಸಿರ್ ಹುಸೇನ್ ಅವರ ವಿಜಯೋತ್ಸವದ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪಾಸ್ ಕೂಡ ಇಲ್ಲದೆ ವಿಧಾನಸೌಧ ಆವರಣ ಪ್ರವೇಶಿಸಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ