AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ? ಈ ಅನುಮಾನಕ್ಕೆ ಕಾರಣಗಳಿವೆ

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು ಮುಚ್ಚಿಹಾಕಲು ದೊಡ್ಡ ಮಟ್ಟದಲ್ಲಿ ಯತ್ನ ನಡೆದಿತ್ತಾ ಎಂಬ ಅನುಮಾನ ಇದೀಗ ಮೂಡಿದೆ. ಇದಕ್ಕೆ ಅನೇಕ ಕಾರಣಗಳೂ ಇವೆ. ಘಟನೆ ನಡೆದ ಮರುದಿನವೇ ಆರೋಪಿಗಳ ಮೊಬೈಲ್​ನಲ್ಲಿದ್ದ ದತ್ತಾಂಶವನ್ನು ಡಿಲೀಟ್ ಮಾಡಲಾಗಿದೆ. ಆದರೆ, ಇದನ್ನು ಪೊಲೀಸರು ಮಾಡಿದ್ದಾರೆಯೇ ಅಥವಾ ಆರೋಪಿಗಳೇ ಮಾಡಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಇದೀಗ ಆ ಡಾಟಾ ರಿಟ್ರೀವ್ ಮಾಡಲು ಯತ್ನಿಸಲಾಗುತ್ತಿದೆ.

ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ? ಈ ಅನುಮಾನಕ್ಕೆ ಕಾರಣಗಳಿವೆ
ಪಾಕಿಸ್ತಾನ​ ಪರ ಘೋಷಣೆ: ಪ್ರಕರಣ ಮುಚ್ಚಿಹಾಕಲು ನಡೆದಿತ್ತಾ ಮಹಾ ಷಡ್ಯಂತ್ರ?
ಪ್ರಸನ್ನ ಗಾಂವ್ಕರ್​
| Edited By: |

Updated on: Mar 05, 2024 | 2:17 PM

Share

ಬೆಂಗಳೂರು, ಮಾರ್ಚ್​ 5: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿದ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ವಿಚಾರಣೆಯನ್ನು ವಿಧಾನಸೌಧ ಪೊಲೀಸರು (Vidhana Soudha Police) ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ 40 ಮಂದಿಯ ವಿಚಾರಣೆ ನಡೆಸಲಾಗಿದ್ದು, 15ಕ್ಕೂ ಹೆಚ್ಚು ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಂತಿಮವಾಗಿ ಮೂವರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಬಂಧಿತರನ್ನು ಮಾರ್ಚ್ 6ರವರೆಗೆ ಕಸ್ಟಡಿಗೆ ಪಡೆದಿರುವ ವಿಧಾನಸೌಧ ಪೊಲೀಸರು, ಆರೋಪಿಗಳಾದ ಮೊಹಮ್ಮದ್ ಶಫಿ ನಾಶಿಪುಡಿ, ಮುನಾವರ್ ಅಹ್ಮದ್, ಮೊಹಮ್ಮದ್ ಇಲ್ತಾಜ್‌ ಹಿನ್ನೆಲೆ ಕೆದಕುತ್ತಿದ್ದಾರೆ. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ದೊಡ್ಡ ಮಟ್ಟದ ಷಡ್ಯಂತ್ರ ನಡೆದಿತ್ತಾ ಎಂಬ ಅನುಮಾನ ಈಗ ಬಲವಾಗಿದೆ. ಇದಕ್ಕೆ ಕಾರಣವೂ ಇದೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗಳನ್ನ ರಕ್ಷಿಸಿ, ಫೆಬ್ರುವರಿ 27ರ ಮರುದಿನವೇ ಪ್ರಕರಣ ಮುಗಿಸಿಬಿಡಲು ಪೊಲೀಸರು ಯತ್ನಿಸಿದ್ದರೇ ಎಂಬ ಅನುಮಾನ ಕೆಲವು ನಡೆಗಳಿಂದ ವ್ಯಕ್ತವಾಗಿದೆ. ಯಾಕಂದರೆ, ಆರೋಪಿಗಳ ಮೊಬೈಲ್​ನಲ್ಲಿದ್ದ ಡಾಟಾವನ್ನು ಕೂಡಲೇ ಡಿಲೀಟ್ ಮಾಡಲಾಗಿತ್ತು. ಕಾಂಗ್ರೆಸ್ ನಾಯಕರ ಜೊತೆಗಿದ್ದ ಫೋಟೋ, ವಿಡಿಯೋಗಳು, ಸಾಮಾಜಿಕ ಜಾಲತಾಣದ ಪ್ರೊಫೈಲ್ ಸೇರಿ ಎಲ್ಲವನ್ನೂ ಡಿಲೀಟ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಆರೋಪಿಗಳ ಮೊಬೈಲ್ ರಿಟ್ರೀವ್‌ಗೆ ಪೊಲೀಸರು ಮುಂದಾಗಿದ್ದಾರೆ. ಆದರೆ, ಪೊಲೀಸರೇ ಡಾಟಾ ಡಿಲೀಟ್ ಮಾಡಿದ್ದರೇ? ಆರೋಪಿಗಳೇ ಡಿಲೀಟ್ ಮಾಡಿದ್ದರೇ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ.

ಅಂದು ಘಟನೆ ನಡೆದ ಮರು ದಿನ ಡಿಲೀಟ್ ಆಗಿರುವ ಡಾಟಾವನನ್ನು ರಿಟ್ರೀವ್ ಮಾಡಲು ಇದೀಗ ಪೊಲೀಸರು ಮುಂದಾಗಿದ್ದಾರೆ. ಆರೋಪಿಗಳ ವಾಟ್ಸಾಪ್, ಟೆಲಿಗ್ರಾಂ ಡಾಟಾ ಸಂಗ್ರಹಕ್ಕೆ ಎಫ್​ಎಸ್​ಎಲ್​​ಗೆ ಮೊಬೈಲ್ ರವಾನಿಸಲಾಗಿದೆ. ಮೂವರಿಗೂ ರಾಷ್ಟ್ರ ವಿರೋಧಿ ಸಂಘಟನೆ ಲಿಂಕ್ ಇದೆಯಾ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಇದಲ್ಲದೇ, ವಿಧಾನಸೌಧಕ್ಕೆ ಈ ಮೂವರು ಪಾಸ್ ಇಲ್ಲದೇ ಪ್ರವೇಶ ಮಾಡಿರುವುದು ಬೆಳೆಕಿಗೆ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ದೂರು

ಈ ಮಧ್ಯೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನೂತನ ರಾಜ್ಯಸಭಾ ಸದಸ್ಯನ ಆಶೀರ್ವಸೇನ್ ವಿರುದ್ಧ ಬಿಜೆಪಿ ನಾಯಕರೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ಜತೆಗೆ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಕೂಡ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​

ನಾಸಿರ್ ಹುಸೇನ್ ಅವರ ವಿಜಯೋತ್ಸವದ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪಾಸ್ ಕೂಡ ಇಲ್ಲದೆ ವಿಧಾನಸೌಧ ಆವರಣ ಪ್ರವೇಶಿಸಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್