AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಜಿ ಪರಮೇಶ್ವರ್​​

​ವಿಧಾನಸೌಧದ ಒಳಗೆ ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ ​ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ವರದಿ ಬಹಿರಂಗಪಡಿಸಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿ ಇದು ಖಾಸಗಿ ಸಂಸ್ಥೆ ವರದಿಯಾಗಿದ್ದು, ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಜಿ ಪರಮೇಶ್ವರ್​​
ಗೃಹ ಸಚಿವ ಪರಮೇಶ್ವರ್​​
ಪ್ರಸನ್ನ ಗಾಂವ್ಕರ್​
| Edited By: |

Updated on: Mar 04, 2024 | 11:19 AM

Share

ಬೆಂಗಳೂರು, ಮಾರ್ಚ್​​ 04: ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ (FSL)​​ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ (G Parmeshwar)​​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಎಫ್​ಎಸ್​ಎಲ್​ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜಿ. ಪರಮೇಶ್ವರ್​, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್​​ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್​ ವಿಚಾರವಾಗಿ ಮಾತನಾಡಿದ ಅವರು, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್​ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್​ಎಸ್​​ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ

ಜಾತಿಗಣತಿ ವರದಿ ವಿಚಾರವಾಗಿ ಮಾತನಾಡಿದ ಅವರು. ಮುಖ್ಯಮಂತ್ರಿಗಳೇ ಹೇಳಿದ್ದಾರೆ, ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡಲಾಗುತ್ತದೆ. ವಿರೋಧ ಮಾಡುವುದು, ಪರವಾಗಿ ಮಾತಾಡುವುದುಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದಿದ್ದೇ. ವರದಿ ತರಿಸಿಕೊಂಡ‌ಮೇಲೆ ಲಾಜಿಕ್ ಎಂಡ ಆಗಬೇಕು. ಇಲ್ಲ ರಿಜೆಕ್ಟ್ ಮಾಡಬೇಕು. ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ ಎಂದರು.

ಬಾಂಬ್​ ಬ್ಲಾಸ್ಟ್​​ ತನಿಖೆಯಲ್ಲಿ ಡಿಸಿಪಿಗಳು ಜವಾಬ್ದಾರಿಯನ್ನು ನಿರ್ವಾಹಿಸಬೇಕು. ದಿಟ್ಟತನ ಪ್ರದರ್ಶನ ಮಾಡಿ ಫೀಲ್ಡ್‌ನಲ್ಲಿ ಕಾರ್ಯನಿರ್ವಾಹಿಸಬೇಕು. ಸಾರ್ವಜನಿಕರ ವಿಶ್ವಾಸವನ್ನ ಡಿಸಿಪಿಗಳು ಗಳಿಸಬೇಕು. ಅಗತ್ಯವಾದ ಸ್ಥಳಗಳಲ್ಲಿ ಒಂದು ತಿಂಗಳೊಳಗೆ ಸಿಸಿಟಿವಿ ಅಳವಡಿಕೆ ಮಾಡಿ. ತಕ್ಷಣವೇ ಅದರ ವ್ಯತ್ಯಾಸವನ್ನು ಕಾಣಬೇಕು ಎಂದು ಜಿ ಪರಮೇಶ್ವರ್​ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್