AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ನಿಷೇದಾಜ್ಞೆ ಮತ್ತೆ ಮುಂದುವರಿಕೆ; ಎಸ್​ಡಿಪಿಐ ಸಮಾವೇಶದಲ್ಲಿ ಚಾಕು ಇರಿತ ಪ್ರಕರಣದ ಆರೋಪಿಗಳು

ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ತಾಲೂಕಿನಾದ್ಯಂತ ನಾಳೆ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಸೇಲ್ವಮಣಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ ನಿಷೇದಾಜ್ಞೆ ಮತ್ತೆ ಮುಂದುವರಿಕೆ; ಎಸ್​ಡಿಪಿಐ ಸಮಾವೇಶದಲ್ಲಿ ಚಾಕು ಇರಿತ ಪ್ರಕರಣದ ಆರೋಪಿಗಳು
ಎಸ್​ಡಿಪಿಐ ಸಮಾವೇಶದಲ್ಲಿ ಚಾಕು ಇರಿತ ಪ್ರಕರಣದ ಆರೋಪಿಗಳು
TV9 Web
| Updated By: Rakesh Nayak Manchi|

Updated on:Aug 19, 2022 | 7:57 AM

Share

ಶಿವಮೊಗ್ಗ: ವೀರ ಸಾವರ್ಕರ್​​ ಫ್ಲೆಕ್ಸ್ ಗಲಾಟೆ ಮತ್ತು ಪ್ರೇಮ್​ಸಿಂಗ್​ಗೆ ಚಾಕು ಇರಿತ ಪ್ರಕರಣ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಾರಿ ಮಾಡಲಾದ ನಿಷೇಧಾಜ್ಞೆಯನ್ನು ಶನಿವಾರ ಬೆಳಗ್ಗೆವರೆಗೆ ಮುಂದುವರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ತಾಲೂಕಿನಾದ್ಯಂತ ನಾಳೆ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಸೇಲ್ವಮಣಿ ಆದೇಶ ಹೊರಡಿಸಿದ್ದಾರೆ. ಅದಾಗ್ಯೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಚಾಕು ಇರಿತ ಪ್ರಕರಣದ ಆರೋಪಿಗಳಿಗೆ ಎಸ್​ಡಿಪಿಐ ನಂಟು

ನಿನ್ನೆಯಷ್ಟೇ ಎಸ್​ಡಿಪಿಐ ಪತ್ರಿಕಾಗೋಷ್ಠಿ ಕರೆದು ಚಾಕು ಪ್ರಕರಣದ ಆರೋಪಿಗಳಿಗೆ ಎಸ್​ಡಿಪಿಐ ನಂಟು ಇಲ್ಲ ಎಂದಿದ್ದರು. ಇದರ ಬೆನ್ನಲ್ಲೆ ಆರೋಪಿಗಳಾದ ಜಬೀವುಲ್ಲಾ ಮತ್ತು ನದೀಮ್ ಎಂಬವರು ಎಸ್​ಡಿಪಿಐ, ಪಿಎಫ್​ಐ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಈಗ ನದೀಮ್ ಮತ್ತು ಮತ್ತೋರ್ವ ಆರೋಪಿ ತನ್ವೀರ್ ಎಸ್​ಡಿಪಿಐ ಸಮಾವೇಶದಲ್ಲಿ ಭಾಗಿಯಾಗಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.

ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಗಾಂಧಿ ಬಜಾರ್​ನಲ್ಲಿ ಗಲಾಟೆಗೆ ಉಂಟಾಗಿತ್ತು. ಈ ಘಟನೆ ವೇಳೆ ಪ್ರೇಮ್ ಸಿಂಗ್ ಎಂಬವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಜಬೀವುಲ್ಲಾ, 2ನೇ ಆರೋಪಿಯಾಗಿರುವ ತನ್ವೀರ್ ಹಾಗೂ ಮೂರನೇ ಆರೋಪಿ ನದೀಮ್ ಎಂಬವರನ್ನು ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದು, ಗಲಾಟೆ ಹಾಗೂ ಚಾಕು ಇರಿತದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 am, Fri, 19 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ