AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಾರಿಕಾ ವಲಯದ 9,823 ಕೋಟಿ ರೂ. ಮೊತ್ತದ ಪ್ರಸ್ತಾವನೆಗಳಿಗೆ ಸಿಎಂ ನೇತೃತ್ವದ ಸಭೆ ಅನುಮೋದನೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಚಿವರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಕೈಗಾರಿಕಾ ವಲಯದ ವಿವಿಧ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಯಾರೆಲ್ಲ ಇದ್ದರು? ಯಾವೆಲ್ಲ ಪ್ರಸ್ತಾವನೆಗಳಿಗೆ ಅನುಮೋದನೆ ದೊರೆಯಿತು? ಏನೇನು ಚರ್ಚೆಗಳು ನಡೆದವು ಎಂಬ ಮಾಹಿತಿ ಇಲ್ಲಿದೆ.

ಕೈಗಾರಿಕಾ ವಲಯದ 9,823 ಕೋಟಿ ರೂ. ಮೊತ್ತದ ಪ್ರಸ್ತಾವನೆಗಳಿಗೆ ಸಿಎಂ ನೇತೃತ್ವದ ಸಭೆ ಅನುಮೋದನೆ
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ
Ganapathi Sharma
|

Updated on: Dec 23, 2024 | 3:39 PM

Share

ಬೆಂಗಳೂರು, ಡಿಸೆಂಬರ್ 23: ಕರ್ನಾಟಕದ ವಿವಿಧ ಕೈಗಾರಿಕಾ ವಲಯಗಳ 10 ಪ್ರಸ್ತಾವನೆಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರಲ್ಲಿ ಒಟ್ಟು 9,823 ಕೋಟಿ ರೂ. ಮೊತ್ತದ ಯೋಜನೆಗಳು ಸೇರಿವೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್​ ಸೇರಿದಂತೆ ಉತ್ಪಾದನಾ ವಲಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು.

ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್​​​ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ 3,425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಪಾಲು ನೀಡುವ ಕುರಿತು ಪರಿಶೀಲಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು. ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನುಸರಿಸುತ್ತಿರುವ ನಿಯಮ ಪರಿಶೀಲನೆ ನಡೆಸಲು ಸೂಚಿಸಲಾಯಿತು.

ಜಮೀನು ಪಡೆದು ಕೈಗಾರಿಕೆ ಆರಂಭಿಸದಿದ್ದರೆ ದಂಡ?

ಕೈಗಾರಿಕೆ ಆರಂಭಿಸಲು ಕೆಐಎಡಿಬಿಯಿಂದ ಜಮೀನು ಪಡೆದು ತಟಸ್ಥರಾದರೆ ದಂಡ ವಿಧಿಸುವ ಬಗ್ಗೆಯೂ ಪರಿಶೀಲನೆಗೆ ಸಭೆಯಲ್ಲಿ ಸೂಚಿಸಲಾಯಿತು. ನಿಗದಿತ ಅವಧಿಯಲ್ಲಿ ಕೈಗಾರಿಕೆ ಆರಂಭಿಸದೆ ತಟಸ್ಥವಾಗಿದ್ದರೆ ದಂಡ ವಿಧಿಸುವುದೂ ಸೇರಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶನ ನೀಡಲಾಯಿತು.

ಇದನ್ನೂ ಓದಿ: ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಕೈಗಾರಿಕೆ ಕಾರ್ಯನಿರ್ವಹಣೆ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ವರದಿ: ಈರಣ್ಣ ಬಸವ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್