AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​​: ಸಿದ್ದರಾಮಯ್ಯ ವಿರುದ್ಧ ಯಾವೆಲ್ಲಾ ಸೆಕ್ಷನ್? ಇಲ್ಲಿದೆ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಪಾಳಯದಲ್ಲಿ ಕಾನೂನು ಹೋರಾಟದ ಚಟುವಟಿಕೆ ಬಿರುಸುಗೊಂಡಿದೆ. ಸಿದ್ದರಾಮಯ್ಯ ಕೂಡ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಯಾವ್ಯಾವ ಸೆಕ್ಷನ್​​​ಗಳಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​​: ಸಿದ್ದರಾಮಯ್ಯ ವಿರುದ್ಧ ಯಾವೆಲ್ಲಾ ಸೆಕ್ಷನ್? ಇಲ್ಲಿದೆ ವಿವರ
ಮುಡಾ ಹಗರಣ: ವಿಡಿಯೋ ಸಮೇತ ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Aug 17, 2024 | 4:32 PM

Share

ಬೆಂಗಳೂರು, ಆಗಸ್ಟ್​ 17: ಮುಡಾದಲ್ಲಿ (muda) ನಡೆದಿದೆ ಎನ್ನಲಾದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಮೊದಲ ಬಾರಿಗೆ ಕಾನೂನು ಸಂಕೋಲೆಯಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಕಾನೂನು ಸಮರ ಕೂಡ ಸಾರಿದ್ದಾರೆ. ಯಾವ್ಯಾವ ಸೆಕ್ಷನ್​​​ಗಳಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7: ಅಧಿಕಾರ ದುರ್ಬಳಕೆ ಮಾಡಿಕೊಂಡು ಅನುಚಿತ ಲಾಭ ಪಡೆಯುವುದು ಕನಿಷ್ಟ 3 ವರ್ಷದಿಂದ ಗರಿಷ್ಟ 7 ವರ್ಷ ಶಿಕ್ಷೆ ಇದೆ. ಸೆಕ್ಷನ್ 9: ವಾಣಿಜ್ಯ ಸಂಸ್ಥೆಗೆ ಅನುಚಿತ ಅನುಕೂಲ ಮಾಡಿಕೊಡುವುದು ಅಪರಾಧ. ಸೆಕ್ಷನ್ 11: ಸರ್ಕಾರಿ ಸೇವಕ ತನ್ನ ಕಾರ್ಯಕ್ಕೆ ಅನುಚಿತ ಲಾಭ ಪಡೆಯುವುದು ಕನಿಷ್ಟ 6 ತಿಂಗಳಿನಿಂದ ಗರಿಷ್ಟ 5 ವರ್ಷ ಶಿಕ್ಷೆಗೆ ಅವಕಾಶವಿದೆ.

ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ಸೋಮವಾರ ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕೆಪಿಸಿಸಿ ಸೂಚನೆ

ಸೆಕ್ಷನ್ 12: ಭ್ರಷ್ಟಾಚಾರ ತಡೆ ಕಾಯ್ದೆಯ ಯಾವುದೇ ಅಪರಾಧಕ್ಕೆ ಪ್ರಚೋದನೆ ನೀಡುವುದು. ಕನಿಷ್ಟ 3 ವರ್ಷಗಳಿಂದ ಗರಿಷ್ಟ 7 ವರ್ಷಗಳವರೆಗೆ ಶಿಕ್ಷೆ. ಸೆಕ್ಷನ್ 15: ತಮ್ಮ ಅಧಿಕಾರವ್ಯಾಪ್ತಿಯನ್ನು ದುರ್ಬಳಕೆ ಮಾಡಿ ತಮಗಾಗಲಿ ಅಥವಾ ತಮಗೆ ಬೇಕಾದವರಿಗಾಗಲೀ ಅಕ್ರಮ ಲಾಭ ಮಾಡಿಕೊಡಲು ಯತ್ನಿಸುವುದು. ಕನಿಷ್ಟ 2 ವರ್ಷಗಳಿಂದ ಗರಿಷ್ಟ 5 ವರ್ಷಗಳವರೆಗೆ ಶಿಕ್ಷೆ ಇದೆ.

ಬಿಎನ್ಎಸ್ ಕಾಯ್ದೆ ಸೆಕ್ಷನ್ 59: ಒಂದು ಕೃತ್ಯವನ್ನು ತಡೆಯಬೇಕಾದ ಜವಾಬ್ದಾರಿಯುಳ್ಳ ಸರ್ಕಾರಿ ಸೇವಕ ಆ ಕೃತ್ಯವನ್ನು ತಡೆಯದೇ ಅದನ್ನು ಮುಚ್ಚಿಡುವುದು, ಮೂಲ ಅಪರಾಧದ ಅರ್ಧದಷ್ಟು ಶಿಕ್ಷೆ ಇದೆ. ಸೆಕ್ಷನ್ 61: ಅಕ್ರಮ ನಡೆಸಲು ಒಳಸಂಚು ರೂಪಿಸುವುದು, ಮೂಲ ಅಪರಾಧದಷ್ಟೇ ಶಿಕ್ಷೆ ಇದೆ. ಸೆಕ್ಷನ್ 62: ಜೈಲು ಶಿಕ್ಷೆಗೆ ಅವಕಾಶ ಇರುವಂತಹ ಅಪರಾಧಗಳನ್ನು ಮಾಡಲು ಪ್ರಯತ್ನಿಸುವುದು, ಮೂಲ ಅಪರಾಧದ ಅರ್ಧದಷ್ಟು ಶಿಕ್ಷೆ ವಿಧಿಸಲಾಗುತ್ತದೆ.

ಸೆಕ್ಷನ್ 201: ದಾಖಲೆ ತಯಾರಿಸುವ ಜವಾಬ್ದಾರಿಯುಳ್ಳ ಸರ್ಕಾರಿ ಸೇವಕ ಮತ್ತೊಬ್ಬನಿಗೆ ಹಾನಿಯಾಗುವಂತಹ ತಪ್ಪು ದಾಖಲೆ ಸೃಷ್ಟಿಸುವುದು. 3 ವರ್ಷಗಳವರೆಗೆ ಶಿಕ್ಷೆ ಇದೆ. ಸೆಕ್ಷನ್ 227: ಸತ್ಯ ಹೇಳುವ ಪ್ರಮಾಣ ಸ್ವೀಕರಿಸಿದ ಸರ್ಕಾರಿ ಸೇವಕ ಸುಳ್ಳು ಮಾಹಿತಿ ನೀಡುವುದು. ಸೆಕ್ಷನ್ 228: ಸುಳ್ಳು ಸಾಕ್ಷ್ಯ ಸೃಷ್ಟಿಸುವುದು. ಸೆಕ್ಷನ್ 229: ಉದ್ದೇಶಪೂರ್ವಕ ಸುಳ್ಳು ದಾಖಲೆ ಸೃಷ್ಟಿಗೆ 3 ವರ್ಷಗಳವರೆಗೆ ಶಿಕ್ಷೆ ನೀಡಲಾಗುತ್ತದೆ.

ಇದನ್ನೂ ಓದಿ: ರಾಜ್ಯಪಾಲರ ನಡೆ ಸಂವಿಧಾನಬಾಹಿರ, ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ಸೆಕ್ಷನ್ 239: ಒಂದು ಕೃತ್ಯ ನಡೆದಿದೆ ಎಂದು ತಿಳಿದ ನಂತರವೂ ಅದರ ಮಾಹಿತಿ ನೀಡದೇ ಮುಚ್ಚಿಡುವುದು ಅಪರಾಧ 6 ತಿಂಗಳವರೆಗೆ ಶಿಕ್ಷೆ ಇದೆ. 314: ಚರಾಸ್ತಿಯನ್ನು ಅಕ್ರಮವಾಗಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡರೆ 2 ವರ್ಷಗಳವರೆಗೆ ಶಿಕ್ಷೆ. 316(5): ಸರ್ಕಾರಿ ಸೇವಕನಿಗೆ ಒಂದು ಆಸ್ತಿಯ ಜವಾಬ್ದಾರಿ ನೀಡಿದಾಗ ಅದನ್ನು ದುರುಪಯೋಗಪಡಿಸಿ ನಂಬಿಕೆ ದ್ರೋಹ ಮಾಡುವುದು 10 ವರ್ಷಗಳವರೆಗೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲುನ ಇಲ್ಲಿ ಕ್ಲಿಕ್ ಮಾಡಿ.

Published On - 4:32 pm, Sat, 17 August 24

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ