ಪ್ರಾಸಿಕ್ಯೂಷನ್​ ವಿಚಾರ: ಸಿದ್ದರಾಮಯ್ಯ ವೈಯಕ್ತಿಕವಾಗಿ ಹೋರಾಡಬೇಕೇ ಹೊರತು ಸಿಎಂ ಆಗಲ್ಲ, ಲೆಹರ್‌ ಸಿಂಗ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿಚಾರ ಇದೀಗ ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್​, ಪ್ರಕರಣದ ವಿಚಾರವಾಗಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ಹೋರಾಟ ಮಾಡಬೇಕೇ ಹೊರತು, ಸಿಎಂ ಆಗಿಯಲ್ಲ ಎಂದು ಹೇಳಿದ್ದಾರೆ.

ಪ್ರಾಸಿಕ್ಯೂಷನ್​ ವಿಚಾರ: ಸಿದ್ದರಾಮಯ್ಯ ವೈಯಕ್ತಿಕವಾಗಿ ಹೋರಾಡಬೇಕೇ ಹೊರತು ಸಿಎಂ ಆಗಲ್ಲ, ಲೆಹರ್‌ ಸಿಂಗ್
ಪ್ರಾಸಿಕ್ಯೂಷನ್​ ವಿಚಾರ: ಸಿದ್ದರಾಮಯ್ಯ ವೈಯಕ್ತಿಕವಾಗಿ ಹೋರಾಡಬೇಕೇ ಹೊರತು ಸಿಎಂ ಆಗಲ್ಲ, ಲೆಹರ್‌ ಸಿಂಗ್

Updated on: Aug 17, 2024 | 7:08 PM

ಬೆಂಗಳೂರು, ಆಗಸ್ಟ್​ 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (muda) ನಡೆದಿದೆ ಎನ್ನಲಾದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವಾಗಿ ಸದ್ಯ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಯಾಗಿದೆ. ಮುಡಾ ಹಗರಣ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ಆರೋಪವಾಗಿದ್ದು ಅವರು ಒಬ್ಬ ವ್ಯಕ್ತಿಯಾಗಿ ಹೋರಾಡಬೇಕೇ ಹೊರತು ಸಿಎಂ ಆಗಿ ಅಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್​ ಕಿಡಿಕಾರಿದ್ದಾರೆ.

ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಲೆಹರ್‌ ಸಿಂಗ್​, ಮುಡಾ ಹಗರಣ ಸಿದ್ದರಾಮಯ್ಯ ಸೇರಿದಂತೆ ಅವರ ಪತ್ನಿ ಮತ್ತು ಕುಟುಂಬದ ವಿರುದ್ಧದ ಸಂಪೂರ್ಣವಾಗಿ ವೈಯಕ್ತಿಕ ಆರೋಪವಾಗಿದೆ. ಇದು ಅವರ ಒಡೆತನದ ಖಾಸಗಿ ಭೂಮಿಗೆ ಸಂಬಂಧಿಸಿರುವುದು. ಹಾಗಾಗಿ ಅವರು ವೈಯಕ್ತಿಕವಾಗಿ ಹೋರಾಟ ಮಾಡಬೇಕೇ ಹೊರತು, ರಾಜ್ಯ ಸರ್ಕಾರದ ಮುಖ್ಯಮಂತ್ರಿ ಆಗಿ ಅಲ್ಲ. ಇದರ ವ್ಯತ್ಯಾಸ ಸಿಎಂ ಅವರಿಗೆ ತಿಳಿದಿದೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ತಮ್ಮ ಪತ್ನಿ ಹೆಸರಲ್ಲಿ ಅಕ್ರಮವಾಗಿ ಸೈಟ್‌ ಪಡೆದಿದ್ದಾರೆ ಅಂತಾ ಬಿಜೆಪಿ ಆರೋಪಿಸಿತ್ತು. ಅಷ್ಟೇ ಅಲ್ಲ ಬೆಂಗಳೂರಿನಿಂದ ಮೈಸೂರು ವರೆಗೂ ಪಾದಯಾತ್ರೆ ನಡೆಸಿತ್ತು. ಇದರ ನಡುವೆ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್‌ ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​​: ಸಿದ್ದರಾಮಯ್ಯ ವಿರುದ್ಧ ಯಾವೆಲ್ಲಾ ಸೆಕ್ಷನ್? ಇಲ್ಲಿದೆ ವಿವರ

ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜಭವನದ ಕದ ತಟ್ಟಿದ್ದರು. ಇವರ ದೂರು ಪರಿಗಣಿಸಿದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇಂದು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅನುಮತಿ ಬೆನ್ನಲ್ಲೇ ದೂರುದಾರ ಅಬ್ರಾಹಿಂ ಇಂದು ರಾಜ್ಯಪಾಲರನ್ನ ಭೇಟಿ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us