AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಸಿಕ್ಯೂಷನ್ ಸಂಕಷ್ಟ: ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಕರಣಗಳ ವ್ಯತ್ಯಾಸವೇನು? ಇಲ್ಲಿದೆ ವಿವರ

ಒಂದೆಡೆ ಮುಡಾ ಹಗರಣ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಮತ್ತೊಂದೆಡೆ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಎಸ್​​ಐಟಿ ಅನುಮತಿ ಕೇಳಿದೆ. ಇವೆರಡು ಪ್ರಕರಣಗಳಲ್ಲಿ ಬಹಳ ವ್ಯತ್ಯಾಸವಿದೆ. ಅದೇನು ಎಂಬ ಮಾಹಿತಿ ಇಲ್ಲಿದೆ.

ಪ್ರಾಸಿಕ್ಯೂಷನ್ ಸಂಕಷ್ಟ: ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಕರಣಗಳ ವ್ಯತ್ಯಾಸವೇನು? ಇಲ್ಲಿದೆ ವಿವರ
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:Aug 21, 2024 | 2:18 PM

Share

ಬೆಂಗಳೂರು, ಆಗಸ್ಟ್ 21: ಕೇಂದ್ರ ಹೆಚ್​​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಕಾಲದ ಪ್ರಕರಣ ಈಗ ಮುನ್ನೆಲೆಗೆ ಬಂದಿದೆ. ಹಳೇ ಕೇಸ್​ಗೆ ಪ್ರಾಸಿಕ್ಯೂಷನ್ ಅನುಮತಿ ಕೊಡಬೇಕು ಎಂದು ಲೋಕಾಯುಕ್ತ ಎಸ್​ಐಟಿ ರಾಜಭವನದ ಮೊರೆ ಹೋಗಿದೆ. ಒಂದು ವೇಳೆ ರಾಜ್ಯಪಾಲರು ಕುಮಾರಸ್ವಾಮಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೊಟ್ಟರೆ ಕುಮಾರಸ್ವಾಮಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಏನಿದು ಕುಮಾರಸ್ವಾಮಿ ವಿರುದ್ಧದ ಪ್ರಕರಣ?

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬಳ್ಳಾರಿಯ ಸಂಡೂರಿನಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​ಗೆ ಭೂಮಿ ಮಂಜೂರು ಮಾಡಿದ್ದರು. ನಿಯಮ ಉಲ್ಲಂಘಿಸಿ 550 ಹೆಕ್ಟೇರ್​ ಭೂಮಿ ಮಂಜೂರು ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು 2011ರ ಲೋಕಾಯುಕ್ತರ ವರದಿಯಲ್ಲಿ ಕೂಡ ಉಲ್ಲೇಖ ಮಾಡಲಾಗಿತ್ತು. ಅದಾದ ಬಳಿಕ ಲೋಕಾಯುಕ್ತರು ತನಿಖೆ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. 2023ರ ನವೆಂಬರ್ 21ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವಂತೆ ಕೇಳಿದ್ದರು. ಇದೀಗ ಬರೋಬ್ಬರಿ 8 ತಿಂಗಳ ಬಳಿಕ ಲೋಕಾಯುಕ್ತರು ಎಸ್​ಐಟಿಗೆ ಸ್ಪಷ್ಟನೆ ಕೇಳಿದ್ದಾರೆ. ಇದೇ ವರ್ಷ ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದಾರೆ. ಪತ್ರಕ್ಕೆ ಪ್ರತಿಕ್ರಿಯೆ ಕೊಟ್ಟ ಎಸ್​ಐಟಿ ಮುಖ್ಯಸ್ಥರು, ರಾಜ್ಯಪಾಲರಿಗೆ ಆಗಸ್ಟ್ 21ರಂದು ಸ್ಪಷ್ಟನೆ ನೀಡಿದ್ದಾರೆ. ಈ ಸ್ಪಷ್ಟನೆಯಲ್ಲೇ ಚಾರ್ಜ್​ಶೀಟ್​​ ಸಲ್ಲಿಸಲು ಅನುಮತಿ ಕೊಡಿ ಎಂದು ಲೋಕಾಯುಕ್ತರು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಪ್ರಕರಣಕ್ಕೂ ಇದಕ್ಕೂ ಏನು ವ್ಯತ್ಯಾಸ?

ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೂ ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೂ ವ್ಯತ್ಯಾಸ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ 50:50ರ ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಿರುವುದಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ನಿಯಮ ಉಲ್ಲಂಘಿಸಿ ಸೈಟ್ ಪಡೆದುಕೊಂಡ ಆರೋಪ ಸಿದ್ದರಾಮಯ್ಯ ಮೇಲಿದೆ. ಈ ವಿಚಾರದಲ್ಲಿ ತನಿಖೆಯೇ ನಡೆದಿಲ್ಲ.

ಆದರೆ, ಕುಮಾರಸ್ವಾಮಿ ಪ್ರಕರಣ ತುಸು ಭಿನ್ನವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ತನಿಖೆ ಮುಗಿದು ವರದಿ ಸಿದ್ಧವಾಗಿದೆ. ಆದರೆ, ವರದಿ ಸಿದ್ಧವಾಗಿ ಹಲವಾರು ತಿಂಗಳುಗಳ ಬಳಿಕ ಈಗ ಚಾರ್ಜ್​ಶೀಟ್ ಸಲ್ಲಿಕೆಗೆ ಅನುಮತಿ ಕೋರಲಾಗಿದೆ.

ಇಷ್ಟು ದಿನ ಸುಮ್ಮನಿದ್ದಿದ್ದೇಕೆ ಎಸ್​ಐಟಿ: ಬಿಜೆಪಿ ಪ್ರಶ್ನೆ

ಈ ಮಧ್ಯೆ, ಕುಮಾರಸ್ವಾಮಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಎಸ್​ಐಟಿ ಈಗ ಅನುಮತಿ ಕೇಳಿರುವುದನ್ನು ಜೆಡಿಎಸ್ ಮಿತ್ರ ಪಕ್ಷ ಬಿಜೆಪಿ ಪ್ರಶ್ನಿಸಿದೆ. ದ್ವೇಷದ ರಾಜಕಾರಣ ಎಂದು ಟೀಕಿಸಿರುವ ಬಿಜೆಪಿ, ಇಷ್ಟು ದಿನ ಯಾಕೆ ಸುಮ್ಮನಿದ್ದಿರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಇದಕ್ಕೆಲ್ಲಾ ನಾನು ಹೆದರುವುದಿಲ್ಲ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಒಟ್ಟಿನಲ್ಲಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟಿದ್ದಾಗಿದೆ. ಆದರೆ ಇದು ರಾಜಕೀಯ ಸಂಘರ್ಷಕ್ಕೆ ಮತ್ತೊಮ್ಮೆ ನಾಂದಿ ಹಾಡುವುದು ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Wed, 21 August 24

Follow Us
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!