AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಸಿಕ್ಯೂಷನ್ ಸಂಕಷ್ಟ: ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಕರಣಗಳ ವ್ಯತ್ಯಾಸವೇನು? ಇಲ್ಲಿದೆ ವಿವರ

ಒಂದೆಡೆ ಮುಡಾ ಹಗರಣ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಮತ್ತೊಂದೆಡೆ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಎಸ್​​ಐಟಿ ಅನುಮತಿ ಕೇಳಿದೆ. ಇವೆರಡು ಪ್ರಕರಣಗಳಲ್ಲಿ ಬಹಳ ವ್ಯತ್ಯಾಸವಿದೆ. ಅದೇನು ಎಂಬ ಮಾಹಿತಿ ಇಲ್ಲಿದೆ.

ಪ್ರಾಸಿಕ್ಯೂಷನ್ ಸಂಕಷ್ಟ: ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಕರಣಗಳ ವ್ಯತ್ಯಾಸವೇನು? ಇಲ್ಲಿದೆ ವಿವರ
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:Aug 21, 2024 | 2:18 PM

Share

ಬೆಂಗಳೂರು, ಆಗಸ್ಟ್ 21: ಕೇಂದ್ರ ಹೆಚ್​​ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಕಾಲದ ಪ್ರಕರಣ ಈಗ ಮುನ್ನೆಲೆಗೆ ಬಂದಿದೆ. ಹಳೇ ಕೇಸ್​ಗೆ ಪ್ರಾಸಿಕ್ಯೂಷನ್ ಅನುಮತಿ ಕೊಡಬೇಕು ಎಂದು ಲೋಕಾಯುಕ್ತ ಎಸ್​ಐಟಿ ರಾಜಭವನದ ಮೊರೆ ಹೋಗಿದೆ. ಒಂದು ವೇಳೆ ರಾಜ್ಯಪಾಲರು ಕುಮಾರಸ್ವಾಮಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೊಟ್ಟರೆ ಕುಮಾರಸ್ವಾಮಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಏನಿದು ಕುಮಾರಸ್ವಾಮಿ ವಿರುದ್ಧದ ಪ್ರಕರಣ?

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬಳ್ಳಾರಿಯ ಸಂಡೂರಿನಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​ಗೆ ಭೂಮಿ ಮಂಜೂರು ಮಾಡಿದ್ದರು. ನಿಯಮ ಉಲ್ಲಂಘಿಸಿ 550 ಹೆಕ್ಟೇರ್​ ಭೂಮಿ ಮಂಜೂರು ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು 2011ರ ಲೋಕಾಯುಕ್ತರ ವರದಿಯಲ್ಲಿ ಕೂಡ ಉಲ್ಲೇಖ ಮಾಡಲಾಗಿತ್ತು. ಅದಾದ ಬಳಿಕ ಲೋಕಾಯುಕ್ತರು ತನಿಖೆ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. 2023ರ ನವೆಂಬರ್ 21ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವಂತೆ ಕೇಳಿದ್ದರು. ಇದೀಗ ಬರೋಬ್ಬರಿ 8 ತಿಂಗಳ ಬಳಿಕ ಲೋಕಾಯುಕ್ತರು ಎಸ್​ಐಟಿಗೆ ಸ್ಪಷ್ಟನೆ ಕೇಳಿದ್ದಾರೆ. ಇದೇ ವರ್ಷ ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದಾರೆ. ಪತ್ರಕ್ಕೆ ಪ್ರತಿಕ್ರಿಯೆ ಕೊಟ್ಟ ಎಸ್​ಐಟಿ ಮುಖ್ಯಸ್ಥರು, ರಾಜ್ಯಪಾಲರಿಗೆ ಆಗಸ್ಟ್ 21ರಂದು ಸ್ಪಷ್ಟನೆ ನೀಡಿದ್ದಾರೆ. ಈ ಸ್ಪಷ್ಟನೆಯಲ್ಲೇ ಚಾರ್ಜ್​ಶೀಟ್​​ ಸಲ್ಲಿಸಲು ಅನುಮತಿ ಕೊಡಿ ಎಂದು ಲೋಕಾಯುಕ್ತರು ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಪ್ರಕರಣಕ್ಕೂ ಇದಕ್ಕೂ ಏನು ವ್ಯತ್ಯಾಸ?

ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೂ ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೂ ವ್ಯತ್ಯಾಸ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ 50:50ರ ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಿರುವುದಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ನಿಯಮ ಉಲ್ಲಂಘಿಸಿ ಸೈಟ್ ಪಡೆದುಕೊಂಡ ಆರೋಪ ಸಿದ್ದರಾಮಯ್ಯ ಮೇಲಿದೆ. ಈ ವಿಚಾರದಲ್ಲಿ ತನಿಖೆಯೇ ನಡೆದಿಲ್ಲ.

ಆದರೆ, ಕುಮಾರಸ್ವಾಮಿ ಪ್ರಕರಣ ತುಸು ಭಿನ್ನವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ತನಿಖೆ ಮುಗಿದು ವರದಿ ಸಿದ್ಧವಾಗಿದೆ. ಆದರೆ, ವರದಿ ಸಿದ್ಧವಾಗಿ ಹಲವಾರು ತಿಂಗಳುಗಳ ಬಳಿಕ ಈಗ ಚಾರ್ಜ್​ಶೀಟ್ ಸಲ್ಲಿಕೆಗೆ ಅನುಮತಿ ಕೋರಲಾಗಿದೆ.

ಇಷ್ಟು ದಿನ ಸುಮ್ಮನಿದ್ದಿದ್ದೇಕೆ ಎಸ್​ಐಟಿ: ಬಿಜೆಪಿ ಪ್ರಶ್ನೆ

ಈ ಮಧ್ಯೆ, ಕುಮಾರಸ್ವಾಮಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಗೆ ಎಸ್​ಐಟಿ ಈಗ ಅನುಮತಿ ಕೇಳಿರುವುದನ್ನು ಜೆಡಿಎಸ್ ಮಿತ್ರ ಪಕ್ಷ ಬಿಜೆಪಿ ಪ್ರಶ್ನಿಸಿದೆ. ದ್ವೇಷದ ರಾಜಕಾರಣ ಎಂದು ಟೀಕಿಸಿರುವ ಬಿಜೆಪಿ, ಇಷ್ಟು ದಿನ ಯಾಕೆ ಸುಮ್ಮನಿದ್ದಿರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಇದಕ್ಕೆಲ್ಲಾ ನಾನು ಹೆದರುವುದಿಲ್ಲ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಒಟ್ಟಿನಲ್ಲಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟಿದ್ದಾಗಿದೆ. ಆದರೆ ಇದು ರಾಜಕೀಯ ಸಂಘರ್ಷಕ್ಕೆ ಮತ್ತೊಮ್ಮೆ ನಾಂದಿ ಹಾಡುವುದು ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Wed, 21 August 24

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು