AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಂಚಿನ ಗ್ರಾಮಗಳಿಗೆ ರಾತ್ರಿ ಬದಲು ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸಿ: ಈಶ್ವರ್ ಖಂಡ್ರೆ ಮನವಿ

ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸುವಂತೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಟದಿಂದ ವನ್ಯಜೀವಿ-ಮಾನವ ಸಂಘರ್ಷ ಉಂಟಾಗುತ್ತಿರುವುದರಿಂದ ರಾತ್ರಿ ಬದಲು ಹಗಲಿನಲ್ಲೇ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದ್ದಾರೆ.

ಕಾಡಂಚಿನ ಗ್ರಾಮಗಳಿಗೆ ರಾತ್ರಿ ಬದಲು ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸಿ: ಈಶ್ವರ್ ಖಂಡ್ರೆ ಮನವಿ
ಈಶ್ವರ್ ಖಂಡ್ರೆ ಮತ್ತು ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 12, 2023 | 5:07 PM

Share

ಬೆಂಗಳೂರು, ನ.12: ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಟದಿಂದ ವನ್ಯಜೀವಿ-ಮಾನವ ಸಂಘರ್ಷ ಉಂಟಾಗುತ್ತಿದೆ. ಹೀಗಾಗಿ ರಾತ್ರಿ ಬದಲು ಹಗಲಿನಲ್ಲೇ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದ ಖಂಡ್ರೆ, ರಾಜ್ಯಾದ್ಯಂತ ಕಾಡಿನಂಚಿನ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡುಪ್ರಾಣಿ ರಾತ್ರಿ ಹೊತ್ತಿನಲ್ಲೇ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಕಾಡಿನಂಚಿನ ಗ್ರಾಮಗಳಿಗೆ ರಾತ್ರಿ ವೇಳೆ 3 ಫೇಸ್ ವಿದ್ಯುತ್ ಪೂರೈಸಿದರೆ ರೈತರು ಪಂಪ್‌ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ಹೋಗುತ್ತಾರೆ. ಈ ವೇಳೆ ಕಾಡು ಪ್ರಾಣಿಗಳು ಕೂಡ ಸಂಚರಿಸುತ್ತವೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುತ್ತಿದೆ. ಹೀಗಾಗಿ ಇಂತಹ ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲೇ 3 ಫೇಸ್ ವಿದ್ಯುತ್ ಪೂರೈಕೆ ಮಾಡುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಹಾಗೂ ಹಗಲಿನಲ್ಲಿ ಪೂರೈಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ