AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್​ ದುರಂತದಲ್ಲಿ ಸತ್ತವರ ಕುಟುಂಬಕ್ಕೆ ತಕ್ಷಣ 2 ಲಕ್ಷ ರೂಪಾಯಿ ಪರಿಹಾರ ಕೊಡಿ: ಹೈಕೋರ್ಟ್ ವಿಭಾಗೀಯ ಪೀಠ

ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತಕ್ಷಣಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ನೀವು ನಿರ್ಧರಿಸಿರುವ ಪರಿಹಾರ ತಕ್ಷಣ ನೀಡಿ, ಪರಿಹಾರದ ಪ್ರಮಾಣದ ಬಗ್ಗೆ ನಂತರ ವಿಚಾರಣೆ ಮಾಡಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಚಾಮರಾಜನಗರ ಆಕ್ಸಿಜನ್​ ದುರಂತದಲ್ಲಿ ಸತ್ತವರ ಕುಟುಂಬಕ್ಕೆ ತಕ್ಷಣ 2 ಲಕ್ಷ ರೂಪಾಯಿ ಪರಿಹಾರ ಕೊಡಿ: ಹೈಕೋರ್ಟ್ ವಿಭಾಗೀಯ ಪೀಠ
ಕರ್ನಾಟಕ ಹೈಕೋರ್ಟ್​
Skanda
|

Updated on: May 20, 2021 | 1:57 PM

Share

ಚಾಮರಾಜನಗರ: ಆಕ್ಸಿಜನ್​ ಕೊರತೆಯ ಕಾರಣ ಮೇ 2ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತಕ್ಷಣಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ನೀವು ನಿರ್ಧರಿಸಿರುವ ಪರಿಹಾರ ತಕ್ಷಣ ನೀಡಿ, ಪರಿಹಾರದ ಪ್ರಮಾಣದ ಬಗ್ಗೆ ನಂತರ ವಿಚಾರಣೆ ಮಾಡಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಘಟನೆಯ ವಿವರ: ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಅದರ ಪರಿಣಾಮ 24 ಜನ ಮೃತಪಟ್ಟಿದ್ದಾರೆ ಎನ್ನಲಾಗಿದ್ದರೂ ನಂತರ ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ಉಲ್ಲೇಖಿಸಲಾಗಿತ್ತು.

ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ತಿಳಿಸಲಾಗಿತ್ತು. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಪ್ರಕರಣ; ತನಿಖಾ ತಂಡ ವರದಿ ನೀಡಿದ್ರೂ ಸರ್ಕಾರ ಸೈಲೆಂಟ್, ಜೀವ ಹಿಂಡಿದವರಿಗೆ ಶಿಕ್ಷೆ ಯಾವಾಗ? 

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನ; ಹೈಕೋರ್ಟ್​ಗೆ ವರದಿ ಸಲ್ಲಿಕೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ