AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ

ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವು ನಡೆದು ಇಂದಿಗೆ ಸುಮಾರು ದಿನಗಳು ಕಳೆದಿವೆ. ಪ್ರಕರಣ ತನಿಖೆಯ ಜವಾಬ್ದಾರಿಯನ್ನ ಹೊತ್ತ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕು ಮಾಡಿದ್ದಾರೆ. ಹೀಗಾಗಿ ಯಾದಗಿರಿಗೆ ಭೇಟಿ ನೀಡಿರುವ ಎಡಿಜಿಪಿ ನೇತೃತ್ವದ ಸಿಐಡಿ ತಂಡ ಪರಶುರಾಮ ಘಟನೆ ಬಗ್ಗೆ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ
ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ
ಅಮೀನ್​ ಸಾಬ್​
| Edited By: |

Updated on: Aug 17, 2024 | 6:02 PM

Share

ಯಾದಗಿರಿ, ಆಗಸ್ಟ್​ 17: ಪಿಎಸ್ಐ ಪರಶುರಾಮ (PSI Parashuram) ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ (cid) ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ.

ಪರಶುರಾಮ ಮಾವ ವೆಂಕಟಸ್ವಾಮಿರಿಂದ ಮಾಹಿತಿ ಪಡೆದ ಸಿಐಡಿ

ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ ಕೊಣೆ ಪರಿಶೀಲನೆ ಮಾಡಿದ್ದಾರೆ. ನಂತರ ಎಸ್​​​ಪಿ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಸಾಯುವ ಮುನ್ನ ಪರಶುರಾಮ ಯಾರನ್ನು ಭೇಟಿ ಮಾಡಿದ್ದರು ಎಂಬ ಹಲವು ವಿಚಾರಗಳ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಹಾಗೂ ಯಾದಗಿರಿ ಪೊಲೀಸ್ ಅಧಿಕಾರಿಗಳಿಂದ ಎಡಿಜಿಪಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಕಚೇರಿಯಲ್ಲಿ ಸಿಐಡಿ ತಲಾಶ್, ಪಿಎಸ್​ಐ ಪರಶುರಾಮ್ ಭೇಟಿ ಬಗ್ಗೆ ಮಾಹಿತಿ ಸಂಗ್ರಹ

ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಪರಶುರಾಮ ಮಾವ ವೆಂಕಟಸ್ವಾಮಿ, ಬೆಳಗ್ಗೆ ಸಿಐಡಿ ಅಧಿಕಾರಿಗಳು ಫೋನ್ ಮಾಡಿ ಬರಲು ಹೇಳಿದ್ದರು. ಅವರು ಏನು ಕೇಳಿದ್ದಾರೆ ಎಲ್ಲಾ ಹೇಳಿದ್ದೇನೆ ಎಂದಿದ್ದಾರೆ.

ಇತ್ತೀಚೆಗೆ ಯಾದಗಿರಿ ನಗರದ ಲಾಲ್ ಬಹದ್ದೂರ ಶಾಸ್ತ್ರಿ ವೃತ್ತದ ಬಳಿ ಇರುವ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಕಚೇರಿಗೆ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತನಿಖಾ ತಂಡ ಭೇಟಿ ನೀಡಿ ಇಡೀ ಕಚೇರಿಯನ್ನು ಪರಿಶೀಲನೆ ಮಾಡಿದ್ದರು.

ಇದನ್ನೂ ಓದಿ: PSI ಪರಶುರಾಮ ಸಾವು ಕೇಸ್​: ಶಾಸಕ ಚೆನ್ನಾರೆಡ್ಡಿ ವಿರುದ್ಧ ಕ್ರಮಕ್ಕೆ ಪೊಲೀಸರ ಹಿಂದೇಟು!

ಪಿಎಸ್‌ಐ ನಿಗೂಢ ಸಾವಿಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪಣ್ಣಗೌಡ ಕಾರಣ ಅಂತಾ ಪಿಎಸ್‌ಐ ಪತ್ನಿ ಕೇಸ್‌ ದಾಖಲಿಸಿದ್ದಾರೆ. ಕೇಸ್‌ ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್ಡ್ ಆಫ್‌ ಮಾಡಿಕೊಂಡು ನಾಪತ್ತೆ ಆಗಿರುವ ತಂದೆ ಮಗ ಪತ್ತೆ ಆಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?