AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ

ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವು ನಡೆದು ಇಂದಿಗೆ ಸುಮಾರು ದಿನಗಳು ಕಳೆದಿವೆ. ಪ್ರಕರಣ ತನಿಖೆಯ ಜವಾಬ್ದಾರಿಯನ್ನ ಹೊತ್ತ ಸಿಐಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕು ಮಾಡಿದ್ದಾರೆ. ಹೀಗಾಗಿ ಯಾದಗಿರಿಗೆ ಭೇಟಿ ನೀಡಿರುವ ಎಡಿಜಿಪಿ ನೇತೃತ್ವದ ಸಿಐಡಿ ತಂಡ ಪರಶುರಾಮ ಘಟನೆ ಬಗ್ಗೆ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ
ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ
ಅಮೀನ್​ ಸಾಬ್​
| Edited By: |

Updated on: Aug 17, 2024 | 6:02 PM

Share

ಯಾದಗಿರಿ, ಆಗಸ್ಟ್​ 17: ಪಿಎಸ್ಐ ಪರಶುರಾಮ (PSI Parashuram) ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ (cid) ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ.

ಪರಶುರಾಮ ಮಾವ ವೆಂಕಟಸ್ವಾಮಿರಿಂದ ಮಾಹಿತಿ ಪಡೆದ ಸಿಐಡಿ

ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ ಕೊಣೆ ಪರಿಶೀಲನೆ ಮಾಡಿದ್ದಾರೆ. ನಂತರ ಎಸ್​​​ಪಿ ಕಚೇರಿಗೆ ತೆರಳಿ ಪರಿಶೀಲಿಸಿದ್ದಾರೆ. ಸಾಯುವ ಮುನ್ನ ಪರಶುರಾಮ ಯಾರನ್ನು ಭೇಟಿ ಮಾಡಿದ್ದರು ಎಂಬ ಹಲವು ವಿಚಾರಗಳ ಬಗ್ಗೆ ಸಿಐಡಿ ತನಿಖಾಧಿಕಾರಿಗಳು ಹಾಗೂ ಯಾದಗಿರಿ ಪೊಲೀಸ್ ಅಧಿಕಾರಿಗಳಿಂದ ಎಡಿಜಿಪಿ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಕಚೇರಿಯಲ್ಲಿ ಸಿಐಡಿ ತಲಾಶ್, ಪಿಎಸ್​ಐ ಪರಶುರಾಮ್ ಭೇಟಿ ಬಗ್ಗೆ ಮಾಹಿತಿ ಸಂಗ್ರಹ

ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಪರಶುರಾಮ ಮಾವ ವೆಂಕಟಸ್ವಾಮಿ, ಬೆಳಗ್ಗೆ ಸಿಐಡಿ ಅಧಿಕಾರಿಗಳು ಫೋನ್ ಮಾಡಿ ಬರಲು ಹೇಳಿದ್ದರು. ಅವರು ಏನು ಕೇಳಿದ್ದಾರೆ ಎಲ್ಲಾ ಹೇಳಿದ್ದೇನೆ ಎಂದಿದ್ದಾರೆ.

ಇತ್ತೀಚೆಗೆ ಯಾದಗಿರಿ ನಗರದ ಲಾಲ್ ಬಹದ್ದೂರ ಶಾಸ್ತ್ರಿ ವೃತ್ತದ ಬಳಿ ಇರುವ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಕಚೇರಿಗೆ ಸಿಐಡಿ ಡಿವೈಎಸ್ಪಿ ಪುನೀತ್ ನೇತೃತ್ವದ ತನಿಖಾ ತಂಡ ಭೇಟಿ ನೀಡಿ ಇಡೀ ಕಚೇರಿಯನ್ನು ಪರಿಶೀಲನೆ ಮಾಡಿದ್ದರು.

ಇದನ್ನೂ ಓದಿ: PSI ಪರಶುರಾಮ ಸಾವು ಕೇಸ್​: ಶಾಸಕ ಚೆನ್ನಾರೆಡ್ಡಿ ವಿರುದ್ಧ ಕ್ರಮಕ್ಕೆ ಪೊಲೀಸರ ಹಿಂದೇಟು!

ಪಿಎಸ್‌ಐ ನಿಗೂಢ ಸಾವಿಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರ ಪಂಪಣ್ಣಗೌಡ ಕಾರಣ ಅಂತಾ ಪಿಎಸ್‌ಐ ಪತ್ನಿ ಕೇಸ್‌ ದಾಖಲಿಸಿದ್ದಾರೆ. ಕೇಸ್‌ ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್ಡ್ ಆಫ್‌ ಮಾಡಿಕೊಂಡು ನಾಪತ್ತೆ ಆಗಿರುವ ತಂದೆ ಮಗ ಪತ್ತೆ ಆಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ