AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ

ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರನನ್ನು ರಾಜ್ಯ ಸರ್ಕಾರವೇ ರಕ್ಷಣೆ ಮಾಡುತ್ತಿದೆ ಎಂದು ಯಾದಗಿರಿ ಪಿಎಸ್​ಐ ಪರಶುರಾಮ್​ ಪತ್ನಿ ಶ್ವೇತಾ ಆರೋಪಿಸಿದ್ದಾರೆ. ಈ ಮಧ್ಯೆ, ಸಿಐಡಿ ತನಿಖೆಯೂ ಆರಂಭಗೊಂಡಿದ್ದು, ಪ್ರಕರಣ ಮುಚ್ಚಿಹಾಕಲೆಂದೇ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರಕರಣದ ಒಟ್ಟಾರೆ ಬೆಳವಣಿಗೆಯ ಮಾಹಿತಿ ಇಲ್ಲಿದೆ.

ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ
ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ
ಅಮೀನ್​ ಸಾಬ್​
| Edited By: |

Updated on: Aug 05, 2024 | 2:05 PM

Share

ಬೆಂಗಳೂರು, ಆಗಸ್ಟ್ 5: ಯಾದಗಿರಿ ಪಿಎಸ್​ಐ ಪರಶುರಾಮ್​ ಅನುಮಾನಾಸ್ಪದ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರ ಪಿಎಸ್​ಐ ಬಳಿ ಲಕ್ಷ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಎಫ್​ಐಆರ್​ ಆದ ಬಳಿಕ ಅವರಿಬ್ಬರು ದೆಹಲಿಗೆ ಹೇಗೆ ಹೋದರು? ಸರ್ಕಾರವೇ ಶಾಸಕ ಹಾಗೂ ಅವರ ಪುತ್ರನನ್ನು ರಕ್ಷಣೆ ಮಾಡುತ್ತಿದೆ ಎಂದು ಮೃತ ಪಿಎಸ್​ಐ ಪತ್ನಿ ಶ್ವೇತಾ ಕಿಡಿಕಾರಿದ್ದಾರೆ.

ಶಾಸಕರಿಗೆ ಹಣ ಕೊಡಲು ಪತ್ನಿ ಚಿನ್ನಾಭರಣ ಅಡವಿಟ್ಟಿದ್ದ ಎಂದ ಸ್ನೇಹಿತ

ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರನಿಗೆ ಹಣ ನೀಡಲು ಪಿಎಸ್​ಐ ಪರಶುರಾಮ ಪತ್ನಿಯ ಚಿನ್ನಾಭರಣ ಅಡವಿಟ್ಟಿದ್ದು ಬ್ಯಾಂಕ್​​ನಿಂದ ಪರ್ಸನಲ್ ಲೋನ್ ತಗೊಂಡಿದ್ದರಂತೆ. ಆದರೆ, ಶಾಸಕರು ಕೇಳಿದಷ್ಟು ಹಣ ಕೊಡಲು ಆಗಲ್ಲವೆಂದು ಹೇಳಿಕೊಂಡಿದ್ದ ಎಂದು ಸ್ನೇಹಿತ ಯರಿಸ್ವಾಮಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಯಾದಗಿರಿ ಪಿಎಸ್ಐ ಪರಶುರಾಮ್​ ಸಾವಿಗೂ ಮುನ್ನ ಮಾತನಾಡಿದ್ದರು ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ. ‘ನಾನು 2050 ರ ಮೇ 31 ರಂದು ನಿವೃತ್ತಿ ಆಗುತ್ತೇನೆ’ ಎಂದು ನಗರ ಠಾಣೆ ಎಸ್ಎಸ್​ಐ ಹಸನ್ ಪಟೇಲ್ ನಿವೃತ್ತಿ ವೇಳೆ ಮಾತನಾಡಿದ್ದರು. ಇದಾದ 1 ತಿಂಗಳ ಬಳಿಕ ಪರಶುರಾಮ್ ಮೃತಪಟ್ಟಿದ್ದಾರೆ.

ಪರಶುರಾಮ್​ ಪತ್ನಿಗೆ ಧೈರ್ಯ ತುಂಬಿದ ಹೆಚ್​ಡಿಕೆ

ಮೃತ ಪಿಎಸ್​ಐ ಪರಶುರಾಮ್​ ಸಾವಿನ ಪ್ರಕರವನ್ನೇ ವಿಪಕ್ಷಗಳು ಅಸ್ತ್ರವಾಗಿಸಿಕೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಪರಶುರಾಮ್ ಪತ್ನಿ ಶ್ವೇತಾ ಜತೆ ಫೋನ್​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಧೈರ್ಯ ತುಂಬಿದ್ದಾರೆ.

ಶಾಸಕ ಚೆನ್ನಾರೆಡ್ಡಿ ಮತ್ತು ಆತನ ಪುತ್ರನನ್ನ ಇನ್ನೂ ಬಂಧಿಸಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು. ತನಿಖೆ ಮುಚ್ಚಿಹಾಕುವುದಕ್ಕೆಂದೇ ಸಿಒಡಿ ತನಿಖೆಗೆ ಕೊಟ್ಟಿದ್ದಾರೆ ಎಂದು ಅಶೋಕ್ ಗುಡುಗಿದರು.

ಇದನ್ನೂ ಓದಿ: PSI ಪರಶುರಾಮ್‌ ಸಾವು: ಸರ್ಕಾರ ಆದೇಶಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ಎಂಟ್ರಿ, ಮೊದಲ ದಿನ ಏನೇನಾಯ್ತು?

ಈ ಮಧ್ಯೆ, ಮೃತ ಪಿಎಸ್​ಐ ಪರಶುರಾಮ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆಗಸ್ಟ್ 7ರಂದು ಭೇಟಿ ನೀಡಿ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮೀನ್​ ಸಾಬ್​
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್