ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ

| Updated By: ಗಣಪತಿ ಶರ್ಮ

Updated on: Aug 05, 2024 | 2:05 PM

ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರನನ್ನು ರಾಜ್ಯ ಸರ್ಕಾರವೇ ರಕ್ಷಣೆ ಮಾಡುತ್ತಿದೆ ಎಂದು ಯಾದಗಿರಿ ಪಿಎಸ್​ಐ ಪರಶುರಾಮ್​ ಪತ್ನಿ ಶ್ವೇತಾ ಆರೋಪಿಸಿದ್ದಾರೆ. ಈ ಮಧ್ಯೆ, ಸಿಐಡಿ ತನಿಖೆಯೂ ಆರಂಭಗೊಂಡಿದ್ದು, ಪ್ರಕರಣ ಮುಚ್ಚಿಹಾಕಲೆಂದೇ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರಕರಣದ ಒಟ್ಟಾರೆ ಬೆಳವಣಿಗೆಯ ಮಾಹಿತಿ ಇಲ್ಲಿದೆ.

ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ
ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ
Follow us on

ಬೆಂಗಳೂರು, ಆಗಸ್ಟ್ 5: ಯಾದಗಿರಿ ಪಿಎಸ್​ಐ ಪರಶುರಾಮ್​ ಅನುಮಾನಾಸ್ಪದ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರ ಪಿಎಸ್​ಐ ಬಳಿ ಲಕ್ಷ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಎಫ್​ಐಆರ್​ ಆದ ಬಳಿಕ ಅವರಿಬ್ಬರು ದೆಹಲಿಗೆ ಹೇಗೆ ಹೋದರು? ಸರ್ಕಾರವೇ ಶಾಸಕ ಹಾಗೂ ಅವರ ಪುತ್ರನನ್ನು ರಕ್ಷಣೆ ಮಾಡುತ್ತಿದೆ ಎಂದು ಮೃತ ಪಿಎಸ್​ಐ ಪತ್ನಿ ಶ್ವೇತಾ ಕಿಡಿಕಾರಿದ್ದಾರೆ.

ಶಾಸಕರಿಗೆ ಹಣ ಕೊಡಲು ಪತ್ನಿ ಚಿನ್ನಾಭರಣ ಅಡವಿಟ್ಟಿದ್ದ ಎಂದ ಸ್ನೇಹಿತ

ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರನಿಗೆ ಹಣ ನೀಡಲು ಪಿಎಸ್​ಐ ಪರಶುರಾಮ ಪತ್ನಿಯ ಚಿನ್ನಾಭರಣ ಅಡವಿಟ್ಟಿದ್ದು ಬ್ಯಾಂಕ್​​ನಿಂದ ಪರ್ಸನಲ್ ಲೋನ್ ತಗೊಂಡಿದ್ದರಂತೆ. ಆದರೆ, ಶಾಸಕರು ಕೇಳಿದಷ್ಟು ಹಣ ಕೊಡಲು ಆಗಲ್ಲವೆಂದು ಹೇಳಿಕೊಂಡಿದ್ದ ಎಂದು ಸ್ನೇಹಿತ ಯರಿಸ್ವಾಮಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಯಾದಗಿರಿ ಪಿಎಸ್ಐ ಪರಶುರಾಮ್​ ಸಾವಿಗೂ ಮುನ್ನ ಮಾತನಾಡಿದ್ದರು ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ. ‘ನಾನು 2050 ರ ಮೇ 31 ರಂದು ನಿವೃತ್ತಿ ಆಗುತ್ತೇನೆ’ ಎಂದು ನಗರ ಠಾಣೆ ಎಸ್ಎಸ್​ಐ ಹಸನ್ ಪಟೇಲ್ ನಿವೃತ್ತಿ ವೇಳೆ ಮಾತನಾಡಿದ್ದರು. ಇದಾದ 1 ತಿಂಗಳ ಬಳಿಕ ಪರಶುರಾಮ್ ಮೃತಪಟ್ಟಿದ್ದಾರೆ.

ಪರಶುರಾಮ್​ ಪತ್ನಿಗೆ ಧೈರ್ಯ ತುಂಬಿದ ಹೆಚ್​ಡಿಕೆ

ಮೃತ ಪಿಎಸ್​ಐ ಪರಶುರಾಮ್​ ಸಾವಿನ ಪ್ರಕರವನ್ನೇ ವಿಪಕ್ಷಗಳು ಅಸ್ತ್ರವಾಗಿಸಿಕೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಪರಶುರಾಮ್ ಪತ್ನಿ ಶ್ವೇತಾ ಜತೆ ಫೋನ್​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಧೈರ್ಯ ತುಂಬಿದ್ದಾರೆ.

ಶಾಸಕ ಚೆನ್ನಾರೆಡ್ಡಿ ಮತ್ತು ಆತನ ಪುತ್ರನನ್ನ ಇನ್ನೂ ಬಂಧಿಸಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು. ತನಿಖೆ ಮುಚ್ಚಿಹಾಕುವುದಕ್ಕೆಂದೇ ಸಿಒಡಿ ತನಿಖೆಗೆ ಕೊಟ್ಟಿದ್ದಾರೆ ಎಂದು ಅಶೋಕ್ ಗುಡುಗಿದರು.

ಇದನ್ನೂ ಓದಿ: PSI ಪರಶುರಾಮ್‌ ಸಾವು: ಸರ್ಕಾರ ಆದೇಶಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ಎಂಟ್ರಿ, ಮೊದಲ ದಿನ ಏನೇನಾಯ್ತು?

ಈ ಮಧ್ಯೆ, ಮೃತ ಪಿಎಸ್​ಐ ಪರಶುರಾಮ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆಗಸ್ಟ್ 7ರಂದು ಭೇಟಿ ನೀಡಿ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ