Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಯುಪಿಎಸ್​ಸಿ ಮುಖ್ಯ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ ಮಾಡಲಾಗಿದೆ. ಹೀಗಾಗಿ ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಬಿಜೆಪಿ ಆಗ್ರಹಿಸಿದೆ. ಸೆ.22ಕ್ಕೆ ನಿಗದಿಯಾಗಿರುವ 402 ಪಿಎಸ್​ಯ ಹುದ್ದೆಗೆ ನೇಮಕಾತಿ ಪರೀಕ್ಷೆ ನಡೆಯಲಿದೆ. ಆದರೆ ಯುವಕರ ಭವಿಷ್ಯದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 05, 2024 | 11:45 AM

ಬೆಂಗಳೂರು, ಸೆಪ್ಟೆಂಬರ್​ 05: ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಸರ್ಕಾರ, ಯುಪಿಎಸ್​​ಸಿ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದೆ.

ಯುಪಿಎಸ್​​ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್​​ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರುವ ಯುಪಿಎಸ್ಸಿ ಮುಖ್ಯ ಪರೀಕ್ಷೆ, ಎಸ್ಎಸ್ಸಿ ಪರೀಕ್ಷೆ ಜೊತೆಗೆ ಪಿಎಸ್ಐ ಪರೀಕ್ಷೆಯೂ ನಡೆದರೆ ಮೂರೂ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್​ 

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ನಿಗದಿ ಗೊಂದಲದ ಕುರಿತು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಈ ಹಿಂದೆ ಮೇಲ್ಮನೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಯುಪಿಎಸ್​​ಸಿ, ಎಸ್ಎಸ್​ಸಿ ಹಾಗೂ ಎನ್ಟಿಎ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳಿಂದ ಪ್ರಕಟಿತವಾಗುವ ವೇಳಾಪಟ್ಟಿ ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುತ್ತಯೇ? ಎಂಬ ಪ್ರಶ್ನೆಗೆ ಇಲ್ಲ ಒಂದು ವೇಳೆ ಪರೀಕ್ಷೆಗೆ ತೊಂದರೆಯಾದರೇ ಪರೀಕ್ಷೆ ದಿನಾಂಕ ಮರು ನಿಗದಿಪಡಿಸಲಾಗುವುದು ಎಂಬುದಾಗಿ ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜು ದಾಖಲಾತಿಗೆ ತಟ್ಟಿದ ಸರ್ವರ್ ಪ್ರಾಬ್ಲಂ: ಪೋಷಕರು ಪರದಾಟ

ಸದ್ಯ ಉಲ್ಟಾ ಹೊಡೆದಿರುವ ಕಾಂಗ್ರೆಸ್ ಸರ್ಕಾರ ಸೆ.22ರಂದು ಪಿಎಸ್ಐ ಪರೀಕ್ಷೆ ನಡೆಸಲು ಹೊರಟಿರುವುದು ಖಂಡನೀಯ, ಕೂಡಲೇ, ವಿದ್ಯಾರ್ಥಿ ವಿರೋಧಿ ನೀತಿ ಕೈಬಿಟ್ಟು, ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪಿಎಸ್‌ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ಬಿಜೆಪಿ ಘಟಕ ಆಗ್ರಹಿಸಿದೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು