ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಯುಪಿಎಸ್​ಸಿ ಮುಖ್ಯ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ ಮಾಡಲಾಗಿದೆ. ಹೀಗಾಗಿ ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಬಿಜೆಪಿ ಆಗ್ರಹಿಸಿದೆ. ಸೆ.22ಕ್ಕೆ ನಿಗದಿಯಾಗಿರುವ 402 ಪಿಎಸ್​ಯ ಹುದ್ದೆಗೆ ನೇಮಕಾತಿ ಪರೀಕ್ಷೆ ನಡೆಯಲಿದೆ. ಆದರೆ ಯುವಕರ ಭವಿಷ್ಯದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
ಯುಪಿಎಸ್​​ಸಿ ಪರೀಕ್ಷೆ ದಿನವೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಿಗದಿ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
Follow us
|

Updated on: Sep 05, 2024 | 11:45 AM

ಬೆಂಗಳೂರು, ಸೆಪ್ಟೆಂಬರ್​ 05: ಯುವಕರ ಭವಿಷ್ಯದ ಕುರಿತು ಎಳ್ಳಷ್ಟು ಕಾಳಜಿಯಿಲ್ಲದ ಭ್ರಷ್ಟ ಸರ್ಕಾರ, ಯುಪಿಎಸ್​​ಸಿ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು ಹೊರಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್​​​ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿದೆ.

ಯುಪಿಎಸ್​​ಸಿ ಹಲವು ತಿಂಗಳುಗಳ ಮೊದಲೇ ಪರೀಕ್ಷೆ ದಿನಾಂಕ ಪ್ರಕಟಿಸುತ್ತಿದೆ. ಅದರಂತೆ, ಜೂನ್ 16ರಂದು ಯುಪಿಎಸ್​​ಸಿ ಪ್ರಿಲಿಮ್ಸ್ ಪರೀಕ್ಷೆ ನಡೆದಿದ್ದು, ಸೆಪ್ಟೆಂಬರ್ 22ಕ್ಕೆ ಮುಖ್ಯ ಪರೀಕ್ಷೆ ನಡೆಯಲಿದೆ. ವಿವೇಚನೆ, ಸಂವೇದನೆ ಇಲ್ಲದ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಪಿಎಸ್ಐ ಪರೀಕ್ಷೆಯನ್ನು ಸೆ.22ರಂದೇ ನಡೆಸುವುದಾಗಿ ಜುಲೈ 31ರಂದು ಪ್ರಕಟಿಸಿದೆ. ಈ ಮೂಲಕ ಯುವಕರ ಉದ್ಯೋಗದ ಕನಸಿಗೆ ಕೊಳ್ಳಿಯಿಡುವ ಕೆಲಸ ಮಾಡಿದೆ. ಸೆ.22ರಂದು ನಿಗದಿಯಾಗಿರುವ ಯುಪಿಎಸ್ಸಿ ಮುಖ್ಯ ಪರೀಕ್ಷೆ, ಎಸ್ಎಸ್ಸಿ ಪರೀಕ್ಷೆ ಜೊತೆಗೆ ಪಿಎಸ್ಐ ಪರೀಕ್ಷೆಯೂ ನಡೆದರೆ ಮೂರೂ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್​ 

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ನಿಗದಿ ಗೊಂದಲದ ಕುರಿತು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಈ ಹಿಂದೆ ಮೇಲ್ಮನೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಯುಪಿಎಸ್​​ಸಿ, ಎಸ್ಎಸ್​ಸಿ ಹಾಗೂ ಎನ್ಟಿಎ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳಿಂದ ಪ್ರಕಟಿತವಾಗುವ ವೇಳಾಪಟ್ಟಿ ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುತ್ತಯೇ? ಎಂಬ ಪ್ರಶ್ನೆಗೆ ಇಲ್ಲ ಒಂದು ವೇಳೆ ಪರೀಕ್ಷೆಗೆ ತೊಂದರೆಯಾದರೇ ಪರೀಕ್ಷೆ ದಿನಾಂಕ ಮರು ನಿಗದಿಪಡಿಸಲಾಗುವುದು ಎಂಬುದಾಗಿ ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ.

ಇದನ್ನೂ ಓದಿ: ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜು ದಾಖಲಾತಿಗೆ ತಟ್ಟಿದ ಸರ್ವರ್ ಪ್ರಾಬ್ಲಂ: ಪೋಷಕರು ಪರದಾಟ

ಸದ್ಯ ಉಲ್ಟಾ ಹೊಡೆದಿರುವ ಕಾಂಗ್ರೆಸ್ ಸರ್ಕಾರ ಸೆ.22ರಂದು ಪಿಎಸ್ಐ ಪರೀಕ್ಷೆ ನಡೆಸಲು ಹೊರಟಿರುವುದು ಖಂಡನೀಯ, ಕೂಡಲೇ, ವಿದ್ಯಾರ್ಥಿ ವಿರೋಧಿ ನೀತಿ ಕೈಬಿಟ್ಟು, ಸಾವಿರಾರು ಉದ್ಯೋಗಾಕಾಂಕ್ಷಿ ಪರೀಕ್ಷಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪಿಎಸ್‌ಐ ಪರೀಕ್ಷೆಯ ದಿನಾಂಕವನ್ನು ಮರು ನಿಗದಿ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ಬಿಜೆಪಿ ಘಟಕ ಆಗ್ರಹಿಸಿದೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ