AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ನೇಮಕಾತಿ ಹಗರಣ: ಬೆಂಗಳೂರಲ್ಲಿ ಬಂಧಿತ ಅಭ್ಯರ್ಥಿಗಳಿಗೆ 14-ದಿನ ಪೊಲೀಸ್ ಕಸ್ಟಡಿ

545 ಪಿಎಸ್ಐ ಪರೀಕ್ಷೆ ರದ್ದುಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸರ್ಕಾರದ ಅದೇಶಕ್ಕೆ ರಾಜ್ಯಪಾಲರಿಂದ ಅಂಕಿತ ಬಿದ್ದಿದೆ ಪರೀಕ್ಷಾ ಅಕ್ರಮ ಬಯಲಿಗೆ ಬಂದ ಬಳಿಕ ರಾಜ್ಯ ಸರ್ಕಾರವು ತನಿಖೆಯ ಹೊಣೆಯನ್ನು ಸಿಐಡಿಯ ಹೆಗಲಿಗೆ ಹಾಕಿತ್ತು. ಉತ್ತೀರ್ಣರಾಗಿದ್ದ ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ತನಿಖಾ ವರದಿ ಸಲ್ಲಿಸಿತ್ತು.

ಪಿಎಸ್ಐ ನೇಮಕಾತಿ ಹಗರಣ: ಬೆಂಗಳೂರಲ್ಲಿ ಬಂಧಿತ ಅಭ್ಯರ್ಥಿಗಳಿಗೆ 14-ದಿನ ಪೊಲೀಸ್ ಕಸ್ಟಡಿ
ಫ್ರೀಡಂ ಪಾರ್ಕ್​ ನಲ್ಲಿ ಸತ್ಯಾಗ್ರಹ ನಡೆಸಿದ್ದ ಅಭ್ಯರ್ಥಿಗಳು
TV9 Web
| Edited By: |

Updated on:May 01, 2022 | 12:43 AM

Share

Bengaluru:  ಪಿ ಎಸ್ ಐ ನೇಮಕಾತಿಗಾಗಿ (PSI Recruitment) ನಡೆದ ಲಿಖಿತ ಪರೀಕ್ಷೆಯಲ್ಲಿ ಪ್ರಮುಖ ಅರೋಪಿಯೆಂದು ಹೇಳಲಾಗುತ್ತಿರುವ ಕಲಬುರಗಿಯಲ್ಲಿ ಶಿಕ್ಷಣ ಸಂಸ್ಥೆಯನ್ನು ನಡೆಸುವ ದಿವ್ಯಾ ಹಾಗರಗಿ (Divya Hagargi) ಅವರನ್ನು ಬಂಧಿಸಿದ ಬಳಿಕ ಹಲವಾರು ವಿಷಯಗಳು ಬೆಳಕಿಗೆ ಬರುತ್ತಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ದೂರಿನನ್ವಯ ಬೆಂಗಳೂರಿನಲ್ಲಿ ಹೈಗ್ರೌಂಡ್ಸ್ ಠಾಣೆಯ (High Grounds police station) ಮೂಲಕ ಬಂಧನಕ್ಕೊಳಗಾಗಿರುವ 12 ಅಭ್ಯರ್ಥಿಗಳನ್ನು ಪೊಲೀಸ್ ಕಸ್ಟಡಿಗೆ ಕಳಿಸಲಾಗಿದೆ. ಸದರಿ ಆರೋಪಿಗಳನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಸಿಐಡಿಯ ದೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಬಂಧಿತ ಅರೋಪಗಳು ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪಿ ಎಸ್ ಐ ನೇಮಕಾತಿ ಲಿಖಿತ ಪರೀಕ್ಷೆ ಬರೆದಿದ್ದರು.

ತನಿಖೆಯ ಭಾಗವಾಗಿ ಸಿಐಡಿ ಅಧಿಕಾರಿಗಳು 22 ಅಭ್ಯರ್ಥಿಗಳ ಒ ಎಮ್ ಆರ್ ಪ್ರತಿಗಳನ್ನು ತಮ್ಮ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು. ಅಭ್ಯರ್ಥಿಗಳ ಮೂಲ ಪ್ರತಿ ಮತ್ತು ಕಾರ್ಬನ್ ಒಎಮ್ ಆರ್ ಶೀಟ್ ನಲ್ಲಿ ವ್ಯತ್ಯಾಸ ಕಂಡುಬಂದ ಕಾರಣ 22 ಅಭ್ಯರ್ಥಿಗಳ ಪೈಕಿ 12 ಜನರನ್ನು ಬಂಧಿಸಲಾಗಿದೆ ಮತ್ತು ಉಳಿಸ 10 ಅಭ್ಯರ್ಥಿಗಳಿಗಾಗಿ ಜಾಲ ಬೀಸಲಾಗಿದೆ.

ಅಂದಹಾಗೆ, 545 ಪಿಎಸ್ಐ ಪರೀಕ್ಷೆ ರದ್ದುಗೊಳಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸರ್ಕಾರದ ಅದೇಶಕ್ಕೆ ರಾಜ್ಯಪಾಲರಿಂದ ಅಂಕಿತ ಬಿದ್ದಿದೆ ಪರೀಕ್ಷಾ ಅಕ್ರಮ ಬಯಲಿಗೆ ಬಂದ ಬಳಿಕ ರಾಜ್ಯ ಸರ್ಕಾರವು ತನಿಖೆಯ ಹೊಣೆಯನ್ನು ಸಿಐಡಿಯ ಹೆಗಲಿಗೆ ಹಾಕಿತ್ತು. ಉತ್ತೀರ್ಣರಾಗಿದ್ದ ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ತನಿಖಾ ವರದಿ ಸಲ್ಲಿಸಿತ್ತು.

ವರದಿಯನುಸಾರ 2020-21ನೇ ಸಾಲಿನಲ್ಲಿ ನೇಮಕಾತಿ ಅಂಗವಾಗಿ ನಡೆದ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿತ್ತು. ಪಾಸಾಗಿದ್ದ ಅಭ್ಯರ್ಥಿಗಳು ಇನ್ನು ಮತ್ತೊಮ್ಮೆ ಪರೀಕ್ಷೆ ಬರೆಯಬೇಕು. ರಾಜ್ಯಪಾಲರ ಆದೇಶಾನುಸಾರ ಸರ್ಕಾರ ಈ ಸಂಬಂಧ ರಾಜ್ಯಪತ್ರ ಹೊರಡಿಸಿದೆ.

ಹಾಗೆಯೇ, ಎಲ್ಲಾ 545 ಯಶಸ್ವಿ ಅಭ್ಯರ್ಥಿಗಳ ಒಎಮ್ ಅರ್ ಹಾಳೆಗಳ ವಿಧಿವಿಜ್ಞಾನ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಲ್ಲಾ 92 ಪರೀಕ್ಷಾ ಕೇಂದ್ರಗಳಿಂದ ಡಿಜಿಟಲ್ ತಾಂತ್ರಿಕ ಪುರಾವೆಗಳ ಸಂಗ್ರಹಿಸಿ, ವಿಶ್ಲೇಷಣೆ ಮಾಡಲಾಗುವುದು. ಈ ಅವ್ಯವಹಾರದಲ್ಲಿ ಇತರ ವಿಧಾನಗಳನ್ನು ಅನುಸರಿಸಿದ್ದಲ್ಲಿ, ಪತ್ತೆಹಚ್ಚುವುದು ಮತ್ತು ತನಿಖೆ ಮಾಡಲಾಗುವುದು ಅಂತ ಮೂಲಗಳಿಂದ ಗೊತ್ತಾಗಿದೆ.

ವಿಚಾರಣೆ ವೇಳೆ ಹಲವರು ತಲೆಮರೆಸಿಕೊಳ್ಳಬಹುದಾದ ಸಾಧ್ಯತೆಯಿರುವುದರಿಂದ ಅಕ್ರಮದಲ್ಲಿ ಭಾಗಿಯಾಗಿರಬಹುದಾದ ಅಭ್ಯರ್ಥಿಗಳು ಮತ್ತು ಪಿತೂರಿಗಾರರನ್ನು ಬಂಧಿಸಿ ಮತ್ತು ಪ್ರಶ್ನಿಸಲು ಸಿಐಡಿ ತೀರ್ಮಾನಿಸಿದೆ..

ಮದ್ಯಂತರ ತನಿಖಾ ವರದಿಯ ಮುಖ್ಯಾಂಶಗಳು:

-ಏಪ್ರಿಲ್ 7ರಂದು ತನಿಖೆಯನ್ನ ಸಿಐಡಿಗೆ ರಾಜ್ಯ ಸರ್ಕಾರ ವಹಿಸಿತ್ತು.

-ಕಲಬುರ್ಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯೇ ಪರೀಕ್ಷಾ ಅಕ್ರಮದ ಕೇಂದ್ರ ಅಂತ ಸಾಬೀತಾಗಿದೆ.

-ಜ್ಞಾನ ಜ್ಯೋತಿ ಶಾಲೆಯಲ್ಲಿ ಪರೀಕ್ಷೆ ಬರೆದು ಪಾಸಾದ 11ರಲ್ಲಿ 8 ಅಭ್ಯರ್ಥಿಗಳು ಅಕ್ರಮ ನಡೆಸಿರುವರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

-ಇದುವರೆಗೆ 12 ಅಭ್ಯರ್ಥಿಗಳಲ್ಲದೆ, 3 ಪರಿವೀಕ್ಷಕರು, 3 ಇತರ ವ್ಯಕ್ತಿಗಳನ್ನು ಸಿಐಡಿ ಬಂಧಿಸಿದೆ.

-ಅಭ್ಯರ್ಥಿಗಳ ವಿಚಾರಣೆ ವೇಳೆ ಅಕ್ರಮ ಪತ್ತೆಯಾಗಿತ್ತು.

-ಮೂಲ OMR ಶೀಟ್ ಹಾಗೂ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಪರಿವೀಕ್ಷಕರು, ಶಾಲಾ ಆಡಳಿತ ಮಂಡಳಿಯ ಕೆಲ ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಯಿತು.

-3 ಅಭ್ಯರ್ಥಿಗಳು ಡಿಜಿಟಲ್ ಡಿವೈಸ್ ಗಳನ್ನು ಬಳಸಿರುವುದು ಸಾಬೀತಾಗಿದೆ.

-ಇತರ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ತಳ್ಳಿಹಾಕಲು ಸಾಧ್ಯವಿಲ್ಲದಿರುವುದರಿಂದ ಹೆಚ್ಚಿನ ತನಿಖೆ ಅಗತ್ಯ ಅಂತ ಸಿಐಡಿ ಹೇಳಿದೆ.

ಏತನ್ಮಧ್ಯೆ, ಮರುಪರೀಕ್ಷೆ ನಡೆಸಲು ತೆಗೆದುಕೊಂಡಿರುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕೆಂದು ಪರೀಕ್ಷೆಯಲ್ಲಿ ಪಾಸಾಗಿರುವ ಸುಮಾರು 400ಕ್ಕೂ ಹೆಚ್ಚು ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶನಿವಾರದಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಇದನ್ನೂ ಓದಿ:   PSI Recruitment Scam: ಅಕ್ಷರಶಃ ಏಕಾಂಗಿಯಾದ ದಿವ್ಯಾ ಹಾಗರಗಿ, ಸಿಐಡಿ ಅಧಿಕಾರಿಗಳ ಕಡಕ್​​ ಪ್ರಶ್ನೆಗಳಿಗೆ ಕುಳಿತಲ್ಲೇ ಬೆವರಿದ ಲೇಡಿ ಕಿಂಗ್​ಪಿನ್

Published On - 12:22 am, Sun, 1 May 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು