AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್

PSI Recruitment Scam: ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ ಷರೀಫ್​​ ಬಂಧಿತ ಆರೋಪಿ. ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದು, ಬೆಂಗಳೂರು ಸಿಐಡಿ ಪೊಲೀಸ್ ತಂಡ ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
TV9 Web
| Edited By: |

Updated on:Jul 30, 2022 | 7:49 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ (PSI Recruitment Scam) ಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ತಡವಾಗಿ ಸೆರೆಹಿಡಿಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ (Kamakshi Palya PSI) ಷರೀಫ್​ ಕಲಿಮಠ್​ ಬಂಧಿತ ಆರೋಪಿ ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದರು. ಬೆಂಗಳೂರು ಸಿಐಡಿ (Bangalore CID) ಪೊಲೀಸ್ ತಂಡ ಮುಂಬೈನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಅಕ್ರಮ ಆರೋಪಿ ಷರೀಫ್ 10 ದಿನ ಪೊಲೀಸ್ ಕಸ್ಟಡಿಗೆ:

ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಶರೀಫ್ ನನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್​ ಕಸ್ಟಡಿಗೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್​ಗೆ ಮನವಿ, ಮಾಡಿಕೊಂಡಿದ್ದಾರೆ. ಸಿಐಡಿ ಮನವಿ ಹಿನ್ನೆಲೆ ಆರೋಪಿ ಶರೀಫ್ ಕಲಿಮಠ್ ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆಗಸ್ಟ್ 8 ರವರೆಗೆ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಬಂಧಿತ ಆರೋಪಿ ಎಸ್ ಡಿಎ ಹರ್ಷಾ ಮತ್ತು ಕೆಲ ಅಭ್ಯರ್ಥಿಗಳೊಂದಿಗೆ ಪಿಎಸ್​ಐ ಷರೀಫ್​ ಕಲಿಮಠ್​ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈತ 10 ಅಭ್ಯರ್ಥಿಗಳ ಅಕ್ರಮ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ಷರೀಫ್ ನನ್ನು ವಶಕ್ಕೆ ಪಡೆದ ಸಿಐಡಿ ಪೊಲೀಸರು ಗ್ರಿಲ್ ಮುಂದುವರೆಸಿದ್ದಾರೆ.

Published On - 7:44 pm, Sat, 30 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ