AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್

PSI Recruitment Scam: ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ ಷರೀಫ್​​ ಬಂಧಿತ ಆರೋಪಿ. ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದು, ಬೆಂಗಳೂರು ಸಿಐಡಿ ಪೊಲೀಸ್ ತಂಡ ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
ಪ್ರಮುಖ ಆರೋಪಿ, ಕಾಮಾಕ್ಷಿಪಾಳ್ಯ ಪಿಎಸ್​ಐ ಷರೀಫ್​ ಮುಂಬೈನಲ್ಲಿ ತಡವಾಗಿ ಅರೆಸ್ಟ್
TV9 Web
| Edited By: |

Updated on:Jul 30, 2022 | 7:49 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ (PSI Recruitment Scam) ಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ತಡವಾಗಿ ಸೆರೆಹಿಡಿಯಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ (Kamakshi Palya PSI) ಷರೀಫ್​ ಕಲಿಮಠ್​ ಬಂಧಿತ ಆರೋಪಿ ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ PSI ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದರು. ಬೆಂಗಳೂರು ಸಿಐಡಿ (Bangalore CID) ಪೊಲೀಸ್ ತಂಡ ಮುಂಬೈನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪಿಎಸ್​ಐ ನೇಮಕಾತಿ ಅಕ್ರಮ ಆರೋಪಿ ಷರೀಫ್ 10 ದಿನ ಪೊಲೀಸ್ ಕಸ್ಟಡಿಗೆ:

ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಶರೀಫ್ ನನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್​ ಕಸ್ಟಡಿಗೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್​ಗೆ ಮನವಿ, ಮಾಡಿಕೊಂಡಿದ್ದಾರೆ. ಸಿಐಡಿ ಮನವಿ ಹಿನ್ನೆಲೆ ಆರೋಪಿ ಶರೀಫ್ ಕಲಿಮಠ್ ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆಗಸ್ಟ್ 8 ರವರೆಗೆ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಬಂಧಿತ ಆರೋಪಿ ಎಸ್ ಡಿಎ ಹರ್ಷಾ ಮತ್ತು ಕೆಲ ಅಭ್ಯರ್ಥಿಗಳೊಂದಿಗೆ ಪಿಎಸ್​ಐ ಷರೀಫ್​ ಕಲಿಮಠ್​ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈತ 10 ಅಭ್ಯರ್ಥಿಗಳ ಅಕ್ರಮ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ಷರೀಫ್ ನನ್ನು ವಶಕ್ಕೆ ಪಡೆದ ಸಿಐಡಿ ಪೊಲೀಸರು ಗ್ರಿಲ್ ಮುಂದುವರೆಸಿದ್ದಾರೆ.

Published On - 7:44 pm, Sat, 30 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ