AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Scam: ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ: ಸಿಎಂ ಬೊಮ್ಮಾಯಿ

ಪೊಲೀಸ್ ಸಬ್​ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಕನಕಗಿರಿ ಬಿಜೆಪಿ ಶಾಸಕ ದಡೇಸುಗೂರು ಹೆಸರು ಪ್ರಸ್ತಾಪವಾಗಿದ್ದು, ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

PSI Scam: ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ದಢೇಸಗೂರು
TV9 Web
| Edited By: Rakesh Nayak Manchi|

Updated on:Sep 06, 2022 | 1:02 PM

Share

ಬೆಂಗಳೂರು: ಪೊಲೀಸ್ ಸಬ್​ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಢೇಸಗೂರು ಹೆಸರು ಪ್ರಸ್ತಾಪವಾಗಿದ್ದು, ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ, ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದರು.

ಪಿಎಸ್​ಐ ಹಗರಣಕ್ಕೆ ಸಂಬಂಧ ಕೊಪ್ಪಳ ಜಿಲ್ಲೆ ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಢೇಸಗೂರು ಮತ್ತು ನಿವೃತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಪರಸಪ್ಪ ಎಂಬವರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ನೀಡಿದ್ದ 15 ಲಕ್ಷ ಹಣವನ್ನು ಕೇಳಲು ಶಾಸಕರಿಗೆ ಪರಸಪ್ಪ ಅವರು ಕರೆ ಮಾಡಿದ್ದರು. ಈ ವೇಳೆ ಪರಸಪ್ಪನನ್ನ ಶಾಸಕರು ತರಾಟೆಗೆ ತೆಗೆದುಕೊಂಡಿದ್ದು, ಇದರ ಆಡಿಯೋ ನಿನ್ನೆ ವೈರಲ್ ಆಗಿತ್ತು.

ಹಣದ ಮಾತುಕತೆಯ ಆಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪರಸಪ್ಪ ವರಸೆ ಬದಲಾಯಿಸಿದ್ದಾರೆ. ನಿನ್ನೆ ಆಡಿಯೋ ವೈರಲ್ ಆಗುತ್ತಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಪರಸಪ್ಪ. ಕಾರಟಗಿ ಪಟ್ಟಣ ಪಂಚಾಯತ್ ಸದಸ್ಯ ಆನಂದಪ್ಪ ನನಗೆ ಹಣ ಕೊಡಬೇಕಿತ್ತು. ಹಣದ ವಿಚಾರವಾಗಿ ಸುಮಾರು ದಿನಗಳಿಂದ ತಂಟೆ ತಕರಾರಿತ್ತು. ನಮ್ಮ ಸಮಾಜದವರಾದ ಶಾಸಕರ ಬಳಿ‌ ನಾವು ಬಗೆ ಹರಿಸಿ ಎಂದು ಹೋಗಿದ್ದೆವು. ನನ್ನ ಹಾಗೂ ಶಾಸಕರ ಮದ್ಯೆ ಯಾವುದೇ ದುಡ್ಡಿನ ವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ‌ ನಿವಾಸಿಯಾಗಿರೋ ಪರಸಪ್ಪ, ಆಡಿಯೋ ಪ್ರಕರಣ ಸದ್ದು ಮಾಡುತ್ತಲೇ ಶಾಸಕರಿಗೆ ಹೆದರಿ ಉಲ್ಟಾ ಹೊಡೆದು ವಿಡಿಯೋ ಬಿಡುಗಡೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Tue, 6 September 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ