AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suspend: ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ PSI ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್!

ಶಿಸ್ತುಬದ್ಧ ಪೊಲೀಸ್​ ಇಲಾಖೆಯಲ್ಲಿ ಇದ್ದುಕೊಂಡೂ ಸ್ವಯಂ ಅಪರಾಧ ಮಾಡಿಕೊಂಡಿರುವ ಅಭ್ಯರ್ಥಿಯನ್ನು ಈ ಹಿಂದೆ ಆತ ಕಾನ್ಸ್​​ಟೇಬಲ್​​ ಆಗಿ ಸಲ್ಲಿಸುತ್ತಿದ್ದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ, ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

Suspend: ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ PSI ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್!
ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್ ಆದರು!
TV9 Web
| Edited By: ಸಾಧು ಶ್ರೀನಾಥ್​|

Updated on:May 05, 2022 | 9:12 PM

Share

ಬೆಂಗಳೂರು: 545 ಪೊಲೀಸ್​ ಸಬ್​ ಇನ್ಸ್ ಪೆಕ್ಟರ್​ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳು (PSI Recruitment Scam) ನಡೆದು ಇಡೀ ಪೊಲೀಸ್​ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿರುವಾಗ ಅದೇ ಶಿಸ್ತುಬದ್ಧ ಪೊಲೀಸ್​ ಇಲಾಖೆಯಲ್ಲಿ ಇದ್ದುಕೊಂಡೂ ಸ್ವಯಂ ಅಪರಾಧ ಮಾಡಿಕೊಂಡಿರುವ ಅಭ್ಯರ್ಥಿಯನ್ನು ಈ ಹಿಂದೆ ಆತ ಕಾನ್ಸ್​​ಟೇಬಲ್​​ ಆಗಿ ಸಲ್ಲಿಸುತ್ತಿದ್ದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ, ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಬೆಂಗಳೂರಿನ ವಿವೇಕನಗರ ಠಾಣೆಯ  (Viveknagar constable) ಕಾನ್ಸ್​​ಟೇಬಲ್, ಹಾವೇರಿಯ​​ (Haveri) ಬಸನಗೌಡ ಕರಿಬಸವನಗೌಡ ಸೇವೆಯಿಂದ ಅಮಾನತುಗೊಂಡವರು (Suspend). ಸದರಿ ಕಾನ್ಸ್​​ಟೇಬಲ್​​ ಬಸನಗೌಡ PSI ತಾತ್ಕಾಲಿಕ ನೇಮಕಾತಿ ಪಟ್ಟಿಯಲ್ಲಿ 27ನೇ Rank ನಲ್ಲಿ ಉತ್ತೀರ್ಣನಾಗಿದ್ದರು. ಅವರು ಮಾಡಿದ ಅಪರಾಧವೆಂದರೆ ಆಯ್ಕೆ ಆದೇಶ ಪ್ರತಿ ಅಧಿಕೃತವಾಗಿ ಕೈಗೆ ಸಿಗುವ ಮೊದಲೇ ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದರು.

ಕಾನ್ಸಟೇಬಲ್ ಹುದ್ದೆಗೆ ರಾಜೀನಾಮೆ ನೀಡದೆ ಪಿಎಸ್ಐ ಬಟ್ಟೆ ಧರಿಸಿದ್ದ, ಪೊಲೀಸ್ ನಿಯಮಾವಳಿಯ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. PSI ಸಮವಸ್ತ್ರ ಧರಿಸಿದ್ದ ಫೋಟೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಇಲಾಖೆಗೆ ಮುಜುಗರ ತಂದನೆಂದು ವಿವೇಕನಗರ ಠಾಣೆ ಪಿಸಿ ಹಾವೇರಿಯ​​ ಬಸನಗೌಡ ಕರಿಬಸವನಗೌಡ ಸೇವೆಯಿಂದ ಅಮಾನತುಗೊಳಿಸಿ, ಕೇಂದ್ರ ವಿಭಾಗದ ಡಿಸಿಪಿ M.N.ಅನುಚೇತ್ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಇನ್ಸ್‌ಪೆಕ್ಟರ್ ಬರ್ತ್‌ಡೇ ಆಚರಣೆ! ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದ್ ತಮ್ಮ ಅಧೀನ ಪೊಲೀಸ್ ಠಾಣೆಯಲ್ಲೇ ಬರ್ತ್‌ಡೇ ಆಚರಣೆ ಮಾಡಿದ್ದಾರೆ. ಶಿಸ್ತುಬದ್ಧ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುವವರು ಪೊಲೀಸ್​ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ. ಆದರೂ ಪೊಲೀಸ್‌ ಇಲಾಖೆಯ ಮೂಲ ನಿಯಮವನ್ನೇ ಗಾಳಿಗೆ ತೂರಿದ ಇನ್ಸ್‌ಪೆಕ್ಟರ್‌ ಆನಂದ್ ತಮ್ಮ ಹುಟ್ಟುಹಬ್ಬವನ್ನು  ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿಯೇ ನಿನ್ನೆ ಗುರುವಾರ ಭರ್ಜರಿಯಾಗಿ ಆಚರಿಸಿಕೊಂಡಿದ್ದಾರೆ.

ಇದನ್ನೂ ಓದಿ: PSI Recruitment: ಪಿಎಸ್ಐ ನೇಮಕ ಆದೇಶ ಕೈ ಸೇರುವುದಕ್ಕೂ ಮುನ್ನವೇ ಹುಟ್ಟೂರಲ್ಲಿ ಸಮವಸ್ತ್ರ ಧರಿಸಿ ಸಂಭ್ರಮಿಸಿದ ಬಸನಗೌಡ!

Published On - 4:16 pm, Thu, 5 May 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ