AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suspend: ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ PSI ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್!

ಶಿಸ್ತುಬದ್ಧ ಪೊಲೀಸ್​ ಇಲಾಖೆಯಲ್ಲಿ ಇದ್ದುಕೊಂಡೂ ಸ್ವಯಂ ಅಪರಾಧ ಮಾಡಿಕೊಂಡಿರುವ ಅಭ್ಯರ್ಥಿಯನ್ನು ಈ ಹಿಂದೆ ಆತ ಕಾನ್ಸ್​​ಟೇಬಲ್​​ ಆಗಿ ಸಲ್ಲಿಸುತ್ತಿದ್ದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ, ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

Suspend: ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ PSI ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್!
ಅಧಿಕೃತವಾಗಿ ಆಯ್ಕೆಯಾಗುವುದಕ್ಕೂ ಮೊದಲೆ ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದ ಕಾನ್ಸ್​​ಟೇಬಲ್ ಸಸ್ಪೆಂಡ್ ಆದರು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 05, 2022 | 9:12 PM

ಬೆಂಗಳೂರು: 545 ಪೊಲೀಸ್​ ಸಬ್​ ಇನ್ಸ್ ಪೆಕ್ಟರ್​ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳು (PSI Recruitment Scam) ನಡೆದು ಇಡೀ ಪೊಲೀಸ್​ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿರುವಾಗ ಅದೇ ಶಿಸ್ತುಬದ್ಧ ಪೊಲೀಸ್​ ಇಲಾಖೆಯಲ್ಲಿ ಇದ್ದುಕೊಂಡೂ ಸ್ವಯಂ ಅಪರಾಧ ಮಾಡಿಕೊಂಡಿರುವ ಅಭ್ಯರ್ಥಿಯನ್ನು ಈ ಹಿಂದೆ ಆತ ಕಾನ್ಸ್​​ಟೇಬಲ್​​ ಆಗಿ ಸಲ್ಲಿಸುತ್ತಿದ್ದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ, ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಬೆಂಗಳೂರಿನ ವಿವೇಕನಗರ ಠಾಣೆಯ  (Viveknagar constable) ಕಾನ್ಸ್​​ಟೇಬಲ್, ಹಾವೇರಿಯ​​ (Haveri) ಬಸನಗೌಡ ಕರಿಬಸವನಗೌಡ ಸೇವೆಯಿಂದ ಅಮಾನತುಗೊಂಡವರು (Suspend). ಸದರಿ ಕಾನ್ಸ್​​ಟೇಬಲ್​​ ಬಸನಗೌಡ PSI ತಾತ್ಕಾಲಿಕ ನೇಮಕಾತಿ ಪಟ್ಟಿಯಲ್ಲಿ 27ನೇ Rank ನಲ್ಲಿ ಉತ್ತೀರ್ಣನಾಗಿದ್ದರು. ಅವರು ಮಾಡಿದ ಅಪರಾಧವೆಂದರೆ ಆಯ್ಕೆ ಆದೇಶ ಪ್ರತಿ ಅಧಿಕೃತವಾಗಿ ಕೈಗೆ ಸಿಗುವ ಮೊದಲೇ ಸಮವಸ್ತ್ರ ಧರಿಸಿ, ತಮ್ಮೂರಿನಲ್ಲಿ ಭಾಷಣ ಬಿಗಿದಿದ್ದರು.

ಕಾನ್ಸಟೇಬಲ್ ಹುದ್ದೆಗೆ ರಾಜೀನಾಮೆ ನೀಡದೆ ಪಿಎಸ್ಐ ಬಟ್ಟೆ ಧರಿಸಿದ್ದ, ಪೊಲೀಸ್ ನಿಯಮಾವಳಿಯ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. PSI ಸಮವಸ್ತ್ರ ಧರಿಸಿದ್ದ ಫೋಟೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಇಲಾಖೆಗೆ ಮುಜುಗರ ತಂದನೆಂದು ವಿವೇಕನಗರ ಠಾಣೆ ಪಿಸಿ ಹಾವೇರಿಯ​​ ಬಸನಗೌಡ ಕರಿಬಸವನಗೌಡ ಸೇವೆಯಿಂದ ಅಮಾನತುಗೊಳಿಸಿ, ಕೇಂದ್ರ ವಿಭಾಗದ ಡಿಸಿಪಿ M.N.ಅನುಚೇತ್ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಇನ್ಸ್‌ಪೆಕ್ಟರ್ ಬರ್ತ್‌ಡೇ ಆಚರಣೆ! ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದ್ ತಮ್ಮ ಅಧೀನ ಪೊಲೀಸ್ ಠಾಣೆಯಲ್ಲೇ ಬರ್ತ್‌ಡೇ ಆಚರಣೆ ಮಾಡಿದ್ದಾರೆ. ಶಿಸ್ತುಬದ್ಧ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುವವರು ಪೊಲೀಸ್​ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ. ಆದರೂ ಪೊಲೀಸ್‌ ಇಲಾಖೆಯ ಮೂಲ ನಿಯಮವನ್ನೇ ಗಾಳಿಗೆ ತೂರಿದ ಇನ್ಸ್‌ಪೆಕ್ಟರ್‌ ಆನಂದ್ ತಮ್ಮ ಹುಟ್ಟುಹಬ್ಬವನ್ನು  ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿಯೇ ನಿನ್ನೆ ಗುರುವಾರ ಭರ್ಜರಿಯಾಗಿ ಆಚರಿಸಿಕೊಂಡಿದ್ದಾರೆ.

ಇದನ್ನೂ ಓದಿ: PSI Recruitment: ಪಿಎಸ್ಐ ನೇಮಕ ಆದೇಶ ಕೈ ಸೇರುವುದಕ್ಕೂ ಮುನ್ನವೇ ಹುಟ್ಟೂರಲ್ಲಿ ಸಮವಸ್ತ್ರ ಧರಿಸಿ ಸಂಭ್ರಮಿಸಿದ ಬಸನಗೌಡ!

Published On - 4:16 pm, Thu, 5 May 22

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ