AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಮಾಜಿ ಎಡಿಜಿಪಿಯ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು

ಭಾರೀ ಸದ್ದು ಮಾಡಿದ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಎಡಿಜಿಪಿ ಅಮೃತ್ ಪೌಲ್ ಅವರ ಇನ್ನಷ್ಟು ಸ್ಫೋಟಕ ರಹಸ್ಯ ಬಟಾಬಯಲಾಗಿದೆ.

PSI Recruitment Scam: ಮಾಜಿ ಎಡಿಜಿಪಿಯ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು
ಮಾಜಿ ಎಡಿಜಿಪಿ ಅಮೃತ ಪೌಲ್
TV9 Web
| Edited By: |

Updated on:Sep 29, 2022 | 11:17 AM

Share

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ (PSI Recruitment Scam) ಬಂಧಿತರಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ವಿರುದ್ದ ಸಿಐಡಿ ಅಧಿಕಾರಿಗಳು ಹೆಚ್ಚುವರಿ ಚಾರ್ಜ್ ಶೀಟ್​ನ್ನು 1 ನೇ ಎಸಿಎಂಎಂ ಕೋರ್ಟ್​​ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ 1406 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದು, 78 ದಾಖಲೆಗಳು, 38 ಸಾಕ್ಷಿಗಳ ಉಲ್ಲೇಖಿಸಲಾಗಿದೆ.

ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲಾಗಿದೆ. ಅಮಾನತುಗೊಂಡಿರು ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಹಾಗೂ ಭಾತ್ಮೀದಾರನಾಗಿದ್ದ ಉದ್ಯಮಿ ಶಂಬುಲಿಂಗಸ್ವಾಮಿ ನಡುವೆ ಇಟ್ಟುಕೊಂಡಿದ್ದ ಕೋಡ್ ರಹಸ್ಯ ಬಟಾಬಯಲಾಗಿದೆ.

ಇದನ್ನೂ ಓದಿ: PSI Recruitment Scam: ಮುಂದಿನ ಆದೇಶದವರೆಗೂ ಮರುಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಶಂಭುಲಿಂಗಸ್ವಾಮಿ ಅಮೃತ್​ ಪೌಲ್ ಪರ ಹಣ ಸ್ವೀಕರಿಸುತ್ತಿದ್ದರು. 10 ಲಕ್ಷ ಹಣ ಕೊಟ್ಟರೆ 10 ಸಾವಿರ ರೂ ಎಂದು ನಮೂದು ಮಾಡಲಾಗಿದೆ. ಅಭ್ಯರ್ಥಿಗಳು ಕೊಡುವ ಹಣದಲ್ಲಿ ಕೊನೆಯ 2 ಸೊನ್ನೆ ಮೈನಸ್​​ ಮಾಡಿರುವುದು ಚಾರ್ಜ್​ಶೀಟ್​ ಮೂಲಕ ತಿಳಿದುಬಂದಿದೆ.

ಅಲ್ಲದೇ ಬೆಂಗಳೂರಿನ ಸಹಕಾರನಗರದಲ್ಲಿ ಮನೆ ಮಾಡಿಕೊಂಡಿದ್ದ ಪೌಲ್​​, ಹಗರಣದಲ್ಲಿ 1.41 ಕೋಟಿ ರೂ. ಹಣ ಪಡೆದಿದ್ದಾರೆ. ಪೌಲ್​ ಎದುರಿ ಮನೆ ನಿವಾಸಿಯಾಗಿರುವ ಶಂಭುಲಿಂಗಸ್ವಾಮಿ,ಹಣ ಪಡೆದಿದ್ದನ್ನು ಪೆನ್ ​ಡ್ರೈವ್​ನಲ್ಲಿ ದಾಖಲಿಸಿದ್ದರು. ಪೆನ್​ ಡ್ರೈವ್ ಪರಿಶೀಲನೆ ಕೋಡ್​ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಕೋಡ್ ಇಟ್ಟಿರುವ ಬಗ್ಗೆ ಸಿಐಡಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಮೃತ್ ಪಾಲ್ ಆಸ್ತಿ ಎಲ್ಲೆಲ್ಲಿದೆ.?

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಹೊಸಹುಡ್ಯಾ ಗ್ರಾಮದಲ್ಲಿ ಸರ್ವೆ ನಂಬರ್ 247 ರಲ್ಲಿರೋ ಫಾರ್ಮೌಸ್ 4 ಎಕರೆಯಷ್ಟು ಜಾಗದಲ್ಲಿ ಫಾರಂ ಹೌಸ್. ಈ ಫಾರ್ಮೌಸ್ ಪೌಲ್ ತನ್ನ ತಂದೆ ನೇತಾರಾಮ್ ಬನ್ಸಾಲ್ ಹೆಸರಲ್ಲಿ ಜಮೀನನ್ನ ನೋಂದಣಿ ಮಾಡಲಾಗಿದೆ. ಫಾರಾಂ ಹೌಸ್​ನ ಆಸುಪಾಸಿನ 8 ಎಕರೆ ಜಮೀನನ್ನ ಕೂಡ ಪೌಲ್ ಇತ್ತೀಚಿಗೆ ಪರ್ಚೇಸ್ ಮಾಡಿದ್ದಾರಂತೆ. ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟ ನೆಲಪ್ಪನಹಳ್ಳಿ ಬಳಿ 8 ಎಕರೆ 29 ಗುಂಟೆ ಜಮೀನು ತಂದೆ ನೇತಾರಾಮ್ ಹೆಸರಲ್ಲಿ ರಿಜಿಸ್ಟರ್ ಮಾಡಿಸಲಾಗಿದೆ. ಅದೇ ರೀತಿ ನೆಲಪ್ಪನಹಳ್ಳಿ ಸರ್ವೆ ನಂಬರ್ 49 ರಲ್ಲಿ 4 ಎಕರೆ 39 ಗುಂಟೆ ಜಾಗ, ನೆಲಪ್ಪನಹಳ್ಳಿಯಲ್ಲೇ 3 ಎಕರೆ 30 ಗುಂಟೆ ಜಾಗ ಪಾಲ್ ತಂದೆ ಹೆಸರಲ್ಲಿ ರಿಜಿಸ್ಟರ್ ಮಾಡಲಾಗಿದೆ. ಇತ್ತೀಚಿಗೆ ಪರ್ಚೇಸ್ ಮಾಡಿದ್ದ ಜಾಗವನ್ನ ಜಾತವಾರ ಗ್ರಾಮದ ಜಗದೀಶ ಎಂಬವರ ಮಧ್ಯಸ್ಥಿಕೆಯಲ್ಲಿ ಪಾಲ್ ಕೊಂಡುಕೊಂಡಿದ್ದರಂತೆ.

Published On - 11:16 am, Thu, 29 September 22

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು