AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಮಾಜಿ ಎಡಿಜಿಪಿಯ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು

ಭಾರೀ ಸದ್ದು ಮಾಡಿದ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಎಡಿಜಿಪಿ ಅಮೃತ್ ಪೌಲ್ ಅವರ ಇನ್ನಷ್ಟು ಸ್ಫೋಟಕ ರಹಸ್ಯ ಬಟಾಬಯಲಾಗಿದೆ.

PSI Recruitment Scam: ಮಾಜಿ ಎಡಿಜಿಪಿಯ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು
ಮಾಜಿ ಎಡಿಜಿಪಿ ಅಮೃತ ಪೌಲ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Sep 29, 2022 | 11:17 AM

Share

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ (PSI Recruitment Scam) ಬಂಧಿತರಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ವಿರುದ್ದ ಸಿಐಡಿ ಅಧಿಕಾರಿಗಳು ಹೆಚ್ಚುವರಿ ಚಾರ್ಜ್ ಶೀಟ್​ನ್ನು 1 ನೇ ಎಸಿಎಂಎಂ ಕೋರ್ಟ್​​ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ 1406 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದು, 78 ದಾಖಲೆಗಳು, 38 ಸಾಕ್ಷಿಗಳ ಉಲ್ಲೇಖಿಸಲಾಗಿದೆ.

ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲು ಚಾರ್ಜ್ ಶೀಟ್ ನಲ್ಲಿ ಸ್ಫೋಟಕ ಕೋಡ್ ವರ್ಡ್​ ರಹಸ್ಯ ಬಯಲಾಗಿದೆ. ಅಮಾನತುಗೊಂಡಿರು ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಹಾಗೂ ಭಾತ್ಮೀದಾರನಾಗಿದ್ದ ಉದ್ಯಮಿ ಶಂಬುಲಿಂಗಸ್ವಾಮಿ ನಡುವೆ ಇಟ್ಟುಕೊಂಡಿದ್ದ ಕೋಡ್ ರಹಸ್ಯ ಬಟಾಬಯಲಾಗಿದೆ.

ಇದನ್ನೂ ಓದಿ: PSI Recruitment Scam: ಮುಂದಿನ ಆದೇಶದವರೆಗೂ ಮರುಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಶಂಭುಲಿಂಗಸ್ವಾಮಿ ಅಮೃತ್​ ಪೌಲ್ ಪರ ಹಣ ಸ್ವೀಕರಿಸುತ್ತಿದ್ದರು. 10 ಲಕ್ಷ ಹಣ ಕೊಟ್ಟರೆ 10 ಸಾವಿರ ರೂ ಎಂದು ನಮೂದು ಮಾಡಲಾಗಿದೆ. ಅಭ್ಯರ್ಥಿಗಳು ಕೊಡುವ ಹಣದಲ್ಲಿ ಕೊನೆಯ 2 ಸೊನ್ನೆ ಮೈನಸ್​​ ಮಾಡಿರುವುದು ಚಾರ್ಜ್​ಶೀಟ್​ ಮೂಲಕ ತಿಳಿದುಬಂದಿದೆ.

ಅಲ್ಲದೇ ಬೆಂಗಳೂರಿನ ಸಹಕಾರನಗರದಲ್ಲಿ ಮನೆ ಮಾಡಿಕೊಂಡಿದ್ದ ಪೌಲ್​​, ಹಗರಣದಲ್ಲಿ 1.41 ಕೋಟಿ ರೂ. ಹಣ ಪಡೆದಿದ್ದಾರೆ. ಪೌಲ್​ ಎದುರಿ ಮನೆ ನಿವಾಸಿಯಾಗಿರುವ ಶಂಭುಲಿಂಗಸ್ವಾಮಿ,ಹಣ ಪಡೆದಿದ್ದನ್ನು ಪೆನ್ ​ಡ್ರೈವ್​ನಲ್ಲಿ ದಾಖಲಿಸಿದ್ದರು. ಪೆನ್​ ಡ್ರೈವ್ ಪರಿಶೀಲನೆ ಕೋಡ್​ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಕೋಡ್ ಇಟ್ಟಿರುವ ಬಗ್ಗೆ ಸಿಐಡಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಮೃತ್ ಪಾಲ್ ಆಸ್ತಿ ಎಲ್ಲೆಲ್ಲಿದೆ.?

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಹೊಸಹುಡ್ಯಾ ಗ್ರಾಮದಲ್ಲಿ ಸರ್ವೆ ನಂಬರ್ 247 ರಲ್ಲಿರೋ ಫಾರ್ಮೌಸ್ 4 ಎಕರೆಯಷ್ಟು ಜಾಗದಲ್ಲಿ ಫಾರಂ ಹೌಸ್. ಈ ಫಾರ್ಮೌಸ್ ಪೌಲ್ ತನ್ನ ತಂದೆ ನೇತಾರಾಮ್ ಬನ್ಸಾಲ್ ಹೆಸರಲ್ಲಿ ಜಮೀನನ್ನ ನೋಂದಣಿ ಮಾಡಲಾಗಿದೆ. ಫಾರಾಂ ಹೌಸ್​ನ ಆಸುಪಾಸಿನ 8 ಎಕರೆ ಜಮೀನನ್ನ ಕೂಡ ಪೌಲ್ ಇತ್ತೀಚಿಗೆ ಪರ್ಚೇಸ್ ಮಾಡಿದ್ದಾರಂತೆ. ಚಿಕ್ಕಬಳ್ಳಾಪುರ ತಾಲೂಕಿನ ಶಿಡ್ಲಘಟ್ಟ ನೆಲಪ್ಪನಹಳ್ಳಿ ಬಳಿ 8 ಎಕರೆ 29 ಗುಂಟೆ ಜಮೀನು ತಂದೆ ನೇತಾರಾಮ್ ಹೆಸರಲ್ಲಿ ರಿಜಿಸ್ಟರ್ ಮಾಡಿಸಲಾಗಿದೆ. ಅದೇ ರೀತಿ ನೆಲಪ್ಪನಹಳ್ಳಿ ಸರ್ವೆ ನಂಬರ್ 49 ರಲ್ಲಿ 4 ಎಕರೆ 39 ಗುಂಟೆ ಜಾಗ, ನೆಲಪ್ಪನಹಳ್ಳಿಯಲ್ಲೇ 3 ಎಕರೆ 30 ಗುಂಟೆ ಜಾಗ ಪಾಲ್ ತಂದೆ ಹೆಸರಲ್ಲಿ ರಿಜಿಸ್ಟರ್ ಮಾಡಲಾಗಿದೆ. ಇತ್ತೀಚಿಗೆ ಪರ್ಚೇಸ್ ಮಾಡಿದ್ದ ಜಾಗವನ್ನ ಜಾತವಾರ ಗ್ರಾಮದ ಜಗದೀಶ ಎಂಬವರ ಮಧ್ಯಸ್ಥಿಕೆಯಲ್ಲಿ ಪಾಲ್ ಕೊಂಡುಕೊಂಡಿದ್ದರಂತೆ.

Published On - 11:16 am, Thu, 29 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!