AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್‌ಐ ಅಕ್ರಮದ ಆರೋಪಿಯಲ್ಲದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಸಾಧ್ಯವಿಲ್ಲ; ಹೈಕೋರ್ಟ್​​ಗೆ ತಿಳಿಸಿದ ಸರ್ಕಾರ

ಸರ್ಕಾರದ ವರದಿ ಪರಿಶೀಲಿಸಿದ ಪೀಠವು ಹಾಗಾದರೆ, ಅರ್ಜಿಗಳನ್ನು ಅರ್ಹತೆ ಆಧಾರದಲ್ಲಿ ಜುಲೈ 10 ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುವುದು. ಈ ಬಗ್ಗೆ ಎಲ್ಲಾ ವಕೀಲರಿಗೂ ಲಿಖಿತ ವಾದ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.

ಪಿಎಸ್‌ಐ ಅಕ್ರಮದ ಆರೋಪಿಯಲ್ಲದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಸಾಧ್ಯವಿಲ್ಲ; ಹೈಕೋರ್ಟ್​​ಗೆ ತಿಳಿಸಿದ ಸರ್ಕಾರ
ಹೈಕೋರ್ಟ್
Ramesha M
| Edited By: |

Updated on: Jul 05, 2023 | 8:10 PM

Share

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಅಕ್ರಮದಲ್ಲಿ (PSI Recruitment Scam) ಭಾಗಿಯಾರುವ 35 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಸಾಧ್ಯವಿಲ್ಲವೆಂದು ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ  (Karnataka High Court) ತಿಳಿಸಿದೆ. ಇದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಬುಧವಾರ ರಾಜ್ಯ ಸರ್ಕಾರ ಸಲ್ಲಿಸಿದೆ. ಇದನ್ನು ಪರಿಶೀಲಿಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಹತೆ ಆಧಾರದಲ್ಲಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಸೋಮವಾರ ನಡೆಸಲಾಗುವುದು ಎಂದು ಮೌಖಿಕವಾಗಿ ಹೇಳಿತು.

ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಸಿಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಪಿಎಸ್ಐ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳ ಪೈಕಿ ಆರೋಪ ಎದುರಿಸುತ್ತಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ವಿಶೇಷ ಪರೀಕ್ಷೆ ನಡೆಸಲಾಗದು. ಆರೋಪಿಯಲ್ಲದವರ ಸಾಮರ್ಥ್ಯ ಅಳೆಯಲು ವಿಶೇಷ ಪರೀಕ್ಷೆ ಸಾಧ್ಯವಿಲ್ಲ. ಈ ಸಂಬಂಧ ಸರ್ಕಾರದ ಮಟ್ಟದಲ್ಲಿನ ಚರ್ಚೆಯ ವರದಿಯನ್ನು ನ್ಯಾಯಾಲಯಕ್ಕೆ ಗೌಪ್ಯವಾಗಿ ಸಲ್ಲಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಸರ್ಕಾರದ ವರದಿ ಪರಿಶೀಲಿಸಿದ ಪೀಠವು ಹಾಗಾದರೆ, ಅರ್ಜಿಗಳನ್ನು ಅರ್ಹತೆ ಆಧಾರದಲ್ಲಿ ಜುಲೈ 10 ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುವುದು. ಈ ಬಗ್ಗೆ ಎಲ್ಲಾ ವಕೀಲರಿಗೂ ಲಿಖಿತ ವಾದ ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesha M
Ramesha M
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ