AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಗು ಎಂದು ಮನೆ ಬಿಟ್ಟು ಹೋದ ಅಪ್ಪ; ಪಿಎಸ್ಐ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಜೀವನ ಹೇಗಿದೆ ಗೊತ್ತಾ?

ರಚನಾ ಕುಟುಂಬಸ್ಥರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿದ್ದಾರೆ. ರಚನಾ ಮುತ್ತಲಗೇರಿ, ದೊಡಮ್ಮ ಕಸ್ತೂರಿಬಾಯಿ ಮನೆಯಲ್ಲೇ‌ ಉಳಿದು ಶಿಕ್ಷಣ ಪಡೆದಿದ್ದರು. ಪೊಲೀಸ್ ಠಾಣೆಯಲ್ಲಿ ರಚನಾ‌ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಗು ಎಂದು ಮನೆ ಬಿಟ್ಟು ಹೋದ ಅಪ್ಪ; ಪಿಎಸ್ಐ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಜೀವನ ಹೇಗಿದೆ ಗೊತ್ತಾ?
ರಚನಾ ಮುತ್ತಲಗೇರಿ ದೊಡ್ಡಮ್ಮ ಕಸ್ತೂರಿಬಾಯಿ
TV9 Web
| Edited By: ಆಯೇಷಾ ಬಾನು|

Updated on:May 04, 2022 | 8:51 AM

Share

ವಿಜಯಪುರ: ರಾಜ್ಯದಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮದಿಂದಾಗಿ ಅದೆಷ್ಟೂ ಬಡವರ ಕನಸು ನುಚ್ಚು ನೂರಾಗಿದೆ. ಯಾರೂ ದುಡ್ಡಿದ್ದವರು ಅಕ್ರಮದಲ್ಲಿ ಭಾಗಿಯಾಗಿದ್ರೆ, ಕಷ್ಟು ಪಟ್ಟು ಓದಿ ಪರೀಕ್ಷೆ ಬರೆದ ಅದೆಷ್ಟೋ ಬಡಮಕ್ಕಳು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ಮರು ಪರೀಕ್ಷೆ ನಡೆಸುವಂತೆ ಸರ್ಕಾರ ಘೋಷಣೆ ಮಾಡಿದೆ. ಆದ್ರೆ ಪಿಎಸ್ಐ ಪರೀಕ್ಷೆ ಬರೆದು ಸೆಲೆಕ್ಟ್ ಆಗಿದ್ದ ಬಡ ಅಭ್ಯರ್ಥಿಗಳು ಸರ್ಕಾರದ ಆದೇಶದಿಂದ ಕಣ್ಣೀರಿಡುವಂತಾಗಿದೆ. ಯಾರೂ ಮಾಡಿದ ತಪ್ಪಿಗೆ ನಮಗ್ಯಾಕೆ ಶಿಕ್ಷೆ. ಪಿಎಸ್ಐ ಪರೀಕ್ಷೆ ಬರೆಯಲು ಯಾವು 6 ವರ್ಷಕ್ಕೂ ಹೆಚ್ಚು ಕಾಲ ಅಭ್ಯಾಸ ಮಾಡಿದ್ದೇವೆ. ಕೋಚಿಂಗ್ ಕ್ಲ್ಯಾಸ್ಗಳಿಗೆ ಹಣ ಸುರಿದಿದ್ದೇವೆ ಎಂದು ಗೋಳಾಡಿದ್ದಾರೆ. ಸದ್ಯ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಚನಾ ಮುತ್ತಲಗೇರಿ ಕುಟುಂಬಸ್ಥರು ಕಣ್ಣಿರು ಹಾಕಿದ್ದಾರೆ.

ರಚನಾ ಕುಟುಂಬಸ್ಥರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿದ್ದಾರೆ. ರಚನಾ ಮುತ್ತಲಗೇರಿ, ದೊಡಮ್ಮ ಕಸ್ತೂರಿಬಾಯಿ ಮನೆಯಲ್ಲೇ‌ ಉಳಿದು ಶಿಕ್ಷಣ ಪಡೆದಿದ್ದರು. ಪೊಲೀಸ್ ಠಾಣೆಯಲ್ಲಿ ರಚನಾ‌ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ರಚನಾ ಸಂಪರ್ಕ ಇಲ್ಲದೆ ದೊಡ್ಡಮ್ಮ ಹಾಗೂ ಕುಟುಂಬಸ್ಥರು ಕಂಗಾಲಾಗಿದ್ದಾರೆ. ರಚನಾ ಜೊತೆಗೆ ತೆರಳಿದ್ದ ಆಕೆಯ ಸಹೋದರ ವಿಕ್ರಮ ಮೊಬೈಲ್ ಕೂಡಾ ಬಂದ್ ಆಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ರಚನಾ ತಾಯಿ ಸಾವಿತ್ರಿ, ನಮ್ಮ ಮಗಳು ಶಾಲೆಯಲ್ಲಿ ಯಾವತ್ತಿಗೂ ಮೊದಲ ಸ್ಥಾನ ಪಡೆಯುತ್ತಿದ್ದಳು. ಅವಳ ವಿರುದ್ಧ ಈಗ ಕೇಳಿ ಬಂದಿರುವ ಆರೋಪದ ಬಗ್ಗೆ ನಮಗೆನೂ ಗೊತ್ತಿಲ್ಲ. ದುಡಿದು ಜೀವನ ನಡೆಸುವ ನಮಗೆ ಅಷ್ಟು ಹಣ ಎಲ್ಲಿಂದ ತರೋಕಾಗುತ್ತೆ ಎಂದ ಕಣ್ಣೀರು ಹಾಕಿದ್ದಾರೆ. ಪ್ರಕರಣದ ಬಗ್ಗೆ ತಿನಿಖೆ ನಡೆಯುತ್ತಿದ್ದು ಸತ್ಯ ಏನೆಂದು ಹೊರಗೆ ಬರಲಿ. ಸರ್ಕಾರ ಏನು ನಿರ್ಧಾರ ಮಾಡುತ್ತೋ ಅದಕ್ಕೆ ನಾವು ಬದ್ದರಾಗಿದ್ದೇವೆ. ಈ ಹಿಂದೆ ಎರಡು ಸಲ ರಚನಾ ಪಿಎಸ್ಐ ಪರೀಕ್ಷೆ ಬರೆದಿದ್ದಳು ಆದರೆ ಆಗ ಕೆಲವೇ ಅಂಕಗಳಿಂದ ಪಾಸ್ ಆಗಿರಲಿಲ್ಲ. ಆದರೂ ಆಕೆ ಕಠಿಣ ಪರಿಶ್ರಮದಿಂದ ಹಠ ಹಿಡಿದು ಪರೀಕ್ಷೆ ಬರೆದು ಪಾಸ್ ಆಗಿದ್ದಾಳೆ. ಇನ್ನೂ ಹತ್ತು ಸಲ ಬೇಕಾದರೂ ಆಕೆ ಪರೀಕ್ಷೆ ಬರೆಯಲು ತಯಾರಿದ್ದಾಳೆ ಎಂದು ರಚನಾ ಮುತ್ತಲಗೇರಿ ದೊಡ್ಡಮ್ಮ ಕಸ್ತೂರಿಬಾಯಿ ಹೇಳಿದ್ರು.

ಪಿಎಸ್​ಐ ಅಕ್ರಮದ ಬಗೆಗಿನ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಣ್ಣು ಮಗು ಎಂಬ ಕಾರಣಕ್ಕೆ ಬಿಟ್ಟು ಹೋದ ತಂದೆ ರಚನಾ ಹುಟ್ಟಿದ ಬಳಿಕ ಹೆಣ್ಣು ಮಗು ಎನ್ನುವ ಕಾರಣಕ್ಕೆ ತಾಯಿ ಹಾಗೂ ರಚನಾಳನ್ನು ಅವರ ತಂದೆ ಬಿಟ್ಟು ಹೋದ್ರು. ಬಳಿಕ ತಾಯಿ ಹಾಗೂ ದೊಡ್ಡಮ್ಮನ ಜೊತೆಗೆ ತಾತನ ಮನೆಯಲ್ಲಿ ರಚನಾ ಬೆಳೆದ್ರು. ರಚನಾ ತಾಯಿ ಸಾವಿತ್ರಿ ಬೀದರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. ರಚನಾ ಬಸವನಬಾಗೇವಾಡಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾಳೆ. ಬಾಗಲಕೋಟೆಯ ಶಿಶುವಿಹಾರದಲ್ಲಿ ಪ್ರೌಢಶಿಕ್ಷಣ, ಅಲ್ಲಿನ ವಾಗ್ದೇವಿ ಸೈನ್ಸ್ ಪಿಯು ಕಾಲೇಜಿನಲ್ಲಿ ಪಿಯು ಶಿಕ್ಷಣ ಬಳಿಕ ಬೆಳಗಾವಿಯ ಬಾಳೆಕುಂದ್ರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ (ಎಲೆಕ್ಟ್ರಿಕಲ್) ಪಡೆದಿದ್ದಾರೆ. ಸದ್ಯ ವಿಜಯಪುರ ಜಿಲ್ಲೆ ಕೂಡಗಿಯ NTPC ಯಲ್ಲಿ ಮೂರು ವರ್ಷಗಳಿಂದ ಎಕ್ಸಿಕ್ಯುಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಎರಡು ಬಾರಿ ಪಿಎಸ್ಐ ಪರೀಕ್ಷೆ ಬರೆದು ಆಯ್ಕೆಯಾಗಿರಲಿಲ್ಲ. ಹೆಣ್ಣು ಮಗು ಎಂದು ತಂದೆ ಬಿಟ್ಟು ಹೋದ ಕಾರಣ ರಚನಾ ಗಂಡು ಮಕ್ಕಳಂತೆಯೆ ಜೀವನ ಶೈಲಿ ರೂಪಿಸಿಕೊಂಡಿದ್ದರು. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಾಗ ಅಧಿಕಾರಿಗಳು ಆಕೆಯ ಫೋಟೋ ನೋಡಿ ಕನ್ಫ್ಯೂಸ್ ಆಗಿದ್ದರಂತೆ. ಹುಡುಗಿ ಹೆಸರಿಗೆ ಹುಡುಗನ ಫೋಟೋ ಹಾಕಿರಬಹುದು ಎಂದು ಅಂದಾಜಿಸಿದ್ದರಂತೆ. ಸಂದರ್ಶನ ನಡೆಸೋ ಮುಂಚೆ ರಚನಾಳನ್ನು ಕಚೇರಿಗೆ ಕರೆಸಿ ಆಕೆಯನ್ನು ನೋಡಿದ ಬಳಿಕವೇ ಇವಳೆ ರಚನಾ ಎಂದು ಅಧಿಕಾರಿಗಳು ಖಚಿತ‌ ಪಡಿಸಿಕೊಂಡಿದ್ದರಂತೆ. ಪೊಲೀಸ್ ಅಧಿಕಾರಿಯಾಗಬೇಕು, ಹುಡುಗರಂತೆ ಕಾಣಬೇಕು ಎಂದು ಹಾಗೇ ಡ್ರೇಸ್, ಹೆರ್‌ ಸ್ಟೈಲ್ ಮಾಡಿಕೊಂಡಿದ್ದರಂತೆ ರಚನಾ.

ಇದನ್ನೂ ಓದಿ: ಫೋರ್ಜರಿ ಸಹಿ ಮಾಡಿ ಹಣ ಮಂಜೂರಾತಿಗೆ ಯತ್ನ! ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ರವಿಕುಮಾರ್ ವಿರುದ್ಧ ಎಫ್ಐಆರ್

Published On - 8:51 am, Wed, 4 May 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ