AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಕಚೇರಿ ಕೃಷ್ಣಾದಲ್ಲಿ ಗರಂ ಆದ ಪಿ.ಟಿ. ಪರಮೇಶ್ವರ ನಾಯಕ್, ಸಿಬ್ಬಂದಿಗೆ ಜೋರು ಧ್ವನಿಯಲ್ಲಿ ಪ್ರಶ್ನೆ..

ಆಯ್ತಪ್ಪಾ, ಆ ಮುಖ್ಯಮಂತ್ರಿ ಇದ್ದಾಗ ಆ ಭಾಗದಲ್ಲಿ ಬರುತ್ತಿದ್ದೆವು.. ಈ ಮುಖ್ಯಮಂತ್ರಿ ಇದ್ದಾಗ ಈ ಭಾಗದಲ್ಲಿ ಬರ್ತಿದ್ದೇವೆ, ಏನಿದೆ ಅಂತಾ ನಮಗೂ ಗೊತ್ತಾಗಬೇಕಲ್ವಾ ಎಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯಕ್ ಗರಂ ಆಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಗರಂ ಆದ ಪಿ.ಟಿ. ಪರಮೇಶ್ವರ ನಾಯಕ್, ಸಿಬ್ಬಂದಿಗೆ ಜೋರು ಧ್ವನಿಯಲ್ಲಿ ಪ್ರಶ್ನೆ..
ಪಿ.ಟಿ.ಪರಮೇಶ್ವರ ನಾಯಕ್
ಆಯೇಷಾ ಬಾನು
| Edited By: |

Updated on: Dec 24, 2020 | 11:55 AM

Share

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಗರಂ ಆದ ಪ್ರಸಂಗ ನಡೆದಿದೆ. ಅಲ್ಲಿದ್ದ ಸಿಬ್ಬಂದಿಯೊಂದಿಗೆ ಜೋರು ಧ್ವನಿಯಲ್ಲಿ ಕೂಗಾಡಿದ್ದಾರೆ. ಪಿ.ಟಿ.ಪರಮೇಶ್ವರ ನಾಯಕ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಕೃಷ್ಣಾಗೆ ಆಗಮಿಸಿದ್ದ ವೇಳೆ ಇಂತಹ ಘಟನೆ ನಡೆದಿದೆ.

ಪಿ.ಟಿ.ಪರಮೇಶ್ವರ ನಾಯಕ್ ಇದ್ದ ಕಾರು ಕೃಷ್ಣಾದೊಳಗೆ ಪ್ರವೇಶಿಸಿದಾಗ ಸಂಚಾರಿ ಪೊಲೀಸ್ ಸಿಬ್ಬಂದಿಯವರು ಎಡ ಭಾಗದಲ್ಲಿ ತೆರಳುವಂತೆ ಸೂಚಿಸಿದ್ದಾರೆ. ಆದರೆ ಸಂಚಾರಿ ಪೊಲೀಸ್ ಸಿಬ್ಬಂದಿ ಸೂಚನೆ ನಿರ್ಲಕ್ಷಿಸಿ ಪರಮೇಶ್ವರ ನಾಯ್ಕ್ ಕಾರು ಚಾಲಕ ಎಡಭಾಗಕ್ಕೆ ತೆರಳದೇ ನೇರವಾಗಿ ಬಲಭಾಗದಲ್ಲಿ ಚಲಾಯಿಸಿದ್ದಾರೆ.

ಬಳಿಕ ಕಾರಿನಿಂದ ಇಳಿದ ಪರಮೇಶ್ವರ ನಾಯಕ್ ಆಯ್ತಪ್ಪಾ! ಆ ಮುಖ್ಯಮಂತ್ರಿ ಇದ್ದಾಗ ಆ ಭಾಗದಲ್ಲಿ ಬರುತ್ತಿದ್ದೆವು.. ಈ ಮುಖ್ಯಮಂತ್ರಿ ಇದ್ದಾಗ ಈ ಭಾಗದಲ್ಲಿ ಬರ್ತಿದ್ದೇವೆ! ಏನಿದೆ ಅಂತಾ ನಮಗೂ ಗೊತ್ತಾಗಬೇಕಲ್ವಾ? ಎಂದು ಜೋರು ಧ್ವನಿಯಲ್ಲಿ ಹೇಳಿದ್ದಾರೆ. ಪರಮೇಶ್ವರ ನಾಯಕ್ ಅವರ ಜೋರು ಧ್ವನಿ ಕೇಳಿಸುತ್ತಿದ್ದಂತೆ ಸಿಎಂ ಸಲಹೆಗಾರ ಲಕ್ಷ್ಮೀನಾರಾಯಣ ಏನಾಯ್ತು ಅಂತಾ ವಿಚಾರಿಸಿ ಕೃಷ್ಣಾ ಒಳಗೆ ಕರೆದೊಯ್ದು ಸಮಾಧಾನಪಡಿಸಿದ್ರು.

ಟೀ ಕುಡಿಯುವ ವೇಳೆ.. ಉಸಿರು ಚೆಲ್ಲಿದ ಕುಂದಾನಗರಿಯ ಗ್ರಾ.ಪಂ ಚುನಾವಣೆ ಅಭ್ಯರ್ಥಿ

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ