AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ಆರೋಪ; ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧನ

ಕ್ಷುಲಕ ಕಾರಣಕ್ಕೆ 4 ದಿನಗಳ ಹಿಂದೆ ಶರಣಾ ನಾಯ್ಕ್ ಮತ್ತು ಅವರ ಕುಟುಂಬಸ್ಥರ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸುವ ದೃಶ್ಯ ವೈರಲ್ ಆಗಿತ್ತು. ಈ ಹಲ್ಲೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು...

ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ಆರೋಪ; ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧನ
ಶರಣಾ ನಾಯ್ಕ್ ಕುಟುಂಬಸ್ಥರು
TV9 Web
| Edited By: |

Updated on: Jul 04, 2021 | 3:07 PM

Share

ದಾವಣಗೆರೆ: ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸಹೋದರರಾಗಿರುವ ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧಿಸಲಾಗಿದೆ.

ಕ್ಷುಲಕ ಕಾರಣಕ್ಕೆ 4 ದಿನಗಳ ಹಿಂದೆ ಶರಣಾ ನಾಯ್ಕ್ ಮತ್ತು ಅವರ ಕುಟುಂಬಸ್ಥರ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸುವ ದೃಶ್ಯ ವೈರಲ್ ಆಗಿತ್ತು. ಈ ಹಲ್ಲೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಹಿನ್ನೆಲೆಯಲ್ಲಿ ಮತ್ತೆ ನಿನ್ನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ಹಲ್ಲೆ ನಡೆಸಿದ್ದಾರೆ. ಶರಣಾ ನಾಯ್ಕ್, ಮಗನ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ, ನ್ಯಾಯಕ್ಕಾಗಿ ನಿನ್ನೆ ಅರಸೀಕೆರೆ ಪೊಲೀಸ್ ಠಾಣೆ ಮುಂದೆ ಗಾಯಾಳು ಶರಣ್ ನಾಯ್ಕ್ ಕುಟುಂಬ ಧರಣಿ ನಡೆಸಿದೆ. ಪ್ರಕರಣದ ಗಂಭೀರವಾಗುತ್ತಿದ್ದಂತೆ ಅರಸೀಕೆರೆ ಪೊಲೀಸರು ಶಿವಾಜಿ ನಾಯ್ಕ್ ಬಂಧಿಸಿದ್ದಾರೆ.

ಘಟನೆ ವಿವರ ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀಪುರದಲ್ಲಿ ಹಾರೆಯಿಂದ ಶರಣಾ ನಾಯ್ಕ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದ ನಿವಾಸಿ ಹಲ್ಲೆಗೊಳಗಾದ ವ್ಯಕ್ತಿ. ಗಾಯಾಳು ಶರಣ ನಾಯ್ಕ್ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಘಟನೆ ನಡೆದಿದ್ದು, ಮನೆ ಜಾಗದ ಸಲುವಾಗಿ ಶರಣ ನಾಯ್ಕ್ ಅವರ ಮೇಲೆ ಹಲ್ಲೆ ನಡೆದಿದೆ. ಘಟನೆ ವೀಡಿಯೋದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತು. ಆರಂಭದಲ್ಲಿ ದೈಹಿಕವಾಗಿ ಹಲ್ಲೆ ನಡೆಸಿ, ವ್ಯಕ್ತಿಯನ್ನು ಸುಮ್ಮನಾಗಿಸಲು ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಯತ್ನಿಸುತ್ತಾರೆ. ಆ ವೇಳೆ ವೃದ್ಧನನ್ನು ನೆಲದ ಮೇಲೆ ಕೆಡವಿ, ಧಮ್ಕಿ ಹಾಕಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮನೆಯ ಹೆಣ್ಣು ಮಕ್ಕಳು ಅಡ್ಡ ಬಂದರೂ ಕೇರ್ ಮಾಡದೆ ಶಿವಾಜಿ ಆರ್ಭಟು ತೋರಿದ್ದಾರೆ. ಬಳಿಕ, ಅಷ್ಟೇ ಸಾಲದು ಅಂತಾ ಅಲ್ಲೆ ಇದ್ದ ಹಾರೆಯನ್ನು ತೆಗೆದುಕೊಂಡು ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸೋದರನಿಂದ ಶರಣಾ ನಾಯ್ಕ್ ಕುಟುಂಬದವರ ಮೇಲೆ ಮತ್ತೆ ಹಲ್ಲೆ ಆರೋಪ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ