Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ಆರೋಪ; ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧನ

ಕ್ಷುಲಕ ಕಾರಣಕ್ಕೆ 4 ದಿನಗಳ ಹಿಂದೆ ಶರಣಾ ನಾಯ್ಕ್ ಮತ್ತು ಅವರ ಕುಟುಂಬಸ್ಥರ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸುವ ದೃಶ್ಯ ವೈರಲ್ ಆಗಿತ್ತು. ಈ ಹಲ್ಲೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು...

ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ಆರೋಪ; ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧನ
ಶರಣಾ ನಾಯ್ಕ್ ಕುಟುಂಬಸ್ಥರು
Follow us
TV9 Web
| Updated By: ಆಯೇಷಾ ಬಾನು

Updated on: Jul 04, 2021 | 3:07 PM

ದಾವಣಗೆರೆ: ಶರಣಾ ನಾಯ್ಕ್ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸಹೋದರರಾಗಿರುವ ಬಿಜೆಪಿ ಮುಖಂಡ ಪಿ.ಟಿ.ಶಿವಾಜಿ ನಾಯ್ಕ್‌ ಬಂಧಿಸಲಾಗಿದೆ.

ಕ್ಷುಲಕ ಕಾರಣಕ್ಕೆ 4 ದಿನಗಳ ಹಿಂದೆ ಶರಣಾ ನಾಯ್ಕ್ ಮತ್ತು ಅವರ ಕುಟುಂಬಸ್ಥರ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸುವ ದೃಶ್ಯ ವೈರಲ್ ಆಗಿತ್ತು. ಈ ಹಲ್ಲೆ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಹಿನ್ನೆಲೆಯಲ್ಲಿ ಮತ್ತೆ ನಿನ್ನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಲ್ಲಿ ಹಲ್ಲೆ ನಡೆಸಿದ್ದಾರೆ. ಶರಣಾ ನಾಯ್ಕ್, ಮಗನ ಮೇಲೆ ಶಿವಾಜಿ ನಾಯ್ಕ್ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ, ನ್ಯಾಯಕ್ಕಾಗಿ ನಿನ್ನೆ ಅರಸೀಕೆರೆ ಪೊಲೀಸ್ ಠಾಣೆ ಮುಂದೆ ಗಾಯಾಳು ಶರಣ್ ನಾಯ್ಕ್ ಕುಟುಂಬ ಧರಣಿ ನಡೆಸಿದೆ. ಪ್ರಕರಣದ ಗಂಭೀರವಾಗುತ್ತಿದ್ದಂತೆ ಅರಸೀಕೆರೆ ಪೊಲೀಸರು ಶಿವಾಜಿ ನಾಯ್ಕ್ ಬಂಧಿಸಿದ್ದಾರೆ.

ಘಟನೆ ವಿವರ ಹೂವಿನ ಹಡಗಲಿ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀಪುರದಲ್ಲಿ ಹಾರೆಯಿಂದ ಶರಣಾ ನಾಯ್ಕ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದ ನಿವಾಸಿ ಹಲ್ಲೆಗೊಳಗಾದ ವ್ಯಕ್ತಿ. ಗಾಯಾಳು ಶರಣ ನಾಯ್ಕ್ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡಾದಲ್ಲಿ ಘಟನೆ ನಡೆದಿದ್ದು, ಮನೆ ಜಾಗದ ಸಲುವಾಗಿ ಶರಣ ನಾಯ್ಕ್ ಅವರ ಮೇಲೆ ಹಲ್ಲೆ ನಡೆದಿದೆ. ಘಟನೆ ವೀಡಿಯೋದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತು. ಆರಂಭದಲ್ಲಿ ದೈಹಿಕವಾಗಿ ಹಲ್ಲೆ ನಡೆಸಿ, ವ್ಯಕ್ತಿಯನ್ನು ಸುಮ್ಮನಾಗಿಸಲು ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸಹೋದರ ಪಿ.ಟಿ.ಶಿವಾಜಿ ಯತ್ನಿಸುತ್ತಾರೆ. ಆ ವೇಳೆ ವೃದ್ಧನನ್ನು ನೆಲದ ಮೇಲೆ ಕೆಡವಿ, ಧಮ್ಕಿ ಹಾಕಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮನೆಯ ಹೆಣ್ಣು ಮಕ್ಕಳು ಅಡ್ಡ ಬಂದರೂ ಕೇರ್ ಮಾಡದೆ ಶಿವಾಜಿ ಆರ್ಭಟು ತೋರಿದ್ದಾರೆ. ಬಳಿಕ, ಅಷ್ಟೇ ಸಾಲದು ಅಂತಾ ಅಲ್ಲೆ ಇದ್ದ ಹಾರೆಯನ್ನು ತೆಗೆದುಕೊಂಡು ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ಸೋದರನಿಂದ ಶರಣಾ ನಾಯ್ಕ್ ಕುಟುಂಬದವರ ಮೇಲೆ ಮತ್ತೆ ಹಲ್ಲೆ ಆರೋಪ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು