AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ಹಲವು ತಿಂಗಳಿನಿಂದ ವೇತನ ಕೂಡ ಬಿಡುಗಡೆ ಮಾಡಿಲ್ಲ. ಗೌರವ ಧನವನ್ನು ನೀಡಬೇಕು ರಾಜ್ಯದಲ್ಲಿ 1,835 ಸರ್ಕಾರಿ ಪಿಯು ಅತಿಥಿ ಉಪನ್ಯಾಸಕರಿದ್ದಾರೆ. ಮೌಲ್ಯಮಾಪನ ಮುಗಿಯುವವರೆಗೂ ಮುಂದುವರಿಸಿ, ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ನೀಡಬೇಕು.

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 12, 2021 | 12:04 PM

Share

ಬೆಂಗಳೂರು; ಸರ್ಕಾರಿಯ ಪಿಯು ಅತಿಥಿ ಉಪನ್ಯಾಸಕರು ಬಹಿಷ್ಕಾರಕ್ಕೆ ನಿರ್ಧರಿಸಿದ್ದು, ಶಿಕ್ಷಣ ಇಲಾಖೆಗೆ ಶಾಕ್ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2021ರ ಏಪ್ರಿಲ್ 21ರಂದು ಸೇವೆಯಿಂದ ಅತಿಥಿ ಉಪನ್ಯಾಸಕರನ್ನು ಏಕಾಏಕಿ ಬಿಡುಗಡೆಗೊಳಿಸಲಾಗಿದೆ. ಸೇವೆಯಿಂದ ಬಿಡುಗಡೆಗೊಂಡ ಉಪನ್ಯಾಸಕರು ಅಧಿಕೃತವಾಗಿ ಮೌಲ್ಯಮಾಪನ ಮಾಡುವುದು ಹೇಗೆ? ಎಂದು ಪ್ರಶ್ನಿಸಿದೆ.

ಹಲವು ತಿಂಗಳಿನಿಂದ ವೇತನ ಕೂಡ ಬಿಡುಗಡೆ ಮಾಡಿಲ್ಲ. ಗೌರವ ಧನವನ್ನು ನೀಡಬೇಕು ರಾಜ್ಯದಲ್ಲಿ 1,835 ಸರ್ಕಾರಿ ಪಿಯು ಅತಿಥಿ ಉಪನ್ಯಾಸಕರಿದ್ದಾರೆ. ಮೌಲ್ಯಮಾಪನ ಮುಗಿಯುವವರೆಗೂ ಮುಂದುವರಿಸಿ, ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ನೀಡಬೇಕು. ಇಲ್ಲದಿದ್ದರೆ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ. ಬಹಿಷ್ಕಾರಕ್ಕೆ ಕಾರಣಗಳು 1. ಅತಿಥಿ ಉಪನ್ಯಾಸಕರನ್ನು ಏಪ್ರಿಲ್ 21 ರಿಂದ ಸೇವೆಯಿಂದ ಬಿಡುಗಡೆಗೊಳಿಸುವ ಮೂಲಕ ಪದವಿಪೂರ್ವ ಶಿಕ್ಚಣ ಇಲಾಖೆ ಅಮಾನವೀಯ ನಿರ್ಧಾರ ತೆಗೆದುಕೊಂಡಿದೆ. 2. ಕೊರೊನಾ ಸಂದರ್ಭದಲ್ಲಿ ಕಡಿಮೆ ವೇತನ ಮತ್ತು ಅಭದ್ರತೆಯಿಂದ ಭೋಧನೆ ಮಾಡಿದ್ದರೂ, ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ಮೊದಲೆ ಸೇವೆಯಿಂದ ಬಿಡುಗಡೆಗೊಳಿಸಿದೆ. 3. ನೈತಿಕ ಜವಾಬ್ದಾರಿಯನ್ನು ನಿರ್ವಹಿಸಲು ಅಡ್ಡವಾಗಿರುವ ಸರ್ಕಾರದ ಅನೈತಿಕ ನಿರ್ಧಾರವನ್ನು ಧಿಕ್ಕರಿಸುತ್ತೇವೆ ಎಂದು ಸಂಘ ತಿಳಿಸಿದೆ. ಹೀಗೆ 5 ರಿಂದ 6 ಕಾರಣಗಳನ್ನು ಇಟ್ಟುಕೊಂಡು ಸಂಘ ಬಹಿಷ್ಕಾರಕ್ಕೆ ಮುಂದಾಗಿದೆ.

ಪತ್ರಿಕಾ ಪ್ರಕಟಣೆ

ಇದನ್ನೂ ಓದಿ

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು

ಹೂಗಳಿಗೆ ಬೆಲೆಯಿಲ್ಲದೆ ಕಂಗಾಲಾದ ಚಿಕ್ಕಬಳ್ಳಾಪುರ ರೈತರು; ಮಾರುಕಟ್ಟೆಯಲ್ಲಿಯೇ ಹೂ ರಾಶಿ ಹಾಕಿ ಆಕ್ರೋಶ

(PU Guest Lecturers Association has decided to boycott)

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ