AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBGಗಾಗಿ ತಂದೆಯನ್ನೇ ಕೊಂದ; ಬೆಳಗಾವಿಯಲ್ಲಿ ಅಮಾನವೀಯ ಘಟನೆ

ಮೊಬೈಲ್​ನಲ್ಲಿ ಪಬ್​ ಜಿ ಗೇಮ್ ಆಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ನಡೆದಿದೆ. ಕಾಕತಿ ಗ್ರಾಮದ ನಿವಾಸಿ ರಘುವೀರ್(21) ತನ್ನ ತಂದೆ​ ಶಂಕರಪ್ಪನನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಪೊಲೀಸ್ ಇಲಾಖೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರಪ್ಪ, 3 ತಿಂಗಳ ಹಿಂದೆ ನಿವೃತ್ತಿ ಹೊಂದಿದ್ದರು. ಇತ್ತೀಚೆಗೆ ಆರೋಪಿ ರಘುವೀರ್ ನಿರಂತರವಾಗಿ ಮೊಬೈಲ್​ನಲ್ಲಿ ಪಬ್​ ಜಿ ಗೇಮ್ ಆಡುತ್ತಿದ್ದ. ಇಂಟರ್​ನೆಟ್​ ಮುಗಿದ ಕಾರಣ ಪಬ್​ ಜಿ ಆಡಲು ತಂದೆಯ […]

PUBGಗಾಗಿ ತಂದೆಯನ್ನೇ ಕೊಂದ; ಬೆಳಗಾವಿಯಲ್ಲಿ ಅಮಾನವೀಯ ಘಟನೆ
ಸಾಧು ಶ್ರೀನಾಥ್​
|

Updated on:Sep 09, 2019 | 1:59 PM

Share

ಮೊಬೈಲ್​ನಲ್ಲಿ ಪಬ್​ ಜಿ ಗೇಮ್ ಆಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ನಡೆದಿದೆ. ಕಾಕತಿ ಗ್ರಾಮದ ನಿವಾಸಿ ರಘುವೀರ್(21) ತನ್ನ ತಂದೆ​ ಶಂಕರಪ್ಪನನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಪೊಲೀಸ್ ಇಲಾಖೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಂಕರಪ್ಪ, 3 ತಿಂಗಳ ಹಿಂದೆ ನಿವೃತ್ತಿ ಹೊಂದಿದ್ದರು.

ಇತ್ತೀಚೆಗೆ ಆರೋಪಿ ರಘುವೀರ್ ನಿರಂತರವಾಗಿ ಮೊಬೈಲ್​ನಲ್ಲಿ ಪಬ್​ ಜಿ ಗೇಮ್ ಆಡುತ್ತಿದ್ದ. ಇಂಟರ್​ನೆಟ್​ ಮುಗಿದ ಕಾರಣ ಪಬ್​ ಜಿ ಆಡಲು ತಂದೆಯ ಬಳಿ ಹಣ ಕೇಳಿದ್ದ. ಮೊಬೈಲ್​ನಲ್ಲಿ ಹೆಚ್ಚು ಕಾಲಹರಣ ಮಾಡುತ್ತಿದ್ದ ಕಾರಣ ಪುತ್ರ ರಘುವೀರ್​ಗೆ ತಂದೆ ಶಂಕರಪ್ಪ ಬುದ್ಧಿವಾದ ಹೇಳಿದ್ದ. ಇದರಿಂದ ಕೋಪಗೊಂಡಿದ್ದ ರಘುವೀರ್, ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳನ್ನು ಒಡೆದುಹಾಕಿದ್ದ. ಬಳಿಕ ಪೊಲೀಸರು ಠಾಣೆಗೆ ಕರೆದೊಯ್ದು ತಂದೆಯ ಸಮ್ಮುಖದಲ್ಲೇ ಬುದ್ಧಿವಾದ ಹೇಳಿ ಕಳುಹಿಸಿದ್ದರು.

ಇಷ್ಟಾದರು ಕಳೆದ ರಾತ್ರಿ ಮತ್ತೆ ಪಬ್​ ಜಿ ಆಡುವುದರಲ್ಲಿ ಆರೋಪಿ ನಿರತನಾಗಿದ್ದ. ಈ ವೇಳೆ ತಂದೆ ಮೊಬೈಲ್ ಕಿತ್ತುಕೊಂಡು ಬೈದಿದ್ದರು. ಇದರಿಂದ ಕುಪಿತಗೊಂಡಿದ್ದ ರಘುವೀರ್​,  ತಂದೆಯ ಕೈಕಾಲು ಹಾಗೂ ಕುತ್ತಿಗೆ ಭಾಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆಗೈದು ಕ್ರೂರತೆ ಮೆರೆದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಕಾಕತಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕೇಸ್​ ದಾಖಲಿಸಿದ್ದಾರೆ.

Published On - 1:18 pm, Mon, 9 September 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ