AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಸೇಜ್​ ಇದ್ದರಷ್ಟೇ ಕೊರೊನಾ ಲಸಿಕೆ: 50 ವರ್ಷ ಮೇಲ್ಪಟ್ಟವರ ಮಾಹಿತಿ ಸಂಗ್ರಹಕ್ಕೆ ಮುಂದಾದ ಬಿಬಿಎಂಪಿ

ಕೊರೊನಾ ಲಸಿಕೆಗೆ ಸಂಬಂಧಿಸಿದ ವೆಬ್​ಸೈಟ್​ನಿಂದ ಜನರ ಮೊಬೈಲ್​ ನಂಬರ್​ಗೆ ಲಸಿಕೆ ಸ್ವೀಕರಿಸುವಂತೆ ಬಿಬಿಎಂಪಿ ವತಿಯಿಂದ ಸಂದೇಶ ಹೋಗಲಿದೆ. ಆದರೆ, ಸಾರ್ವಜನಿಕರು ವೆಬ್​ಸೈಟ್​ನಲ್ಲಿ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ.

ಮೆಸೇಜ್​ ಇದ್ದರಷ್ಟೇ ಕೊರೊನಾ ಲಸಿಕೆ: 50 ವರ್ಷ ಮೇಲ್ಪಟ್ಟವರ ಮಾಹಿತಿ ಸಂಗ್ರಹಕ್ಕೆ ಮುಂದಾದ ಬಿಬಿಎಂಪಿ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Jan 06, 2021 | 2:14 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆಗಳೂ ಆಗಿವೆ. ಸರ್ಕಾರದಿಂದ ಆದೇಶ ಬಂದ ತಕ್ಷಣವೇ ಲಸಿಕೆ ನೀಡುವ ಕಾರ್ಯಕ್ರಮ ಶುರುವಾಗಲಿದೆ. ಆದರೆ, ಸಾರ್ವಜನಿಕರೆಲ್ಲರಿಗೂ ಏಕಕಾಲಕ್ಕೆ ಲಸಿಕೆ ವಿತರಣೆ ಆಗುವುದಿಲ್ಲ. ಬದಲಾಗಿ, ಯಾರಿಗೆ ಬಿಬಿಎಂಪಿ ವತಿಯಿಂದ ಮೆಸೇಜ್​ ಹೋಗಿರುತ್ತದೋ ಅವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಬಿಬಿಎಂಪಿ ಉನ್ನತ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ವೆಬ್​ಸೈಟ್​ನಿಂದ ಜನರ ಮೊಬೈಲ್​ ನಂಬರ್​ಗೆ ಲಸಿಕೆ ಸ್ವೀಕರಿಸುವಂತೆ ಸಂದೇಶ ಹೋಗಲಿದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಗಳು ಮತದಾರರ ಪಟ್ಟಿ ಆಧಾರದ ಮೇಲೆ 50 ವರ್ಷ ಮೇಲ್ಪಟ್ಟವರ ಮಾಹಿತಿ ಕಲೆ ಹಾಕಲಿದ್ದಾರೆ.

ನಂತರ ಅವರ ಮೊಬೈಲ್​ ನಂಬರ್ ಪಡೆದು ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಮಾಡಲಾಗುವುದು. ಆ ನಂಬರ್​ಗಳಿಗೆ ಕೊರೊನಾ ಲಸಿಕೆ ಯಾವ ಜಾಗದಲ್ಲಿ, ಯಾವ ಸಮಯದಲ್ಲಿ ವಿತರಣೆ ಆಗಲಿದೆ ಎಂಬ ವಿವರಗಳನ್ನು ರವಾನಿಸಲಾಗುವುದು. ಆದರೆ, ಸಾರ್ವಜನಿಕರು ವೆಬ್​ಸೈಟ್​ನಲ್ಲಿ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಲಸಿಕೆ ಹಂಚಿಕೆಗೆ ಸಿದ್ಧವಾಗಿರುವ ಬಿಬಿಎಂಪಿ, ಮೊದಲ ಹಂತದಲ್ಲಿ 1ಲಕ್ಷದ 60 ಸಾವಿರ ಕೊರೊನಾ ಹೆಲ್ತ್ ವಾರಿಯರ್ಸ್​ಗೆ ಲಸಿಕೆ ವಿತರಿಸಲಿದೆ. 2ನೇ ಹಂತದಲ್ಲಿ ಪೊಲೀಸ್, ಹೋಮ್ ಗಾರ್ಡ್, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಕೊರೊನಾ ಫ್ರಂಟ್​ಲೈನ್ ವಾರಿಯರ್ಸ್​ಗೆ ನೀಡಲಾಗುವುದು ಮತ್ತು 3ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ ವಿತರಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ