AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಸೇಜ್​ ಇದ್ದರಷ್ಟೇ ಕೊರೊನಾ ಲಸಿಕೆ: 50 ವರ್ಷ ಮೇಲ್ಪಟ್ಟವರ ಮಾಹಿತಿ ಸಂಗ್ರಹಕ್ಕೆ ಮುಂದಾದ ಬಿಬಿಎಂಪಿ

ಕೊರೊನಾ ಲಸಿಕೆಗೆ ಸಂಬಂಧಿಸಿದ ವೆಬ್​ಸೈಟ್​ನಿಂದ ಜನರ ಮೊಬೈಲ್​ ನಂಬರ್​ಗೆ ಲಸಿಕೆ ಸ್ವೀಕರಿಸುವಂತೆ ಬಿಬಿಎಂಪಿ ವತಿಯಿಂದ ಸಂದೇಶ ಹೋಗಲಿದೆ. ಆದರೆ, ಸಾರ್ವಜನಿಕರು ವೆಬ್​ಸೈಟ್​ನಲ್ಲಿ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ.

ಮೆಸೇಜ್​ ಇದ್ದರಷ್ಟೇ ಕೊರೊನಾ ಲಸಿಕೆ: 50 ವರ್ಷ ಮೇಲ್ಪಟ್ಟವರ ಮಾಹಿತಿ ಸಂಗ್ರಹಕ್ಕೆ ಮುಂದಾದ ಬಿಬಿಎಂಪಿ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Jan 06, 2021 | 2:14 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆಗಳೂ ಆಗಿವೆ. ಸರ್ಕಾರದಿಂದ ಆದೇಶ ಬಂದ ತಕ್ಷಣವೇ ಲಸಿಕೆ ನೀಡುವ ಕಾರ್ಯಕ್ರಮ ಶುರುವಾಗಲಿದೆ. ಆದರೆ, ಸಾರ್ವಜನಿಕರೆಲ್ಲರಿಗೂ ಏಕಕಾಲಕ್ಕೆ ಲಸಿಕೆ ವಿತರಣೆ ಆಗುವುದಿಲ್ಲ. ಬದಲಾಗಿ, ಯಾರಿಗೆ ಬಿಬಿಎಂಪಿ ವತಿಯಿಂದ ಮೆಸೇಜ್​ ಹೋಗಿರುತ್ತದೋ ಅವರಿಗೆ ಮಾತ್ರ ಲಸಿಕೆ ನೀಡಲಾಗುವುದು ಎಂದು ಬಿಬಿಎಂಪಿ ಉನ್ನತ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ.

ಕೊರೊನಾ ಲಸಿಕೆಗೆ ಸಂಬಂಧಿಸಿದ ವೆಬ್​ಸೈಟ್​ನಿಂದ ಜನರ ಮೊಬೈಲ್​ ನಂಬರ್​ಗೆ ಲಸಿಕೆ ಸ್ವೀಕರಿಸುವಂತೆ ಸಂದೇಶ ಹೋಗಲಿದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿಗಳು ಮತದಾರರ ಪಟ್ಟಿ ಆಧಾರದ ಮೇಲೆ 50 ವರ್ಷ ಮೇಲ್ಪಟ್ಟವರ ಮಾಹಿತಿ ಕಲೆ ಹಾಕಲಿದ್ದಾರೆ.

ನಂತರ ಅವರ ಮೊಬೈಲ್​ ನಂಬರ್ ಪಡೆದು ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಮಾಡಲಾಗುವುದು. ಆ ನಂಬರ್​ಗಳಿಗೆ ಕೊರೊನಾ ಲಸಿಕೆ ಯಾವ ಜಾಗದಲ್ಲಿ, ಯಾವ ಸಮಯದಲ್ಲಿ ವಿತರಣೆ ಆಗಲಿದೆ ಎಂಬ ವಿವರಗಳನ್ನು ರವಾನಿಸಲಾಗುವುದು. ಆದರೆ, ಸಾರ್ವಜನಿಕರು ವೆಬ್​ಸೈಟ್​ನಲ್ಲಿ ನೇರವಾಗಿ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಲಸಿಕೆ ಹಂಚಿಕೆಗೆ ಸಿದ್ಧವಾಗಿರುವ ಬಿಬಿಎಂಪಿ, ಮೊದಲ ಹಂತದಲ್ಲಿ 1ಲಕ್ಷದ 60 ಸಾವಿರ ಕೊರೊನಾ ಹೆಲ್ತ್ ವಾರಿಯರ್ಸ್​ಗೆ ಲಸಿಕೆ ವಿತರಿಸಲಿದೆ. 2ನೇ ಹಂತದಲ್ಲಿ ಪೊಲೀಸ್, ಹೋಮ್ ಗಾರ್ಡ್, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಕೊರೊನಾ ಫ್ರಂಟ್​ಲೈನ್ ವಾರಿಯರ್ಸ್​ಗೆ ನೀಡಲಾಗುವುದು ಮತ್ತು 3ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ ವಿತರಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಕೊವಿಶೀಲ್ಡ್​ ಹೆಸರಿಗೆ ಆಕ್ಷೇಪ: ಸೆರಮ್​ ವಿರುದ್ಧ ಕೋರ್ಟ್​ ಮೊರೆ ಹೋದ ಕ್ಯೂಟಿಸ್​ ಬಯೋಟೆಕ್ ಕಂಪನಿ

Follow Us
Skanda
Skanda
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ