AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ
ರಿಪೀಟರ್ಸ್‌ಗೆ ಪರೀಕ್ಷೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿ ಪುನೀತ್
TV9 Web
| Edited By: ಆಯೇಷಾ ಬಾನು|

Updated on: Jun 06, 2021 | 10:50 AM

Share

ಬೆಂಗಳೂರು: ರಿಪೀಟರ್ಸ್‌ಗೆ ದ್ವಿತೀಯ ಪಿಯು ಪರೀಕ್ಷೆಗೆ ವಿರೋಧಿಸಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ ಹೊರ ಹಾಕಿದ್ದಾರೆ. ನಮಗೊಂದು ನ್ಯಾಯ, ಫ್ರೆಶರ್ಸ್‌ಗೊಂದು ನ್ಯಾಯಾನಾ? ಎಲ್ಲರದ್ದೂ ಜೀವವೇ ಅಲ್ಲವಾ ಶಿಕ್ಷಣ ಸಚಿವರೇ? ಕೊರೊನಾ ಇದ್ದರೂ ಕಳೆದ ವರ್ಷ ಪರೀಕ್ಷೆ ಬರೆದಿದ್ದೇವೆ. ಒಂದೋ ಎರಡೋ ವಿಷಯಗಳು ಪಾಸ್ ಆಗಿಲ್ಲ. ಹಾಗಂತ ಪರೀಕ್ಷೆ ಮಾಡಿ ನಮ್ಮ ಪ್ರಾಣ ತೆಗೆಯಬೇಡಿ ಎಂದು ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ರಿಪೀಟರ್ಸ್‌ಗೆ ಮಾತ್ರ ಎಕ್ಸಾಂ ದ್ವಿತೀಯ ಪಿಯುಸಿ ಫ್ರೆಶರ್ಸ್ಗೊಂದು ನ್ಯಾಯ, ರಿಪೀಟರ್ಸ್ಗೆ ಒಂದು ನ್ಯಾಯವಾಗಿದೆ. ಸರ್ಕಾರದ ನಿರ್ಧಾರದಿಂದ ದ್ವಿತೀಯ ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರುವಾಗಿದೆ. ದ್ವಿತೀಯ ಪಿಯುಸಿ ಫ್ರೆಶರ್ಸ್ಗೆ ಪರೀಕ್ಷೆ ರದ್ದಾದ್ರೆ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯೋಕೆ ರೆಡಿಯಾಗಬೇಕಿದೆ. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ರಿಪೀಟರ್ಸ್ಗೆ ಜುಲೈ ಕೊನೆಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಪುನರಾವರ್ತಿತ ಪರೀಕ್ಷೆ ನಡೆಯಲಿದೆ. ಕೊರೊನಾ 3ನೇ ಅಲೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ಬರುವ ಸಾಧ್ಯತೆ ಇದ್ರೂ ಸರ್ಕಾರ ಈ ರೀತಿಯ ನಿರ್ಧಾರಕ್ಕೆ ಮುಂದಾಗಿದೆ. 93 ಸಾವಿರ ವಿದ್ಯಾರ್ಥಿಗಳ ಜೀವದ ಜೊತೆ ಪಿಯು ಬೋರ್ಡ್ ಚೆಲ್ಲಾಟವಾಡುತ್ತಿದೆ. ಈ ವರ್ಷ 76,387 ಪುನರಾವರ್ತಿತ ಹಾಗೂ 17,477 ಖಾಸಗಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಪರೀಕ್ಷೆಗೆ ನೊಂದಣಿ ಮಾಡಲಾಗಿದೆ. ಸೋಂಕು ಹೆಚ್ಚಾದ್ರೆ ಪರೀಕ್ಷೆ ಹೇಗೆ ನಡೆಸಬೇಕು ಎಂಬ ಬಗ್ಗೆ ಪಿಯು ಬೋರ್ಡ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: Karnataka SSLC 2nd PUC Exam 2021: ಎಸ್ಎಸ್ಎಲ್ಸಿ, ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರು, ಶಿಕ್ಷಣ ಇಲಾಖೆಯಿಂದ ಮತ್ತೊಂದು ನಿರ್ಧಾರ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು