AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ
ರಿಪೀಟರ್ಸ್‌ಗೆ ಪರೀಕ್ಷೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿ ಪುನೀತ್
TV9 Web
| Updated By: ಆಯೇಷಾ ಬಾನು|

Updated on: Jun 06, 2021 | 10:50 AM

Share

ಬೆಂಗಳೂರು: ರಿಪೀಟರ್ಸ್‌ಗೆ ದ್ವಿತೀಯ ಪಿಯು ಪರೀಕ್ಷೆಗೆ ವಿರೋಧಿಸಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ ಹೊರ ಹಾಕಿದ್ದಾರೆ. ನಮಗೊಂದು ನ್ಯಾಯ, ಫ್ರೆಶರ್ಸ್‌ಗೊಂದು ನ್ಯಾಯಾನಾ? ಎಲ್ಲರದ್ದೂ ಜೀವವೇ ಅಲ್ಲವಾ ಶಿಕ್ಷಣ ಸಚಿವರೇ? ಕೊರೊನಾ ಇದ್ದರೂ ಕಳೆದ ವರ್ಷ ಪರೀಕ್ಷೆ ಬರೆದಿದ್ದೇವೆ. ಒಂದೋ ಎರಡೋ ವಿಷಯಗಳು ಪಾಸ್ ಆಗಿಲ್ಲ. ಹಾಗಂತ ಪರೀಕ್ಷೆ ಮಾಡಿ ನಮ್ಮ ಪ್ರಾಣ ತೆಗೆಯಬೇಡಿ ಎಂದು ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ರಿಪೀಟರ್ಸ್‌ಗೆ ಮಾತ್ರ ಎಕ್ಸಾಂ ದ್ವಿತೀಯ ಪಿಯುಸಿ ಫ್ರೆಶರ್ಸ್ಗೊಂದು ನ್ಯಾಯ, ರಿಪೀಟರ್ಸ್ಗೆ ಒಂದು ನ್ಯಾಯವಾಗಿದೆ. ಸರ್ಕಾರದ ನಿರ್ಧಾರದಿಂದ ದ್ವಿತೀಯ ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರುವಾಗಿದೆ. ದ್ವಿತೀಯ ಪಿಯುಸಿ ಫ್ರೆಶರ್ಸ್ಗೆ ಪರೀಕ್ಷೆ ರದ್ದಾದ್ರೆ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯೋಕೆ ರೆಡಿಯಾಗಬೇಕಿದೆ. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ರಿಪೀಟರ್ಸ್ಗೆ ಜುಲೈ ಕೊನೆಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಪುನರಾವರ್ತಿತ ಪರೀಕ್ಷೆ ನಡೆಯಲಿದೆ. ಕೊರೊನಾ 3ನೇ ಅಲೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ಬರುವ ಸಾಧ್ಯತೆ ಇದ್ರೂ ಸರ್ಕಾರ ಈ ರೀತಿಯ ನಿರ್ಧಾರಕ್ಕೆ ಮುಂದಾಗಿದೆ. 93 ಸಾವಿರ ವಿದ್ಯಾರ್ಥಿಗಳ ಜೀವದ ಜೊತೆ ಪಿಯು ಬೋರ್ಡ್ ಚೆಲ್ಲಾಟವಾಡುತ್ತಿದೆ. ಈ ವರ್ಷ 76,387 ಪುನರಾವರ್ತಿತ ಹಾಗೂ 17,477 ಖಾಸಗಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಪರೀಕ್ಷೆಗೆ ನೊಂದಣಿ ಮಾಡಲಾಗಿದೆ. ಸೋಂಕು ಹೆಚ್ಚಾದ್ರೆ ಪರೀಕ್ಷೆ ಹೇಗೆ ನಡೆಸಬೇಕು ಎಂಬ ಬಗ್ಗೆ ಪಿಯು ಬೋರ್ಡ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: Karnataka SSLC 2nd PUC Exam 2021: ಎಸ್ಎಸ್ಎಲ್ಸಿ, ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರು, ಶಿಕ್ಷಣ ಇಲಾಖೆಯಿಂದ ಮತ್ತೊಂದು ನಿರ್ಧಾರ

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?