AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ
ರಿಪೀಟರ್ಸ್‌ಗೆ ಪರೀಕ್ಷೆ ನೀಡುವ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿ ಪುನೀತ್
TV9 Web
| Edited By: ಆಯೇಷಾ ಬಾನು|

Updated on: Jun 06, 2021 | 10:50 AM

Share

ಬೆಂಗಳೂರು: ರಿಪೀಟರ್ಸ್‌ಗೆ ದ್ವಿತೀಯ ಪಿಯು ಪರೀಕ್ಷೆಗೆ ವಿರೋಧಿಸಿ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ ಹೊರ ಹಾಕಿದ್ದಾರೆ. ನಮಗೊಂದು ನ್ಯಾಯ, ಫ್ರೆಶರ್ಸ್‌ಗೊಂದು ನ್ಯಾಯಾನಾ? ಎಲ್ಲರದ್ದೂ ಜೀವವೇ ಅಲ್ಲವಾ ಶಿಕ್ಷಣ ಸಚಿವರೇ? ಕೊರೊನಾ ಇದ್ದರೂ ಕಳೆದ ವರ್ಷ ಪರೀಕ್ಷೆ ಬರೆದಿದ್ದೇವೆ. ಒಂದೋ ಎರಡೋ ವಿಷಯಗಳು ಪಾಸ್ ಆಗಿಲ್ಲ. ಹಾಗಂತ ಪರೀಕ್ಷೆ ಮಾಡಿ ನಮ್ಮ ಪ್ರಾಣ ತೆಗೆಯಬೇಡಿ ಎಂದು ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

18 ವರ್ಷದವರು ಮಾತ್ರ ನಿಮಗೆ ವೋಟ್ ಹಾಕುತ್ತಾರಾ? ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರ ಹೀಗಾಗಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ್ದೀರಾ? ಮನೆಯಲ್ಲಿ ವಯಸ್ಸಾದವರು ಇರ್ತಾರೆ, ಮನೆ ಮನೆಗೆ ಕೊರೊನಾ ಹಬ್ಬುವಂತೆ ಮಾಡ್ಬೇಡಿ. ವ್ಯಾಕ್ಸಿನ್ ಇಲ್ಲ ನಿಮ್ಗೂ ಗೊತ್ತು, ಆದ್ರೂ ಈಗ ಪರೀಕ್ಷೆ ಯಾಕೆ ಬೇಕು? ಪ್ರಾಣ ಹೋದ್ರೆ ನೀವು ಜವಾಬ್ದಾರಿ ಹೊತ್ತಿಕೊಳ್ತೀರಾ ಸಾರ್? ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಬೇಡಿ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.

ರಿಪೀಟರ್ಸ್‌ಗೆ ಮಾತ್ರ ಎಕ್ಸಾಂ ದ್ವಿತೀಯ ಪಿಯುಸಿ ಫ್ರೆಶರ್ಸ್ಗೊಂದು ನ್ಯಾಯ, ರಿಪೀಟರ್ಸ್ಗೆ ಒಂದು ನ್ಯಾಯವಾಗಿದೆ. ಸರ್ಕಾರದ ನಿರ್ಧಾರದಿಂದ ದ್ವಿತೀಯ ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರುವಾಗಿದೆ. ದ್ವಿತೀಯ ಪಿಯುಸಿ ಫ್ರೆಶರ್ಸ್ಗೆ ಪರೀಕ್ಷೆ ರದ್ದಾದ್ರೆ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯೋಕೆ ರೆಡಿಯಾಗಬೇಕಿದೆ. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ರಿಪೀಟರ್ಸ್ಗೆ ಜುಲೈ ಕೊನೆಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಪುನರಾವರ್ತಿತ ಪರೀಕ್ಷೆ ನಡೆಯಲಿದೆ. ಕೊರೊನಾ 3ನೇ ಅಲೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ಬರುವ ಸಾಧ್ಯತೆ ಇದ್ರೂ ಸರ್ಕಾರ ಈ ರೀತಿಯ ನಿರ್ಧಾರಕ್ಕೆ ಮುಂದಾಗಿದೆ. 93 ಸಾವಿರ ವಿದ್ಯಾರ್ಥಿಗಳ ಜೀವದ ಜೊತೆ ಪಿಯು ಬೋರ್ಡ್ ಚೆಲ್ಲಾಟವಾಡುತ್ತಿದೆ. ಈ ವರ್ಷ 76,387 ಪುನರಾವರ್ತಿತ ಹಾಗೂ 17,477 ಖಾಸಗಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯು ಪರೀಕ್ಷೆಗೆ ನೊಂದಣಿ ಮಾಡಲಾಗಿದೆ. ಸೋಂಕು ಹೆಚ್ಚಾದ್ರೆ ಪರೀಕ್ಷೆ ಹೇಗೆ ನಡೆಸಬೇಕು ಎಂಬ ಬಗ್ಗೆ ಪಿಯು ಬೋರ್ಡ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: Karnataka SSLC 2nd PUC Exam 2021: ಎಸ್ಎಸ್ಎಲ್ಸಿ, ಪಿಯುಸಿ ರಿಪೀಟರ್ಸ್ಗೆ ಟೆನ್ಷನ್ ಶುರು, ಶಿಕ್ಷಣ ಇಲಾಖೆಯಿಂದ ಮತ್ತೊಂದು ನಿರ್ಧಾರ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು