AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್‌ ಕುಮಾರ್‌ರಂತೆ ಪುನೀತ್‌ರದ್ದು ಆದರ್ಶ ವ್ಯಕ್ತಿತ್ವ; ಕೊವಿಡ್ ವೇಳೆ 50 ಲಕ್ಷ ರೂ ನೆರವು ನೀಡಿದ್ದರು: ಬಿಎಸ್ ಯಡಿಯೂರಪ್ಪ

ನಟ ಪುನೀತ್ ಸಿನಿಮಾಗಳನ್ನು ಎರಡೆರಡು ಬಾರಿ ನೋಡಿದ್ದೆ. ರಾಜ್‌ಕುಮಾರ್‌ರಂತೆ ಪುನೀತ್‌ರದ್ದು ಒಳ್ಳೆಯ ಆದರ್ಶ ವ್ಯಕ್ತಿತ್ವ ಬಡವರ ಬಗ್ಗೆ ಪುನೀತ್‌ ರಾಜ್​ಕುಮಾರ್​ ಕಾಳಜಿ ಹೊಂದಿದ್ದರು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ

ರಾಜ್‌ ಕುಮಾರ್‌ರಂತೆ ಪುನೀತ್‌ರದ್ದು ಆದರ್ಶ ವ್ಯಕ್ತಿತ್ವ; ಕೊವಿಡ್ ವೇಳೆ 50 ಲಕ್ಷ ರೂ ನೆರವು ನೀಡಿದ್ದರು: ಬಿಎಸ್ ಯಡಿಯೂರಪ್ಪ
ರಾಜ್‌ ಕುಮಾರ್‌ರಂತೆ ಪುನೀತ್‌ರದ್ದು ಆದರ್ಶ ವ್ಯಕ್ತಿತ್ವ; ಕೊವಿಡ್ ವೇಳೆ 50 ಲಕ್ಷ ರೂ ನೆರವು ನೀಡಿದ್ದರು: ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on: Oct 29, 2021 | 5:18 PM

Share

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ (46) ಇಂದು ಬೆಳಗ್ಗೆ ವಿಧಿವಶರಾದರು. ಅಕಾಲಿಕ ಮರಣವನ್ನಪ್ಪಿದ ಪುನೀತ್​ ಅವರಿಗೆ ನಾಡಿನ ಅನೇಕ ಹಿರಿಯರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರನ್ನು ಸ್ಮರಿಸಿ ತಮ್ಮ ಅನುಭವ, ಒಡನಾಟ ಹಂಚಿಕೊಂಡಿದ್ದಾರೆ. ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ಮರಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 50 ಲಕ್ಷ ರೂ. ನೆರವು ನೀಡಿದ್ದರು. ಚಿತ್ರರಂಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಬಂದಿದ್ದರು. ನಾನು ಸಿಎಂ ಆಗಿದ್ದಾಗ ಪುನೀತ್ 2 ಬಾರಿ ಭೇಟಿಯಾಗಿದ್ರು. ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪುನೀತ್​ಗೆ ಹೇಳಿದ್ದೆ. ನಟ ಪುನೀತ್‌ರನ್ನು ಕಳೆದುಕೊಂಡು ಕರುನಾಡು ಬಡವಾಗಿದೆ. ಪುನೀತ್ ನಿಧನದ ನೋವು ಭರಿಸುವ ಶಕ್ತಿ ದೇವರು ಅವರ ಕುಟುಂಬಸ್ಥರಿಗೆ ನೀಡಲಿ. ನಟ ಪುನೀತ್ ಸಿನಿಮಾಗಳನ್ನು ಎರಡೆರಡು ಬಾರಿ ನೋಡಿದ್ದೆ. ರಾಜ್‌ಕುಮಾರ್‌ರಂತೆ ಪುನೀತ್‌ರದ್ದು ಒಳ್ಳೆಯ ಆದರ್ಶ ವ್ಯಕ್ತಿತ್ವ ಬಡವರ ಬಗ್ಗೆ ಪುನೀತ್‌ ರಾಜ್​ಕುಮಾರ್​ ಕಾಳಜಿ ಹೊಂದಿದ್ದರು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇದಕ್ಕೂ ಮುನ್ನ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್​ ಮಾಡಿ ಹೀಗೆ ಸಂತಾಪ ಸಲ್ಲಿಸಿದ್ದಾರೆ:

ನಾಡಿನ ಜನಪ್ರಿಯ ಕಲಾವಿದ,ಡಾ.ರಾಜ್ ವಂಶದ ಕುಡಿ ಪುನೀತ್ ರಾಜಕುಮಾರ್ ಹಠಾತ್ ನಿಧನರಾದ ವಿಷಯ ದಿಗ್ಭ್ರಮೆ ಮೂಡಿಸಿದೆ. ಕಿರುವಯಸ್ಸಿನಲ್ಲೇ ಅವರು ನಮ್ಮನ್ನು ಅಗಲಿದ್ದು ತೀವ್ರ ಆಘಾತ ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ಆಘಾತವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಅಣ್ಣಾವ್ರ ಜೊತೆ ಬಾಲ ಕಲಾವಿದರಾಗಿ ಭಕ್ತ ಪ್ರಹ್ಲಾದ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಅವರ ಅಭಿನಯ, ಬೆಟ್ಟದ ಹೂವು, ನಟಸಾರ್ವಭೌಮ ಮೊದಲಾದ ಅನೇಕ ಯಶಸ್ವಿ ಚಿತ್ರಗಳ ಮೂಲಕ ಕನ್ನಡಿಗರ ಹೃದಯದಲ್ಲಿ ಚಿರಸ್ಥಾನ ಪಡೆದ ಅಭಿಮಾನಿಗಳ ಪ್ರೀತಿಯ ಅಪ್ಪು ಅಮರರಾಗಿಯೇ ಉಳಿಯಲಿದ್ದಾರೆ. ನಿಮ್ಮ ನೆನಪು ಚಿರಾಯು ಪುನೀತ್. ಓಂ ಶಾಂತಿ

(puneeth rajkumar death former chief minister BS Yediyurappa Condolence with tv9 kannada)

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ