AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಯಾತ್ರೆ ಮೂಲಕ ಅಪ್ಪು ಸಮಾಧಿ ನೋಡುವ ಹಂಬಲ: ದಾವಣಗೆರೆ ತಲುಪಿದ ದ್ರಾಕ್ಷಾಯಣಿ ಪಾಟೀಲ್

ದಾವಣಗೆರೆ ತಲುಪಿದ ದಾಕ್ಷಾಯಣಿ ಪಾಟೀಲ್​ ಅವರಿಗೆ ಪಾದಯಾತ್ರೆ ವೇಳೆ ಗಾಡಿಯಲ್ಲಿ ಪತಿ, ತಾಯಿ ಹಾಗೂ ಮೂರು ಮಕ್ಕಳು ಸಾಥ್ ನೀಡಿದ್ದಾರೆ. ಪಾದಯಾತ್ರೆ ವೇಳೆ ದಾಕ್ಷಾಯಣಿ ಅವರು ನೇತ್ರದಾನ, ರಕ್ತದಾನ ಹಾಗೂ ಪರೋಪಕಾರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಪಾದಯಾತ್ರೆ ಮೂಲಕ ಅಪ್ಪು ಸಮಾಧಿ ನೋಡುವ ಹಂಬಲ: ದಾವಣಗೆರೆ ತಲುಪಿದ ದ್ರಾಕ್ಷಾಯಣಿ ಪಾಟೀಲ್
ದಾಕ್ಷಾಯಣಿ ಅವರಿಗೆ ಅದ್ದೂರಿ ಸ್ವಾಗತ
TV9 Web
| Edited By: |

Updated on:Dec 15, 2021 | 8:20 AM

Share

ದಾವಣಗೆರೆ:  ಅ.29ರಂದು ನಿಧನರಾದ ಚಂದನವನದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನೆನಪು ಅಭಿಮಾನಿಗಳಲ್ಲಿ ಸದಾ ಹಸಿರು. ಪುನೀತ್ ಸಾವಿನ ನೋವಿನಿಂದ ಇಡೀ ಕರ್ನಾಟಕದ ಜನತೆ ಇನ್ನೂ ಹೊರಬಂದಿಲ್ಲ. ಅವರ ಹೆಸರಿನಲ್ಲಿ ಹಲವು ಸಮಾಜ ಸೇವಾ ಕಾರ್ಯಗಳು ಮುಂದುವರೆದಿವೆ. ಇದರ ನಡುವೆ ಅಪ್ಪು ಅಭಿಮಾನಿ ಕುಟುಂಬದ ಧಾರವಾಡದ ಮನಗುಂಡಿಯ ದ್ರಾಕ್ಷಾಯಣಿ ಪಾಟೀಲ್ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಲು ಪಾದಯಾತ್ರೆ ಆರಂಭಿಸಿದ್ದರು. ಇದೀಗ ಅವರು ದಾವಣಗೆರೆ ತಲುಪಿದ್ದಾರೆ.  ದಾಕ್ಷಾಯಣಿ ಹಾಗೂ ಅವರ ಕುಟುಂಬ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಅವರನ್ನು ಕಣ್ಣಾರೆ ನೋಡುವ ಬಯಕೆ ಹೊಂದಿದ್ದರು. ಆದರೆ ಅಪ್ಪು ಅಕಾಲಿಕ ಮರಣದಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಸಮಾಧಿ ಇರುವ ಜಾಗಕ್ಕೆ ಧಾರವಾಡದ ಮನಗುಂಡಿಯಿಂದ ಪಾದಯಾತ್ರೆ ಮೂಲಕ ತಲುಪಲು ನಿರ್ಧರಿಸಿ ಹೊರಟಿದ್ದಾರೆ. ಇಂದು (ಡಿ.5) ಅವರು ದಾವಣಗೆರೆ ತಲುಪಿದ್ದಾರೆ.

ದಾವಣಗೆರೆ ತಲುಪಿದ ದಾಕ್ಷಾಯಣಿ ಪಾಟೀಲ್​ ಅವರಿಗೆ ಪಾದಯಾತ್ರೆ ವೇಳೆ ಗಾಡಿಯಲ್ಲಿ ಪತಿ, ತಾಯಿ ಹಾಗೂ ಮೂರು ಮಕ್ಕಳು ಸಾಥ್ ನೀಡಿದ್ದಾರೆ. ಪಾದಯಾತ್ರೆ ವೇಳೆ ದಾಕ್ಷಾಯಣಿ ಅವರು ನೇತ್ರದಾನ, ರಕ್ತದಾನ ಹಾಗೂ ಪರೋಪಕಾರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕಾರ್ಯಗಳಿಂದ ಪ್ರೇರಿತರಾಗಿರುವ ದಾಕ್ಷಾಯಣಿ ಹಾಗೂ ಕುಟುಂಬ ಪುನೀತ್ ಅವರ ಆದರ್ಶಗಳನ್ನು ಪಾಲನೆ ಮಾಡುತ್ತಾ, ಸಮಾಜದ ಒಳಿತಿಗೆ ಪರೋಪಕಾರದ ಬಗ್ಗೆ ಪಾದಯಾತ್ರೆ ವೇಳೆ ಅರಿವು ಮೂಡಿಸುತ್ತಿದ್ದಾರೆ.

ಅದ್ದೂರಿ ಸ್ವಾಗತ ಮನಗುಂಡಿಯಿಂದ ಬೆಂಗಳೂರಿಗೆ 500 ಕಿಲೋಮೀಟರ್ ದಾಕ್ಷಾಯಣಿ ಪಾಟೀಲ್ ಪಾದಯಾತ್ರೆ ನಡೆಸುತ್ತಿದ್ದಾರೆ. ಇದೇ ವೇಳೆ ದಾವಣಗೆರೆ ಆಗಮಿಸಿದ ದಾಕ್ಷಾಯಿಣಿ ಅವರಿಗೆ ಡಾ. ರಾಜ್ ಹಾಗೂ ಶಿವರಾಜಕುಮಾರ್​ ಸಂಘಟನೆಗಳು ಅದ್ದೂರಿ ಸ್ವಾಗತ ಕೋರಿವೆ. ಈ ಮೂಲಕ ದಾಕ್ಷಾಯಿಣಿ ಪಾಟೀಲ್ ಅವರು ಅಪ್ಪು ಮೇಲಿರುವ ಅಭಿಮಾನಕ್ಕೆ ಮಾಡುತ್ತಿರುವ ಪಾದಯಾತ್ರೆಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ. ದಾವಣಗೆರೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರಿಗೆ ದಾಕ್ಷಾಯಣಿ ಪಾಟೀಲ್ ಪಾದಯಾತ್ರೆ ಮುಂದುವರೆಸಿದ್ದಾರೆ.

30 ವರ್ಷ ವಯಸ್ಸಿನ ದಾಕ್ಷಾಯಣಿ ಪಾಟೀಲ್ ಉತ್ತಮ ಓಟಗಾರ್ತಿ ಕೂಡ ಹೌದು. ಪತಿ ಉಮೇಶ್ ಅವರ ಸಹಕಾರ ಹಾಗೂ ಕುಟುಂಬದ ಬೆಂಬಲೊಂದಿಗೆ ದಿನಕ್ಕೆ 40 ಕಿಮೀ ಪ್ರಯಾಣಿಸುವ ಗುರಿಹೊತ್ತ ದಾಕ್ಷಾಯಿಣಿ ದಾವಣಗೆರೆ ಮೂಲಕ ಬಂಗಳೂರಿಗೆ ಧಾವಿಸುತ್ತಿದ್ದಾರೆ. ಹೀಗಾಗಿ ತಮ್ಮ ಅಭಿಮಾನವನ್ನು ಪಾದಯಾತ್ರೆ ಮೂಲಕ ತೋರಿಸಿ ಅಗಲಿದ ಅಪ್ಪುವಿಗೆ ಪ್ರೀತಿಯ ನಮನ ಸಲ್ಲಿಸಲು ತೆರಳುತ್ತಿದ್ದಾರೆ. ಜತೆಗೆ ಪುನೀತ್ ಅವರ ಮನೆಯವರನ್ನು ಭೇಟಿಯಾಗುವ ಅಭಿಲಾಷೆ ಹೊಂದಿದ್ದಾರೆ.

ಇದನ್ನೂ ಓದಿ:

BWF World Tour Finals: ಪ್ರಶಸ್ತಿ ಸುತ್ತಿನಲ್ಲಿ ಮತ್ತೊಮ್ಮೆ ಎಡವಿದ ಸಿಂಧು; ಕೊರಿಯಾ ಆಟಗಾರ್ತಿಗೆ ಗೆಲುವಿನ ಕಿರೀಟ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೊಕ್ಕರೆ ಇದ್ದ ಹಾಗೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ

Published On - 2:17 pm, Sun, 5 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?