AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ

ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ನಿಂದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ವಿಷಯದಲ್ಲಿ ತರಬೇತಿ ನೀಡಲಾಗಿದೆ.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ
2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Oct 26, 2023 | 5:46 PM

Share

ಬೆಂಗಳೂರು, ಅಕ್ಟೋಬರ್ 26: ದಿವಂಗತ ನಟ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿರುವ ಉಪಗ್ರಹವನ್ನು (Puneeth satellite) 2024ರ ಮಾರ್ಚ್​​ನಲ್ಲಿ ಉಡಾವಣೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ನಿರ್ಮಿಸಿರುವ ಪುನೀತ್‌ ಉಪಗ್ರಹ ಉಡಾವಣೆಗೆ ಮಾರ್ಚ್‌ 2024 ರ ತಿಂಗಳಲ್ಲಿ ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋ ಅವಕಾಶ ನೀಡುವ ಸಾಧ್ಯತೆ ಇದ್ದು, ಇಸ್ರೋ ಜೊತೆ ಸತತ ಸಂಪರ್ಕದಲ್ಲಿರುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್‌ ಭೋಸರಾಜು (NS Boseraju) ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ಪುನೀತ್‌ ಉಪಗ್ರಹ ಯೋಜನೆಯ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ. ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಬಾಹ್ಯಾಕಾಶ ಶಿಕ್ಷಣ ಕ್ರಾಂತಿ: ಮುಂದಿನ ದಶಕದಲ್ಲಿ ಬಾಹ್ಯಾಕಾಶ ಉದ್ಯಮದಲ್ಲಿ ಗಣನೀಯ ಬೆಳವಣಿಗೆ ಸಾಧ್ಯತೆ

ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ನಿಂದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ವಿಷಯದಲ್ಲಿ ತರಬೇತಿ ನೀಡಲಾಗಿದೆ. ಪುನೀತ್‌ ಸ್ಯಾಟಲೈಟ್‌ನ ಮೂಲಕ ಕಳುಹಿಸಲಾಗುವ ಸೆಕಂಡರಿ ಪ್ಲೇಲೋಡ್​​ಗಳನ್ನು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸುತ್ತಿದ್ದಾರೆ. ಸದ್ಯ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ನ ಪ್ರೊಟೋಟೈಪ್‌ ಇವಾಲ್ಯೂವೇಷನ್‌ ಬೋರ್ಡ್ಸ್‌ಗಳ ವ್ಯಾಲಿಡೇಷನ್‌ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಐಟಿಸಿಎ ತಂಡದಿಂದ ಮಾರ್ಚ್‌ 2024 ರಲ್ಲಿ ಪುನೀತ್‌ ಸ್ಯಾಟ್‌ ಉಡಾವಣೆ ಸಾಧ್ಯ ಎನ್ನುವ ಮಾಹಿತಿ ದೊರೆತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ